ಸುರಪುರ: ಸರಕಾರದ ಸೌಲಭ್ಯಗಳ ಸದುಪಯೋಗ ಮಾಡಿಕೊಂಡು ವಿಕಲಚೇತನರು ಗೌರವಯುತ ಜೀವನ ನಡೆಸಲು ತಾವೆಲ್ಲರು ಸಹಾಯ ಮಾಡುವಂತೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್ ತಿಳಿಸಿದರು.
ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಜಿಪಂ ಯಾದಗಿರಿ, ತಾಪಂ ಸುರಪುರ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗ್ರಾಮೀಣ ಅಂಗವಿಕಲರ ಪುನರ್ವಸತಿ ಕಾರ್ಯಕ್ರಮ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ(ಎಪಿಡಿ) ಯಾದಗಿರಿ ಇವರ ಸಹಯೋಗದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮೀಣ ಪುನಶ್ಚೇತನ ಕಾರ್ಯಕರ್ತರು ಹಾಗೂ ನಗರ ಪುನಃ ಶ್ಚೇತನ ಕಾರ್ಯಕರ್ತರಿಗೆ ಹಮ್ಮಿಕೊಂಡ ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿ, ಸರಕಾರದ ವಿವಿಧ ಸೌಲಭ್ಯಗಳು ನೈಜ ವಿಕಲಚೇತನರಿಗೆ ಸಿಗಬೇಕು ಮತ್ತು ವಿಕಲಚೇತನರಿಗೆ ಗೌರವಯುತ ಜೀವನ ನಿರ್ವಹಣೆ ಮಾಡಲು ಸಹಾಯವಾಗುವಂತೆ ಶೇ.40ರಷ್ಟು ದೈಹಿಕ ದುರ್ಬಲತೆ ಹೊಂದಿದವರಿಗೆ ನರೇಗಾ ಯೋಜನೆಯಡಿ ವಿಶೇಷ ಜಾಬ್ ಕಾರ್ಡ್ ನೀಡಿ, ನೂರು ದಿನಗಳ ಅಕುಶಲ ಕೂಲಿ ಕೆಲಸ ಕೋಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು, ಎಪಿಡಿ ಸಂಸ್ಥೆಯ ಸಿಬ್ಬಂದಿ ಹಾಗೂ ತಾಪಂ ಸಿಬ್ಬಂದಿ, ಐಇಸಿ ಸಂಯೋಜಕರು ಹಾಗೂ ವಿವಿಧ ಗ್ರಾಮ ಪಂಚಾಯತಿಗಳ ಅಧ್ಯಕ್ಷರು,ಉಪಾಧ್ಯಕ್ಷ ಹಾಗೂ ಪಿಡಿಓಗಳು ಭಾಗವಹಿಸಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…