ಕಲಬುರಗಿ: ನಗರದ ಸೇಡಂ ರಸ್ತೆಯಲ್ಲಿರುವ ವಿದ್ಯಾನಗರ ಕಾಲೋನಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಶ್ರಾವಣ ಮಾಸದಂಗವಾಗಿ ಕಳೆದೊಂದು ತಿಂಗಳಿಂದ ನಡೆಯುತ್ತಿರುವ ಧಾರವಾಡ ಜಿಲ್ಲೆಯ ಗರಗದ ಶ್ರೀ ಮಡಿವಾಳೇಶ್ವರ ಅವರ ಕುರಿತು ಪ್ರವಚನ ಕಾರ್ಯಕ್ರಮವನ್ನು ನರೋಣಾ ಹಾಗೂ ಗೋಳಾ(ಬಿ) ಹೊಸಮಠದ ಪೂಜ್ಯ ಶ್ರೀ ಚನ್ನಮಲ್ಲ ಸ್ಚಾಮಿಗಳು ಸೋಮವಾರದಂದೂ ನಡೆದ ಪ್ರವಚನ ನೀಡಿದ ಶ್ರೀಗಳು, ಕಣ್ಣಿಲ್ಲದ್ದವರಿಗೆ ಕಣ್ಣಾದವರು ಶರಣರು. ಶಕ್ತಿಯಿಲ್ಲದ್ದವರಿಗೆ ಶಕ್ತಿಯಾದರು. ಜಗತ್ತನ್ನೇ ಗೆಲ್ಲುವ ಶಕ್ತಿಯನ್ನು ಶರಣರು ತಮ್ಮ ನಡೆ-ನುಡಿಗಳ ಮೂಲಕ ನಮಗೆ ನೀಡಿದ್ದಾರೆ.
ಇಂದಿನ ಸಮಾಜ ಸ್ವಚ್ಚ ಇರಬೇಕಾದರೆ ಗುರುಗಳೆಂಬ ಮೀನು ಬೇಕು.. ಒಂದಕ್ಕೊಂದು ಸಂಬಂಧವಿವೆ ಎಂದು ಮಾರ್ಮಿಕವಾಗಿ ನುಡಿದರು. ಸತ್ತವರನ್ನು ಬದುಕಿಸುವುದಲ್ಲ, ಬದಲಾಗಿ ಸಾಯುವವರನ್ನು ಬದುಕಿಸುವವನು ನಿಜವಾದ ಶರಣನಾಗುತ್ತಾನೆ. ಆ ಕಾರ್ಯ ಶ್ರೀ ಮಡಿವಾಳೇಶ್ವರ ಎಂಬ ಗುರು ಮಾಡಿ ಹೋಗಿದ್ದಾರೆ ಎಂದು ತಿಳಿಸಿದರು. ಸತ್ತ ಮೇಲೂ ಸಮಾಜಸೇವೆ ಮಾಡಬೇಕಾದರೆ ಪ್ರತಿಯೊಬ್ಬರೂ ದೇಹದಾನ ಮಾಡುವ ಮೂಲಕ ಸಮಾಜದ ಋಣ ತೀರಿಸಿಕೊಳ್ಳಬೇಕೆಂದರು. ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರನ್ನು ಇದೇ ಸಂಸರ್ಭದಲ್ಲಿ ವಿಶೇಷವಾಗಿ ಸತ್ಕರಿಸಿದರು.
ಶಿವಾನಂದ ಮಠಪತಿ, ವಿದ್ಯಾನಗರ ವೆಲಫೇರ್ ಸೊಸೈಟಿಯ ಮಲ್ಲಿನಾಥ ದೇಶಮುಖ, ಶಿವರಾಜ ಅಂಡಗಿ ಸೇರಿ ಬಡಾವಣೆಯ ಪ್ರಮುಖರು ಭಾಗವಹಿಸಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…