ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಶ್ರಮಿಸಿ: ಇಒ ಕಟ್ಟಿಮನಿ

ಆಳಂದ; ಅಂಗನವಾಡಿ ಮಕ್ಕಳಿಗೆ ಮತ್ತು ಗರ್ಭೀಣಿಯರಿಗೆ ಹಾಗೂ ಮಕ್ಕಳ ತಾಯಂದಿರಿಗೆ ಸರ್ಕಾರ ನೀಡುತ್ತಿರುವ ಪೌಷ್ಠಿಕ ಆಹಾರ ಸಾಮಗ್ರಿಯನ್ನು ಸಮರ್ಪವಾಗಿ ಒದಗಿಸುವ ಮೂಲಕ ಮಕ್ಕಳಲ್ಲಿನ ಹಾಗೂ ಗರ್ಭಿಣಿಯರಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಅವರು ಹೇಳಿದರು.

ತಾಲೂಕಿನ ಖಜೂರಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳಿಗೆ ಸಕಾಲಕ್ಕೆ ಆಹಾರ ಸಾಮಗ್ರಿ ಪೂರೈಕೆ ಆಗಬೇಕು. ಪೂರೈಕೆಯಾದ ಸಾಮಗ್ರಿಯನ್ನು ಸಕಾಲಕ್ಕೆ ವಿತರಣೆ ಕೈಗೊಳ್ಳಬೇಕು. ಯಾವ ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲೂ ಸಹ ಬಡವರು ಅಪೌಷ್ಠಿಕ ಕೊರತೆಯಿಂದ ಬಳಲಬಾರದು ಎಂಬ ಸರ್ಕಾರದ ಉದ್ದೇಶವನ್ನು ಈಡೇರಿಸಬೇಕು ಎಂದು ಹೇಳಿದ ಅವರು, ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಸೌಲಭ್ಯಗಳ ಬೇಡಿಕೆಯನ್ನು ಗ್ರಾಪಂಗೆ ಕೋರಿದರೆ ಆದ್ಯತೆಯ ಮೇಲೆ ಈಡೇರಿಸಲಾಗುವುದು. ಸರ್ಕಾರಿ ಯೋಜನೆಗಳ ಸಂಬಂಧಿತ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಡುವೆ ಸಮನ್ವಯತೆ ಸಾಧಿಸಿಕೊಂಡು ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಗ್ರಾಪಂ ಅಧ್ಯಕ್ಷೆ ಸುನಿತಾ ಮಗರೆ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಗುರುಬಸಪ್ಪ ಢಗೆ, ಮಾರುತಿ ಶಿವಬಸಗೊಳ, ಪಿಡಿಒ ಪಾರ್ವತಿ ಪೂಜಾರಿ, ಮೇಲ್ವಿಚಾರಕಿ ಕಲಾವತಿ, ಅಂಗನವಾಡಿ ಕಾರ್ಯಕರ್ತೆ ಸಿದ್ಧಮ್ಮ ಚಂಗಳೆ, ಶಾಂತಬಾಯಿ ಭದ್ರೆ, ಮಲ್ಲಮ್ಮ ಕಲಶೆಟ್ಟಿ, ಸಿದ್ದಮ್ಮ ಸುತಾರ, ನಾಗಮ್ಮ ಕಲಶೆಟ್ಟಿ, ಎನ್‍ಆರ್‍ಎಲ್‍ಎಂ ಸ್ತ್ರೀ ಶಕ್ತಿ ಸಂಘದ ಅಧಕ್ಷೆ ಲಕ್ಷ್ಮೀ ಪೂಜಾರಿ, ಕಿರಣಾ ಬಂಡೆ ಸೇರಿದಂತೆ ಗರ್ಭೀಣಿಯರು, ಮಕ್ಕಳ ತಾಯಂದಿರು ಗ್ರಾಪಂ ಸದಸ್ಯರು ಫಲಾನುಭವಿಗಳು ಇನ್ನಿತರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420