ಶಹಾಬಾದ: ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಬಸವಣ್ಣನವರ ಭಾವ ಚಿತ್ರವನ್ನು ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಮಂಗಳವಾರ ನಗರದ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಛೇರಿ ವರೆಗೆ ತಾಲೂಕ ವೀರಶೈವ ಲಿಂಗಾಯತ ಸಮಾಜ ಹಾಗೂ ಬಸವ ಅಭಿಮಾನಿಗಳ ವತಿಯಿಂದ ಬೃಹತ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರಾದ ಅರುಣ ಪಟ್ಟಣಕರ್ ಹಾಗೂ ಶಿವಾನಂದ ಪಾಟೀಲ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಸವಣ್ಣನವರ ಹಾಗೂ ಮಹಾತ್ಮರ ಪುತ್ಥಳಿ, ಪ್ರತಿಮೆ, ಭಾವಚಿತ್ರಗಳನ್ನು ಗುರಿಯಾಗಿಸಿಕೊಂಡು ಅಪಮಾನ ಮಾಡುವ ಘಟನೆಗಳು ಹೆಚ್ಚುತ್ತಿದ್ದು ಅವುಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು, ಜಗತ್ತಿಗೆ ಶಾಂತಿ, ಸೌಹಾರ್ದತೆ, ಜಾತ್ಯತೀತತೆ, ಕಾಯಕ ದಾಸೋಹದ ಮಹತ್ವವನ್ನು ತಿಳಿಸಿದ ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ ಮಾಡಿದರೇ ಅದು ಮನುಕುಲಕ್ಕೆ ಅವಮಾನ ಮಾಡಿದಂತಾಗಿದೆ. ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.
ವೀರಶೈವ ಮಹಾಸಭಾದ ಅಧ್ಯಕ್ಷ ಶರಣಬಸಪ್ಪ ಕೋಬಾಳ, ವಿಜಯ ಕುಮಾರ ಮುತ್ತಟ್ಟಿ, ಅಣವೀರ ಇಂಗಿನಶೆಟ್ಟಿ, ವಿಶ್ವರಾಧ್ಯ ಬಿರಾಳ, ಶರಣಯ್ಯಸ್ವಾಮಿ, ಸಾಹೇಬಗೌಡ ಬೋಗುಂಡಿ , ಸೂರ್ಯಕಾಂತ ಕೋಬಾಳ, ಶರಣಗೌಡ ಪಾಟೀಲ ಗೋಳಾ, ಮಲ್ಲಿಕಾರ್ಜುನ ಚಂದನಕೇರಿ, ಗಿರಿಮಲ್ಲಪ್ಪ ವಳಸಂಗ, ಶರಣಗೌಡ ಪಾಟೀಲ, ನಾಗಣ್ಣ ರಾಂಪೂರೆ, ಪ್ರಕಾಶ ಪಾಟೀಲ, ಈರಣ್ಣ ಕಾರ್ಗಿಲ್, ಬಸವರಾಜ ತರನಳ್ಳಿ, ಸದಾನಂದ ಕುಂಬಾರ, ಶರಣು ವಸ್ತ್ರದ, ಬಸವರಾಜ ಬಿರಾದಾರ, ಶಿವಾನಂದ ಪಾಟೀಲ್, ಪ್ರಕಾಶರೆಡ್ಡಿ, ರಾಜು ಕೋಬಾಳ, ಅಮೃತ ಮಾನಕರ್, ಭೀಮಾಶಂಕರ ಕುಂಬಾರ, ಶರಬು ಪಟ್ಟೆದಾರ ಸೇರಿದಂತೆ ನೂರಾರು ಬಸವ ಅಭಿಮಾನಿಗಳು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…