ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಶೋಷಿತರ ಪರ ಹೋರಾಟದ ಒಕ್ಕೂಟ ಮನವಿ

ಸುರಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟ ದಿಂದ ನಗರದ ಬಸ್ ನಿಲ್ದಾಣದ ಬಳಿಯ ಡಾ:ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ತಾಲೂಕಿನ ವಾಗಣಗೇರ ಸೇರಿದಂತೆ ವಿವಿಧ ಗ್ರಾಮ ಪಂಚಾಯತಿಗಳಲ್ಲಿನ ಉದ್ಯೋಗ ಖಾತ್ರಿ ಕಾಮಗಾರಿಗಳಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆ ನಡೆಸಬೇಕು,ಅರಣ್ಯ ಇಲಾಖೆಯಿಂದ ಮಾಡಿರುವ ಉದ್ಯೋಗ ಖಾತ್ರಿ ಕಾಮಗಾರಿಗಳ ಪರಿಶೀಲನೆ ಮಾಡಬೇಕು,ಉದ್ಯೋಗ ಖಾತ್ರಿ ಯೋಜನೆಯಡಿ ರೇಷ್ಮೆ ಇಲಾಕೆ,ಕೃಷಿ ಇಲಾಖೆ, ಪಂಚಾಯತ್ ರಾಜ್ ಇಲಾಖೆಗಳು 2021 ರಿಂದ 23ರ ವರೆಗೆ ಮಾಡಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ಮಾಡಬೇಕು,ಸಮಾಜ ಕಲ್ಯಾಣ ಇಲಾಖೆ,ಪರಿಶಿಷ್ಟ ಪಂಗಡಗಳ ಇಲಾಖೆ,ಹಿಂದುಳಿದ ವರ್ಗಗಳ ಇಲಾಖೆಯಿಂದ ಮಂಜೂರಾಗಿರುವ ಸಮುದಾಯ ಭವನಗಳ ನಿರ್ಮಾಣದ ತನಿಖೆ ಮಾಡಬೇಕು.

ತಾಲೂಕಿನಲ್ಲಿ ನಿರ್ಮಿಸಿರುವ ವಾಲ್ಮೀಕಿ ಭವನಗಳನ್ನು ಲ್ಯಾಂಡ್ ಆರ್ಮಿ ಇಲಾಖೆಯವರು ಇನ್ನೂ ನಿರ್ಮಾಣ ಮಾಡಿಲ್ಲ,ಆದರೆ ಅನುದಾನ ಲೂಟಿಯಾಗಿದೆ ತನಿಖೆ ಮಾಡಬೇಕು,ಗ್ರಾಮ ಒನ್,ಕರ್ನಾಟಕ ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದು ಕಡಿವಾಣ ಹಾಕಬೇಕು,ಜೆಸ್ಕಾಂ ಇಲಾಖೆ ಉಪ ವಿಭಾಗ ನಿರಂತರ ಜ್ಯೋತಿ,ಭಾಗ್ಯ ಜ್ಯೋತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆಯ ತನಿಖೆ ನಡೆಸಬೇಕು ಮತ್ತು ಮತಕ್ಷೇತ್ರದ ಕೈಗಾರಿಕೆ ಇಲಾಖೆ ವ್ಯಾಪ್ತಿಯ ಪಿ.ಎಮ್.ಇ.ಜಿ.ಪಿ ಇನ್ನಿತರ ಸ್ಕೀಮ್‍ಗಳ ಸಾಲ ನೀಡಿದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದರು.

ನಂತರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಕಚೇರಿ ಕಂದಾಯ ನಿರೀಕ್ಷಕರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮೌನೇಶ,ಜಿಲ್ಲಾ ಕಾರ್ಯದರ್ಶಿ ದವಲಸಾಬ್,ಜಿಲ್ಲಾ ಕಾರ್ಯಾಧ್ಯಕ್ಷ ರಮೇಶಗೌಡ,ದೇವಪ್ಪ ರತ್ತಾಳ,ನಿಂಗಪ್ಪ ಸೇರಿದಂತೆ ಅನೇಕರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420