ಕಲಬುರಗಿ: ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ 2022-23ನೇ ಸಾಲಿನ ಹತ್ತನೇ/ಪಿ.ಯು.ಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿದ ಅಲೆಮಾರಿ ಹೆಳವ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ಉದ್ಘಾಟಿಸಿ ಮಾತನಾಡಿ ಅತಿ ಹಿಂದುಳಿದ ಅಲೆಮಾರಿ ಹೆಳವ ಸಮಾಜವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸವುದು ಅವಶ್ಯವಾಗಿದೆ. ಆಸ್ತಿಗಾಗಿ ದುಡಿಯುವುದಕ್ಕಿಂತ ಉತ್ತಮವಾದ ಶಿಕ್ಷಣ ಮತ್ತು ಸಂಸ್ಕಾರವನ್ನು ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಪರಿವರ್ತಿಸಬೇಕು ಎಂದರು. ನಗರದಲ್ಲಿ ಹೆಳವ ಸಮಾಜಕ್ಕೆ ಸಮುದಾಯ ಭವನ ನಿರ್ಮಿಸಲು ಸಹಾಯ ಮಾಡುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ ಅಲೆಮಾರಿ ಹೆಳವ ಸಮಾಜ ಅತಿ ಸಣ್ಣ ಹಾಗೂ ಕಡುಬಡತನದಿಂದ ಕೂಡಿದ್ದರೂ, ಅಲೆಮಾರಿ ಮಕ್ಕಳ ಸಾಧನೆ ಶ್ಲಾಘನೀಯವಾದದ್ದು ಎಂದರು. ಇದೇ ಸಂದರ್ಭದಲ್ಲಿ ಸಮಾಜದ ಏಳಿಗೆಗಾಗಿ 5ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದರು.
ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಪೂಜ್ಯ ಶ್ರೀ ಶಂಕರಲಿಂಗ ಮಹಾಸ್ವಾಮಿಗಳು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಸುನಿಲಕುಮಾರ ಒಂಟಿ, ಡಾ. ಕರಿಬಸಮ್ಮ ಹಾಗೂ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ವಹಿಸಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ತಾಲೂಕು ಕಲ್ಯಾಣಾಧಿಕಾರಿ ಅಧಿಕಾರ ಡಾ. ಕರಿಬಸಮ್ಮ ಅವರು ಪ್ರತಿಭಾವಂತ ಮಕ್ಕಳಿಗೆ ನೋಟ ಪುಸ್ತಕ ನೀಡಿದರು.
ಸಮಾರಂಭದಲ್ಲಿ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಬಿ.ಹೆಚ್, ಎಚ್.ಎನ್. ಗೋಗಿ, ಶ್ರೀಮಂತ ಸೌಂದರ್ಗಿ, ಜಿಲ್ಲಾಧ್ಯಕ್ಷ ಸಾಯಬಣ್ಣ ಹೆಳವರ, ಬಸವರಾಜ ಎಸ್. ಹೆಳವರ, ಮಲ್ಲಿಕಾರ್ಜುನ ಹೆಳವರ ಹೆಬ್ಬಾಳ, ಗುರಲಿಂಗ ಹೆಳವರ, ಹಣಮಂತ್ರಾಯ ಹಳಿಸಗರ, ರಾಘು ಮಾಸ್ತಾರ, ಮಲ್ಲಪ್ಪ ತಳ್ಳಳ್ಳಿ, ಪ್ರಭು ಯಾಳಗಿ, ಅಶೋಕ ಹೆಳವರ, ತಿಪ್ಪಣ್ಣ ಹೆಳವರ, ಗಂಗಾಧರ ಹೆಳವರ, ರಾಜು ಹೆಳವರ, ಕುಮಾರ ಯಾದವ, ಕನಕರೆಡ್ಡಿ ಯಾದವ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…