ರಮೇಶ ಸಂಗಾ ದಂಪತಿಗಳಿಂದ ಆಯುಧ ಪೂಜೆ; ಸನ್ಮಾನ

ಕಲಬುರಗಿ: ಸಪ್ತ ನೇಕಾರ ಸೇವಾ ಕೇಂದ್ರದ ಕಛೇರಿಯಲ್ಲಿ ಅದ್ಧುರಿ ಆಯುಧ (ಖಂಡೇ) ಪೂಜೆ ಜರುಗಿತು. ಈ ವೇಳೆ ಮುಖ್ಯಅತಿಥಿಗಳಾಗಿ ಆಗಮಿಸಿದ ರಾಜ್ಯ ಸಚಿವಾಲಯ ಸಂಘದ ಅಧ್ಯಕ್ಷ ರಮೇಶ ಸಂಗಾ ಮತ್ತು ಅವರ ಪತ್ನಿ ಡಾ. ನಿರ್ಮಲಾಜ್ಯೋತಿ ರಮೇಶ್ ಸಂಗಾ ಅವರಿಗೆ ಸಂಘದಿಂದ ಸನ್ಮಾನಿಸಲಾಯಿತು.

ಚಿಕ್ಕ ಸಂಸಾರದಿಂದ ಕೂಡಿರುವ ಕುಟಂಬ ನಮದಾಗಿದ್ದು, ನಿಮ್ಮ ಸ್ನೇಹ ಮತ್ತು ಪ್ರೀತಿ ಕಂಡು ಸಪ್ತ ನೇಕಾರ ಕುಟುಂಬಗಳ ದೊಡ್ಡ ಜಗತ್ತು ನನ್ನದು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಘದ ಕಾರ್ಯದರ್ಶಿ ಮ್ಯಾಳಗಿ ಚಂದ್ರಶೇಖರ್ ಸ್ವಾಗತಿಸಿದರು. ಸಂಘದ ಹಿರಿಯ ಸದಸ್ಯಹಾಗೂ ಪಟ್ಟಸಾಲಿ ಸಮಾಜದ ಕಾರ್ಯದರ್ಶಿ ರೇವಣ್ಣಸಿದ್ದಪ್ಪಾ ಗಡ್ಡದ ರವರು ಸಮಾಜದ ವತಿಯಿಂದ ಶಾಲು ಹೊದಿಸಿ ಗೌರವಿಸಿದರು.

ಸಂಘದ ಅಧ್ಯಕ್ಷ ಶಿವಲಿಂಗಪ್ಪಾ ಅಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಶ್ರೀನಿವಾಸ ಬಲಪೂರ್ ನಿರೂಪಿಸಿದರು. ಸಮಾಜ ಸೇವಕ ಜೋಳದ ಲಕ್ಷ್ಮೀಕಾಂತ ವಂದಿಸಿದರು. ಪದ್ಮಸಾಲಿ, ಸಮಾಜದ ನ್ಯಾಯವಾದಿ ತ್ರಿವೇದಿ ವಿಜಯಕುಮಾರ, ಕುರಹಿನಶೆಟ್ಟಿ ಸಮಾಜದ ಖಜಾಂಚಿ ಮಲ್ಲಿಕಾರ್ಜುನ ಕುಂಟೋಜಿ, ಹಟಗಾರ ಸಮಾಜದ ನ್ಯಾಯವಾದಿ ಜೇನವೆರಿ ವಿನೋದಕುಮಾರ, ಸಪ್ತ ನೇಕಾರರ ಪತ್ರಿಕಾ ಪ್ರತಿನಿಧಿ ರಾಜು ಕೋಸ್ಟಿ ಹಾಗೂ ಸಂತೋಷ ಲಖಮಣ ಸೇರಿದಂತೆ ಮುಂತಾದವರು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಅಂತರ್ ಜಿಲ್ಲಾ ಕುಖ್ಯಾತ ಮನೆಗಳ್ಳರ ಬಂಧನ: 14.70 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ

ಶಹಾಬಾದ: ತಾಲೂಕಿನ ಮರತೂರ ಗ್ರಾಮದಲ್ಲಿನ ಅಬ್ದುಲ್ ರಜಾಕ್ ಬಾಗೋಡಿ ಅವರ ಮನೆಕಳ್ಳತನವಾಗಿರುವ ಬಗ್ಗೆ ದೂರಿನ್ವಯ ಜಾಡು ಹಿಡಿದ ಪೊಲೀಸರು ಇಬ್ಬರು…

2 hours ago

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

ಶಹಾಬಾದ: ಬಾಲಕಿ ಮೇಲಿನ ಅತ್ಯಾಚಾರ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೆÇೀಕ್ರೂ) ನ್ಯಾಯಾಲಯವು ಅಪರಾಧಿಗೆ…

2 hours ago

ನಗರಸಭೆಯ ವಿವಿಧ ಕಾಮಗಾರಿಗಳ ಮಂಜೂರಾತಿಗೆ ಸದಸ್ಯರ ಒಪ್ಪಿಗೆ

ಶಹಾಬಾದ:sನಗರಸಭೆಯ ನೂತನ ಅಧ್ಯಕ್ಷೆ ಚಂಪಾಬಾಯಿ ರಾಜು ಮೇಸ್ತ್ರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಗರಸಭೆಯ ಸಭಾಂಗಣದಲ್ಲಿ ಸಾಮನ್ಯ ಸಭೆ ನಡೆಯಿತು. ಸಭೆ…

2 hours ago

ಮನ್ನೂರ ಆಸ್ಪತ್ರೆ; ಬಡಜನರಿಗೆ ರಿಯಾಯಿತಿ ದರದಲ್ಲಿ ಕ್ಯಾನ್ಸರ್‌ ಚಿಕಿತ್ಸೆ ನೀಡಲು ನಿರ್ಧಾರ

ಕಲಬುರಗಿ: ಆಹಾರ ಪದ್ಧತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ದೇಹ ದಂಡಿಸದೇ ಇರುವ ಕಾರಣದಿಂದ ಕ್ಯಾನ್ಸರ್ ರೋಗ…

3 hours ago

ದತ್ತಾತ್ರೇಯ ಪಾಟೀಲ್ ರೇವೂರ್ ಗೆ ಸನ್ಮಾನ

ಕಲಬುರಗಿ: ಬಿಜೆಪಿ ಮಹಾನಗರ ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವಲಿಂಗ ಪಾಟೀಲ್ ಸಾವಳಗಿ ಅವರನ್ನು ನೇಮಕ ಮಾಡಿದ ಕಾರಣೀಭೂತರಾದ ದಕ್ಷಿಣ…

3 hours ago

ಬಿಜೆಪಿ ಕಲಬುರಗಿ ಜಿಲ್ಲಾ ಒಬಿಸಿ ಮೋರ್ಚಾಕ್ಕೆ ಆಯ್ಕೆ

ಕಲಬುರಗಿ: ವಿಶ್ವ ಕರ್ಮಾ ಸಮಾಜ ವತಿಯಿಂದ ಬಿಜೆಪಿ ಮಹಾ ನಗರ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ದೇವೇಂದ್ರ ದೇಸಾಯಿ ಕಲ್ಲೂರ್…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420