ಶಿವಕುಮಾರ ಕುಟುಂಬಕ್ಕೆ ಸಾಂತ್ವನ ಹೇಳಿದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ್

0
71

 ಕುಟುಂಬಕ್ಕೆ ವಯಕ್ತಿಕ ಸಹಾಯ ಧನ ನೀಡಿದ ಬಾಲರಾಜ್ ಗುತ್ತೇದಾರ್

ಸೇಡಂ :ಸೇಡಂ ಮತಕ್ಷೇತ್ರದ ಶಿರೋಳ್ಳಿ ಗ್ರಾಮದ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆ ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಶಿವಕುಮಾರ್ ಪೂಜಾರಿ‌ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ವಯಕ್ತಿಕ ಧನ ಸಹಾಯ ಮಾಡಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಾಲರಾಜ ಗುತ್ತೇದಾರ ಮಾತನಾಡಿ ಶಿವಕುಮಾರ್ ಆತ್ಮಹತ್ಯೆ ಪ್ರಕರಣದಲ್ಲಿ ಆತನ ಕುಟುಂಬಸ್ಥರು ಸಾಲಬಾದೆ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ, ಇನ್ನೊಂದೆಡೆ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಚಿವರ ಹೆಸರು ಹೇಳಿ ಆಡಿಯೊ ಸಮಾಜಿಕ ಜಾಲತಾಣದಲ್ಲಿ ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆದರೆ ಸತ್ಯ ಸತ್ಯತೆ ತನಿಖೆಯಿಂದ ಮಾತ್ರ ಹೊರಬರಲಿದೆ ಆದಕಾರಣ ಯಾರು ಕೂಡ ಪ್ರಕರಣದಲ್ಲಿ ರಾಜಕೀಯ ಮಾಡದೆ ಈ ಬಡ ಕುಟುಂಬಕ್ಕೆ ನ್ಯಾಯಕೊಡಿಸಬೇಕು ಹಾಗೂ ಈ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಶಂಭುಲಿಂಗ ನಾಟಿಕರ, ರಾಘವೇಂದ್ರ ಬಂಟನಹಳ್ಳಿ, ವಿನಯ ಗುತ್ತೇದಾರ್, ಜಗನ್ನಾಥ್ ಪೂಜಾರಿ,
ಹಸನಪ್ಪ ಮೇತ್ರಿ, ಪಕ್ಷದ ಮುಖಂಡರು ಹಾಗೂ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here