ಮಹಿಳಾ ಪೌರಕಾರ್ಮಿಕರಿಂದ 101 ಕಳಶ ಮೆರವಣಿಗೆ

ಕಲಬುರಗಿ; ಮಹಾನಗರ ಪಾಲಿಕೆಯ ಸಮಸ್ತ ನೌಕರ ವರ್ಗದವರ ವತಿಯಿಂದ ನಾಡಹಬ್ಬ ದಸರಾ ಪ್ರಯುಕ್ತ ಪಾಲಿಕೆಯ ನೂತನ ಕೇಂದ್ರ ಕಛೇರಿಯಲ್ಲಿ ಆಯುಧ ಪೂಜೆಯನ್ನು ಪೂಜ್ಯ ಮಹಾಪೌರ ವಿಶಾಲ ಎಸ್. ಧರ್ಗಿ ಅವರು ಉದ್ಘಾಟಿಸಿದರು.

ಪಾಲಿಕೆಯ 101 ಮಹಿಳಾ ಪೌರಕಾರ್ಮಿಕರಿಂದ ಟ್ಯಾಂಕ್‍ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ಅಂಬಾ ಭವಾನಿ ದೇವಸ್ಥಾನದಿಂದ ಪೂಜೆ ಮುಗಿಸಿ, ಮಹಿಳೆಯ ಶಿರದ ಮೇಲೆ ಕಳಶವನ್ನು ಹೊತ್ತು ಕಾಲ್ನಡಿಗೆಯಿಂದ ಮೆರವಣಿಗೆಯೊಂದಿಗೆ ಮಹಾನಗರ ಪಾಲಿಕೆಯ ಪೂಜಾ ಸ್ಥಳಕ್ಕೆ ಆಗಮಿಸಿದರು. ನಂತರ ಶ್ರೀ , ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ವಿಶಾಲಕುಮಾರ ಎಸ್. ನವರಂಗ ಅವರು ಪಾಲಿಕೆಯ ಕೇಂದ್ರ ಕಛೇರಿಯ ಆವರಣದಲ್ಲಿ ಪೂಜಾ ಕಾರ್ಯಕ್ರಮ ನೆರವರಿಸಿದರು.

ಸದರಿ ಕಾರ್ಯಕ್ರಮದಲ್ಲಿ ಪಾಲಿಕೆಯ ಎಲ್ಲಾ ವಾಹನಗಳ ಪೂಜೆಯನ್ನು ನೆರವೇರಿಸಲಾಯಿತು. ಉಪಮಹಾಪೌರ ಶಿವಾನಂದ ಡಿ. ಪಿಸ್ತಿ, ಕರ, ಹಣಕಾಸು ಹಾಗೂ ಮೇಲ್ಮನವಿ ಸ್ಥಾಯಿ ಸಮಿತಿ ಅಧ್ಯಕ್ಷೆ ರಾಗಮ್ಮ ಎಸ್. ಇನಾಮದಾರ, ಜಿಲ್ಲಾಧಿಕಾರಿಗಳಾದ ಕುಮಾರಿ ಫೌಜಿಯಾ ಬಿ. ತರನ್ನುಮ್, ಪಾಲಿಕೆಯ ಮಾಧವ ಗಿಟ್ಟೆ, ಉಪ ಆಯುಕ್ತರು (ಆಡಳಿತ) ಆರ್.ಪಿ. ಜಾಧವ, ಉಪ ಆಯುಕ್ತರು (ಅಭಿವೃದ್ಧಿ), ಶಿವನಗೌಡ ಕಾರ್ಯಪಾಲಕ ಅಭಿಯಂತರರು, ಸಾವಿತ್ರಿ ಶರಣು ಸಲಗರ, ಎಸ್ಟೇಟ್ ಅಧಿಕಾರಿಗಳು ಹಾಗೂ ಸಭಾ ಕಾರ್ಯದರ್ಶಿ ಹಾಗೂ ಪಾಲಿಕೆ ಸದಸ್ಯರು, ಪಾಲಿಕೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಆಯುಧ ಪೂಜೆಯಲ್ಲಿ ಉಪಸ್ಥಿತರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

3 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

6 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

11 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

13 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420