ಕಲಬುರಗಿ: ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಸುತ್ತಿರುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ನಗರದ ಆಬಕಾರಿ ಆಯುಕ್ತರು ಕಚೇರಿ ಮುಂದೆ ದಿಢೀರ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಬುಧವಾರ ಪ್ರಾಂತ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಶರಣಬಸಪ್ಪ ಮಮಶೇಟಿ ನೇತೃತ್ವದಲ್ಲಿ ಹಲವರು ಗ್ರಾಮದ ಜನರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿ ಆಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕೆಂದು ಒತ್ತಾಯಿಸಿದರು.
ನೂರಾರು ಹೆಣ್ಣು ಮಕ್ಕಳು ಸೇರಿದಂತೆ ಯುವಜನರು ಹಾಗೂ ಜನಪರ ಮುಖಂಡರು ಹಾಗೂ ಸಮಾಜಿಕ ಕಾರ್ಯಾಕರ್ತರು ಸೇರಿದಂತೆ ಅನೇಕರು ಇದ್ದರು.