ಬಿಸಿ ಬಿಸಿ ಸುದ್ದಿ

ಹಲಕರ್ಟಿ ಬಸವೇಶ್ವರ ನಾಮಫಲಕ ಅವಮಾನಕ್ಕೆ ವೀರಶೈವ ಲಿಂಗಾಯತ ಸಮಾಜ ಖಂಡನೆ

ಸುರಪುರ:ಬಸವಾದಿ ಶರಣರನ್ನು ಅವಮಾನಿಸುವ ಕೆಲಸವನ್ನು ಕಿಡಿಗೇಡಿಗಳು ಮಾಡಿರುವುದು ಖಂಡನಿಯವಾಗಿದೆ,ಇಂತಹ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕು ಎಂದು ಕೊಡೆಕಲ್ ದುರದುಂಡೇಶ್ವರ ಮಠದ ಶಿವಕುಮಾ ಸ್ವಾಮೀಜಿ ಆಗ್ರಹಸಿದರು.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವ ಗುರು ಬಸವೇಶ್ವರರ ನಾಮಫಲಕಕ್ಕೆ ಅವಮಾನ ಮಾಡಿದ ಘಟನೆ ಮತ್ತು ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದ ಹೊರವಲಯದಲ್ಲಿನ ಕಂಠಿ ಬಸವೇಶ್ವರ ದೇವಸ್ಥಾನದ ಮೂರ್ತಿ ಭಗ್ನಗೊಳಿಸಿರುವುದನ್ನು ಖಂಡಿಸಿ, ಈ ಕೃತ್ಯಗಳೆಸಗಿದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ನಗರದ ರಂಗಂಪೇಟೆಯ ಬಸವೇಶ್ವರ ವೃತ್ತದಲ್ಲಿ ವೀರಶೈವ ಲಿಂಗಾಯತ ಸಮಾಜ ಹಾಗೂ ಬಸವ ಅಭಿಮಾನಿಗಳ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಹೋರಾಟದಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ, 12ನೇ ಶತಮಾನದಲ್ಲಿ ಬಸವೇಶ್ವರರು ಎಲ್ಲಾ ಜಾತಿ, ಜನಾಂಗದ ಶರಣರನ್ನು ಒಗ್ಗೂಡಿಸಿ ವಚನ ಕ್ರಾಂತಿಯ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವಚನ ಸಾಹಿತ್ಯ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದಾರೆ. ಅವರ ಆದರ್ಶ ಗುಣಗಳು ವಿಶ್ವಕ್ಕೆ ಮಾದರಿಯಾಗಿವೆ. ಸಮ ಸಮಾಜ ನಿರ್ಮಾಣದ ಕನಸು ಹೊತ್ತು ಕ್ರಾಂತಿ ಮಾಡಿದ ಕ್ರಾಂತಿ ಪುರಷನ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದು ಇದೊಂದು ಹೇಯ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಾಜದಲ್ಲಿ ಅಶಾಂತಿ ಉಂಟು ಮಾಡುವುದನ್ನು ಆಡಳಿತ ನಿರ್ಲಕ್ಷಿಸಬಾರದು. ಕಿಡಿಗೇಡಿಗಳನ್ನು ಆದಷ್ಟು ಬೇಗನೆ ಬಂಧಿಸಿ ಕಾನೂನು ಕ್ರಮಕೈಗೊಂಡು ಶಿಕ್ಷಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ವೀರಶೈವ ಸಮಾಜ ಉಗ್ರ ಸ್ವರೂಪದ ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಎಚ್ವರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಕೆ.ವಿಜಯಕುಮಾರ ಮೂಲಕ ಸಲ್ಲಿಸಲಾಯಿತು.

ಮುಖಂಡರಾದ ಪ್ರಕಾಶ ಅಂಗಡಿ ಕನ್ನೆಳ್ಳಿ, ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ, ಜಗದೀಶ್ ಪಾಟೀಲ್, ಶಿವರಾಜ ಕಲಕೇರಿ, ಜಗದೀಶ್ ಕಲಬುರಗಿ, ಶರಣುನಾಯಕ ಡೊಣ್ಣೀಗೇರೆ, ದೇವಿಂದ್ರಪ್ಪಗೌಡ ಮಾಲಗತ್ತಿ, ಶಿವರುದ್ರ ಉಳ್ಳಿ ಸತ್ಯಂಪೇಟೆ, ಚೆನ್ನಬಸವ ವಾಲಿ, ಬಸವರಾಜ ಅಂಗಡಿ, ಸಿದ್ದನಗೌಡ ಹುಣಸಗಿ ಮಾತನಾಡಿದರು,ಮುಖಂಡರಾದ ವೀರೇಶ್ ಪಂಚಾಂಗಮಠ, ಮಹೇಶ್ ಪಾಟೀಲ್, ವಿರೇಶ ನಿಷ್ಠಿ ದೇಶಮುಖ, ಶಿವು ಸಾಹುಕಾರ ರುಕ್ಮಾಪುರ, ಬಸನಗೌಡ ಚಿಕ್ಕನಳ್ಳಿ, ಸಿದ್ದನಗೌಡ ಹೆಬ್ಬಾಳ, ಮಲ್ಲಣ್ಣ ಸಾಹು ಜಾಲಬೆಂಚಿ, ಚನ್ನಪ್ಪಗೌಡ ದೇವಪುರ, ಮಹೇಶ ಹಳ್ಳದ, ಸೂಗುರೇಶ್ವರ ಮೋದಿ, ಪ್ರಕಾಶ ಬಣಗಾರ, ಅಜಯಕುಮಾರ ನರಬೋಳಿ, ಶಿವರಾಜ ವನಕೇರಿ, ಬಸನಗೌಡ ಕಮತಗಿ, ಸುಮಂತ ದೇವಪುರ, ಲಿಂಗರಾಜ ಶಾಬಾದಿ, ರವಿಗೌಡ ಪಾಟೀಲ್, ಆನಂದ ಮಡ್ಡಿ, ಹರೀಶ ಹಳ್ಳದ, ಶರಬಣ್ಣ ಹೊಸ್ಮನಿ, ಭೀಮನಗೌಡ ಹಂದ್ರಾಳ, ಅಮರೇಶ ಮುಧೋಳ, ಶಿವಕಾಂತ ಹೂಗಾರ, ಮಲ್ಲು ಬಾದ್ಯಾಪುರ, ಕೃಷ್ಣರೆಡ್ಡಿ ಮುದ್ನೂರು, ಮಲ್ಲು ಹೂಗಾರ, ಮಂಜುನಾಥ ಚಿನ್ನಗುಡಿ ಸೇರಿ ಇತರರು ಇದ್ದರು.

emedialine

Recent Posts

ಡಾ.ಶರಣಬಸಪ್ಪ ಕ್ಯಾತನಾಳಗೆ ಮುಖ್ಯಮಂತ್ರಿಗಳಿಂದ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ಪ್ರದಾನ

ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…

1 hour ago

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…

2 hours ago

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

3 hours ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

3 hours ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

3 hours ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

5 hours ago