ದೇವರಗೋನಾಲ: ಮಹರ್ಷಿ ವಾಲ್ಮೀಕಿ ಕುರಿತು ಅವಹೇಳನ ಬರಹ ಖಂಡಿಸಿ ರಸ್ತೆ ತಡೆ

ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿಯ ಬಳಿಯಲ್ಲಿ ಯಾರೋ ಕಿಡಿಗೇಡಿಗಳು ವಾಲ್ಮೀಕಿಯ ಕುರಿತು ಹಾಗೂ ವಾಲ್ಮೀಕಿ ನಾಯಕ ಸಂಘದ ಗ್ರಾಮ ಶಾಖೆ ಅಧ್ಯಕ್ಷ ದೇವಿಂದ್ರಪ್ಪ ಚಿಕ್ಕನಹಳ್ಳಿಯವರ ಕುರಿತು ಅವಾಚ್ಯ ಪದಗಳಿಂದ ನಿಂದನೆಯ ಪತ್ರ ಬರೆದು ಇಟ್ಟಿರುವುದನ್ನು ಖಂಡಿಸಿ ಗ್ರಾಮದ ಸುರಪುರ ಹುನಗುಂದ ಹೆದ್ದಾರಿ ತಡೆದು ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು. ಈ ಜಗತ್ತಿಗೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿರುವ ಶೀ ಮಹರ್ಷಿ ವಾಲ್ಮೀಕಿಯ ಬಗ್ಗೆ ಹಾಗೂ ವಾಲ್ಮೀಕಿ ನಾಯಕ ಸಂಘದ ಗ್ರಾಮ ಘಟಕದ ಅಧ್ಯಕ್ಷ ದೇವಿಂದ್ರಪ್ಪ ಚಿಕ್ಕನಹಳ್ಳಿಯವರ ಬಗ್ಗೆ ಅವಾಚ್ಯ ಪದಗಳಿಂದ ಪತ್ರ ಬರೆದು ವಾಲ್ಮೀಕಿ ಮೂರ್ತಿಯ ಬಳಿಯಲ್ಲಿ ಇಟ್ಟಿರುವ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು,ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿ ಕಿಡಿಗೇಡಿಗಳ ವಿರುದ್ಧ ಆಕ್ರೋಶ ಭರಿತ ಘೋಷಣೆಗಳನ್ನು ಕೂಗಿದರು.ನಂತರ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿದ ನಂತರ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿ ಪ್ರತಿಭಟನೆ ನಿಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡ ದೇಸಾಯಿ,ದೇವಿಂದ್ರಪ್ಪ ಚಿಕ್ಕನಹಳ್ಳಿ,ಗ್ರಾ.ಪಂ ಮಾಜಿ ಅಧ್ಯಕ್ಷ ಸಣ್ಣ ದೇಸಾಯಿ,ಗ್ರಾ.ಪಂ ಸದಸ್ಯ ದೇವಿಂದ್ರಪ್ಪ,ಹೊನ್ನಯ್ಯ ಕೊಂಗಂಡಿ,ನಾಗಪ್ಪ ಚಿಕ್ಕನಹಳ್ಳಿ,ವೆಂಕಟೇಶ ಬೇಟೆಗಾರ,ನಾನಗೌಡ ಕರಡಕಲ್,ಮಲ್ಲಯ್ಯ ದೀವಳಗುಡ್ಡ, ಬಸವರಾಜ ಕೋತಿಗುಡ್ಡ,ದ್ಯಾವಣ್ಣ ಕಟ್ಟಿಮನಿ,ಗುಡದಪ್ಪ ಚಿಕ್ಕನಹಳ್ಳಿ,ಆದಪ್ಪ ಲಿಂಗದಹಳ್ಳಿ,ಮಾನಪ್ಪ ಕೇರಿಕೋಡಿ,ಸಕ್ರೆಪ್ಪ ದೀವಳಗುಡ್ಡ,ನಾಗಪ್ಪ ಕನ್ನೆಳ್ಳಿ ಗುತ್ತೇದಾರ,ಅಂಬ್ಲಯ್ಯ ಬೇಟೆಗಾರ,ನಿಂಗಣ್ಣ ಚಿಕ್ಕನಹಳ್ಳಿ,ಮಾರ್ಥಂಡಪ್ಪ ಕೊಂಗಂಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420