ಬಸವಣ್ಣನವರ ಭಾವ ಚಿತ್ರ ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ

0
17

ಶಹಾಬಾದ: ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಬಸವಣ್ಣನವರ ಭಾವ ಚಿತ್ರವನ್ನು ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಮಂಗಳವಾರ ನಗರದ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಛೇರಿ ವರೆಗೆ ತಾಲೂಕ ವೀರಶೈವ ಲಿಂಗಾಯತ ಸಮಾಜ ಹಾಗೂ ಬಸವ ಅಭಿಮಾನಿಗಳ ವತಿಯಿಂದ ಬೃಹತ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರಾದ ಅರುಣ ಪಟ್ಟಣಕರ್ ಹಾಗೂ ಶಿವಾನಂದ ಪಾಟೀಲ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಸವಣ್ಣನವರ ಹಾಗೂ ಮಹಾತ್ಮರ ಪುತ್ಥಳಿ, ಪ್ರತಿಮೆ, ಭಾವಚಿತ್ರಗಳನ್ನು ಗುರಿಯಾಗಿಸಿಕೊಂಡು ಅಪಮಾನ ಮಾಡುವ ಘಟನೆಗಳು ಹೆಚ್ಚುತ್ತಿದ್ದು ಅವುಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು, ಜಗತ್ತಿಗೆ ಶಾಂತಿ, ಸೌಹಾರ್ದತೆ, ಜಾತ್ಯತೀತತೆ, ಕಾಯಕ ದಾಸೋಹದ ಮಹತ್ವವನ್ನು ತಿಳಿಸಿದ ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ ಮಾಡಿದರೇ ಅದು ಮನುಕುಲಕ್ಕೆ ಅವಮಾನ ಮಾಡಿದಂತಾಗಿದೆ. ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.

Contact Your\'s Advertisement; 9902492681

ವೀರಶೈವ ಮಹಾಸಭಾದ ಅಧ್ಯಕ್ಷ ಶರಣಬಸಪ್ಪ ಕೋಬಾಳ, ವಿಜಯ ಕುಮಾರ ಮುತ್ತಟ್ಟಿ, ಅಣವೀರ ಇಂಗಿನಶೆಟ್ಟಿ, ವಿಶ್ವರಾಧ್ಯ ಬಿರಾಳ, ಶರಣಯ್ಯಸ್ವಾಮಿ, ಸಾಹೇಬಗೌಡ ಬೋಗುಂಡಿ , ಸೂರ್ಯಕಾಂತ ಕೋಬಾಳ, ಶರಣಗೌಡ ಪಾಟೀಲ ಗೋಳಾ, ಮಲ್ಲಿಕಾರ್ಜುನ ಚಂದನಕೇರಿ, ಗಿರಿಮಲ್ಲಪ್ಪ ವಳಸಂಗ, ಶರಣಗೌಡ ಪಾಟೀಲ, ನಾಗಣ್ಣ ರಾಂಪೂರೆ, ಪ್ರಕಾಶ ಪಾಟೀಲ, ಈರಣ್ಣ ಕಾರ್ಗಿಲ್, ಬಸವರಾಜ ತರನಳ್ಳಿ, ಸದಾನಂದ ಕುಂಬಾರ, ಶರಣು ವಸ್ತ್ರದ, ಬಸವರಾಜ ಬಿರಾದಾರ, ಶಿವಾನಂದ ಪಾಟೀಲ್, ಪ್ರಕಾಶರೆಡ್ಡಿ, ರಾಜು ಕೋಬಾಳ, ಅಮೃತ ಮಾನಕರ್, ಭೀಮಾಶಂಕರ ಕುಂಬಾರ, ಶರಬು ಪಟ್ಟೆದಾರ ಸೇರಿದಂತೆ ನೂರಾರು ಬಸವ ಅಭಿಮಾನಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here