ಕಲಬುರಗಿ; ಕಲಬುರಗಿ ದಕ್ಷಿಣ ಭಾಗದಲ್ಲಿ ಬರುವ ಅನೇಕ ಹಳ್ಳಿಗಳಲ್ಲಿರುವ ನೀರಾವರಿ ಪಂಪ್ಸೆಟ್ ಬಳಸುವ ರೈತರು ಸರಿಯಾಗಿ ವಿದ್ಯುಚ್ಚಕ್ತಿ ಪಡೆಯಲಾಗುತ್ತಿಲ್ಲ, ಇದಕ್ಕೆ ಅಲ್ಲಿನ ವಿದ್ಯುತ್ ಪರಿವರ್ತಕಗಳ ಕೊರತೆಯೇ ಕಾರಣ. ತಕ್ಷಣ ಹೆಚ್ಚುವರಿ ವಿದ್ಯುತ್ ಪರಿವರ್ತಕಗಳನ್ನು (ಟ್ರಾನ್ಸಫಾರ್ಮರ್) ಅಳವಡಿಸುವ ಮೂಲಕ ರೈತರನ್ನು ಕಾಡುತ್ತಿರುವ ವಿದ್ಯುತ್ ಕೊರತೆಯ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಕಲಬುರಗಿ ದಕ್ಷಿಣ ಶಾಸಕರಾದ ಅಲ್ಲಂಪ್ರಭು ಪಾಟೀಲ್ ನೇತೃತ್ವದಲ್ಲಿ ರೈತರ ನಿಯೋಗ ಬುಧವಾರ ಜೆಸ್ಕಾಂ ವ್ವಸ್ಥಾಪಕ ನಿರ್ದೆಶಕರಾದ ರವೀಂದ್ರ ಕರಿಲಿಂಗಣ್ಣವರ್ ಅವರನ್ನು ಭೇಟಿ ಮಾಡಿ ಆಗ್ರಹಿಸಿತು.
ಭೀಮಳ್ಳಿ, ಹಡಗಿಲ್, ಪಟ್ಟಣ, ಸಾವಳಗಿ, ಮೇಳಕುಂದಾ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಸರಿಯಾಗಿ ವಿದ್ುಚ್ಚಕ್ತಿ ಪೂರಕೆಯಾಗದೆ ರೈತರು ತೊಂದರೆ ಅನುಭವಿಸುತ್ತಿದ್ದಾರೆಂದು ಶಸಾಕ ಅಲ್ಲಂಪ್ರಭು ಪಾಟೀಲರು ರೈತರು ಎದುರಿಸುತ್ತಿರುವ ಸಮಸ್ಯೆಯನ್ನು ಎಳೆಎಳೆಯಾಗಿ ಎಂಡಿ ರವೀಂದ್ರ ಅವರ ಮುಂದೆ ವಿವರಿಸಿದರು.
ಮೊದಲೇ ಮಲೆ ಇಲ್ಲ. ಲಭ್ಯವಿರುವ ನೀರನ್ನು ಬಳಸಿ ಬೆಳೆ ಉಳಿಸಬೇಕಾದರೆ ಕರೆಂಟ್ ಕೊರತೆ ಕಾಡುತ್ತಿದೆ. ನೀರಾವರಿ ಪಂಪ್ಸೆಟ್ ಹೆಚ್ಚಾಗಿದ್ದರಿಂದ ಅಲ್ಲಿರುವ ಟಿಸಿ ಸರಿಯಾಗಿ ಕೆಲಸ ಮಾಡದೆ ಟ್ರಿಪ್ ಆಗುತ್ತಿದೆ. ಪದೇ ಪದೇ ಆಗುತ್ತಿರುವ ಈ ಸಮಸ್ಯೆಗೆ ಕಾಯಂ ಪರಿಹಾರ ತಾವು ನೀಡಬೇಕು. ಹೆಚ್ಚುವರಿ ಟೀಸಿ ಅಲ್ಲಿ ಅಳವಡಿಸಿ ರೈತರ ನೆರವಿಗೆ ಬರಬೇಕೆಂದು ಆಗ್ರಹಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…