ಬಸವೇಶ್ವರ ಪ್ರತಿಮೆ ಅವಮಾನ ಖಂಡಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಕಲಬುರಗಿ: ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರ ಭಾವಚಿತ್ರ ವಿರೂಪ ಗೊಳಿಸಿ ಅವಮಾನ ಮಾಡಿ ಅನೇಕ ದಿನಗಳು ಕಳೆದರೂ ಆರೋಪಿಗಳನ್ನು ಬಂಧಿಸದೆ ರಾಜಕೀಯ ಹೇಳಿಕೆಗಳ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಲಾಗುತ್ತಿದೆ ಇದನ್ನು ಬಿಟ್ಟು ಶೀಘ್ರವೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಟಕಲನ ಶ್ರೀ ಸಿದ್ದರಾಮ ಮಹಾಸ್ವಾಮೀಜಿ ಆಗ್ರಹಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವೀರಶೈವ ಲಿಂಗಾಯತ್ ಮಹಾ ವೇದಿಕೆ ಕಾಳಗಿ ತಾಲೂಕು ವತಿಯಿಂದ ಹಲ್ಕಟ್ಟಿ ಗ್ರಾಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಚಿಂಚೋಳಿ ಕಲಬುರ್ಗಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ವಿಶ್ವಗುರು ಬಸವೇಶ್ವರರು ಒಂದೇ ಸಮಾಜಕ್ಕೆ ಸೀಮಿತವಲ್ಲ ಅವರು ಇಡೀ ವಿಶ್ವಕ್ಕೆ ಸೇರಿದವರು ಇಂಥವರನ್ನು ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆವಿಧಿಸಬೇಕೆಂದು ಎಂದು ಒತ್ತಾಯಿಸಿದರು.

ಭರತನೂರ ಪೂಜ್ಯರಾದ ಚಿಕ್ಕಗುರು ನಂಜೇಶ್ವರ ಮಹಾಸ್ವಾಮಿಜಿ ಮಾತನಾಡಿ ಇಡೀ ಜಗತ್ತಿಗೆ ತತ್ವಗಳನ್ನು ಸಾರಿದ ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ ಮಾಡಿರುವುದು ಖಂಡನೀಯವಾಗಿದೆ ಪೆÇಲೀಸರು ಕೂಡಲೇ ಅಪರಾಧಿಗಳನ್ನು ಬಂಧಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸೂಗುರು (ಕೆ) ಪೂಜ್ಯರು ಡಾಕ್ಟರ್ ಚನ್ನರುದ್ರಮನಿ ಶಿವಾಚಾರ್ಯರು ಮಾತನಾಡಿ ವಿಶ್ವಗುರು ಬಸವೇಶ್ವರರಿಗೆ ಅವಮಾನ ಮಾಡಿದ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ ಇದರಿಂದ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ ಸರ್ಕಾರ ಮಹಾನ್ ನಾಯಕರ ಭಾವಚಿತ್ರದ ಬಳಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.

ನಂತರ ತಸಿಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಇದಕ್ಕೂ ಮೊದಲು ಪಟ್ಟಣದ ಮುಖ್ಯ ಬಜಾರ್ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಕಲ್ಬುರ್ಗಿ ಚಿಂಚೋಳಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯ ಹೆದ್ದಾರಿ ಬಂದ್ ಮಾಡಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿ ಪ್ರಯಾಣಿಕರು ಪರದಾಡುವಂತಾಗಿತ್ತು.

ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ್ ಮಹಾವೇದಿಕ್ಕೆ ಅಧ್ಯಕ್ಷರಾದ ಅನಂದ ಕೇಶ್ವರ್, ಜಗದೀಶ್ ಪಾಟೀಲ್,ಶಂಕರ್ ಚೌಕ, ರಾಜಕುಮಾರ್ ಸಿಲ್ಲಿನ, ರಾಜಶೇಖರ್ ಗುಡ್ಡದ, ವಿಜಯ್ ಕುಮಾರ್ ಪಾಟೀಲ್ ಗೋಣಗಿ, ಮಂಜುನಾಥ್ ಬೆರನ್, ರಾಜಕುಮಾರ್ ಕೊರವರ ಮಂಗಲಗಿ, ವಿಶ್ವನಾಥ್ ಅಂಕಲಗಿ, ಇಶು ಗೌಡ ಮಳಗಿ, ಶಿವಕುಮಾರ್ ಕೊಡಸಾಲಿ, ರೇವಣಸಿದ್ದಪ್ಪ ತೇಗಲ್ತಿಪ್ಪಿ, ವಿಜಯ್ ಕುಮಾರ್ ಚೆಂಗಟಿ, ಶರಣ್ ಗೌಡ ಪಾಟೀಲ್ ಕಂದ್ಗುಳ್, ಸಂಗಮೇಶ್ ಪಾಟೀಲ್ ಕಂದಗುಳ, ಶರಣು ಸೀಗಿ ರಟಗಲ, ಶರಣು ಬೈರಪ್ ದರಿ, ಶಿವರಾಜ್ ಪಾಟೀಲ್ ಅರಣಕಲ, ಮಹೇಶ್ ಪಾಟೀಲ್ ಅಲ್ಲಾಪುರ್, ಶರಣು ಕೇಶ್ವರ ,ಸೋಮಶೇಖರ್ ಮಾಕಾ, ಸಂಗಣ್ಣ ದೊಡ್ಡಮನಿ, ಮಲ್ಲಿನಾಥ್ ಪಾಟೀಲ್, ರವೀಂದ್ರ ದಂಡಗಿ, ರಮೇಶ್ ಸಿದ್ದ ನಾಯಕ್, ಸಾಗರ್ ಪಾಟೀಲ್ ಸುಗೂರ್, ಇನ್ನೂ ಸಮಾಜದ ಅನೇಕ ಮುಖಂಡರು ಬಸವಾಭಿಮಾನಿಗಳು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420