ವಿವಿಧ ಬೇಡೆಕೆಗಳ ಈಡೇರಿಸಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಸುರಪುರ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಯತ ಸಂಘ ಹಸಿರು ಸೇನೆಯಿಂದ ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಬಾವಿ ಮಾತನಾಡಿ,ರಾಜ್ಯದಲ್ಲಿ ನಿತ್ಯವು ಲೋಡ್ ಸೆಡ್ಡಿಂಗ್‍ನಿಂದ ರೈತರು ತೀವ್ರ ತೊಂದರೆ ಪಡುವಂತಾಗಿದೆ,ಸರಕಾರ 7 ತಾಸು ವಿದ್ಯುತ್ ನೀಡುವುದಾಗಿ ಹೇಳುತ್ತಿದೆ ಆದರೆ ವಿದ್ಯುತ್ ನೀಡುತ್ತಿಲ್ಲ,ಗ್ರಾಮೀಣ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿವೆ ಅವುಗಳ ದುರಸ್ತಿ ಮಾಡಿಸಬೇಕು,ಶಿಕ್ಷಕರ ವರ್ಗಾವಣೆಯಿಂದ ಶಾಲೆಗಳಲ್ಲಿ ಶಿಕ್ಷಕರಿಲ್ಲದೆ ಮಕ್ಕಳ ಕಲಿಕೆಗೆ ತೊಂದರೆಯಾಗಿದೆ ಕೂಡಲೇ ಶಿಕ್ಷಕರನ್ನು ನೇಮಿಸಬೇಕು.

ರೈತರು ಬೆಳೆದ ಹತ್ತಿ ಭತ್ತಕ್ಕೆ ವೈಜ್ಞಾನಿಕ ಬೆಲೆಯೊಂದಿಗೆ ಸರಕಾರ ಖರಿದಿ ಕೇಂದ್ರಗಳನ್ನು ಆರಂಭಿಸಿ ಖರಿದಿಸಬೇಕು,ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಕೇವಲ ಎರಡು ತಾಲೂಕುಗಳನ್ನು ಬರಗಾಲ ಎಂದು ಘೋಷಿಸಿರುವ ಸರಕಾರ ನಿಲುವಿಗೆ ವಿರೋಧ ವ್ಯಕ್ತಪಡಿಸಿ ಸಂಪೂರ್ಣ ಜಿಲ್ಲೆ ಬರಪೀಡಿತ ಎಂದು ಘೋಷಿಸಿ ಆರು ತಾಲೂಕುಗಳಿಗೆ ಶೀಘ್ರವೆ ಬರಗಾಲದ ಪರಿಹಾರ ಬಿಡುಗಡೆ ಮಾಡಿಸಬೇಕು ಎಂದು ಆಗ್ರಹಿಸಿದರು,ಒಂದು ವೇಳೆ ನಮ್ಮ ಮನವಿಗೆ ಸ್ಪಂಧಿಸದಿದ್ದಲ್ಲಿ ಸಚಿವರನ್ನು ಜಿಲ್ಲೆಯಾದ್ಯಂತ ಯಾವುದೇ ಗ್ರಾಮಕ್ಕೆ ಬರಲು ರೈತ ಸಂಘ ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಹಣಮಂತ್ರಾಯ ಚಂದಲಾಪುರ ಮಾತನಾಡಿದರು,ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ ಕೆ. ವಿಜಯಕುಮಾರ ಮೂಲಕ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಶಿವನಗೌಡ ರುಕ್ಮಾಪುರ,ಭೀಮಣ್ಣ ತಿಪ್ಪನಟಗಿ,ವೆಂಕಟೇಶ ಕುಪಗಲ್,ತಿಪ್ಪಣ್ಣ ಜಂಪಾ,ಮಲ್ಲಣ್ಣ ಹಾಲಬಾವಿ,ಮಾನಪ್ಪ ಕೊಂಬಿನ್,ಲೋಹಿತಕುಮಾರ ಮಂಗಿಹಾಳ,ದೇವಣ್ಣ ಎರಕಿಹಾಳ,ನಾಗಪ್ಪ ಕುಪಗಲ್,ಖುದಾಭಕ್ಷ,ರಾಮು ಕರ್ನಾಳ,ರಂಗಯ್ಯ ಬೂದುರ,ಶಿವಲಿಂಗಪ್ಪ ಕುಂಬಾರಪೇಟ,ಬಂದಗಿಸಾಬ ಕರ್ನಾಳ,ಘಾಳೆಪ್ಪ ಕುಪಗಲ್,ಮಾನಯ್ಯ ಕುಪಗಲ್,ಮಾಳಪ್ಪ ಪೂಜಾರಿ,ಭೀಮಣ್ಣ ತಿಪ್ಪನಟಗಿ,ಅಂಬ್ರೇಶ ಯರಕಿಹಾಳ,ಸೋಮನಗೌಡ ಎರಕಿಹಾಳ,ಭೀಮಯ್ಯ ಕುಪಗಲ್,ತಿರುಪತಿ ಕುಪಗಲ್ ಸೇರಿದಂತೆ ಅನೇಕರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420