ಶಹಾಬಾದ: ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿ ಮಾಡಬೇಕು.ಅರ್ಜಿ ಹಾಕಿದ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಒತ್ತಾಯಿಸಿ ಶುಕ್ರವಾರ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ತಾಪಂ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು ಪ್ರಸಕ್ತ ವರ್ಷ ಸಮಯಕ್ಕೆ ಸರಿಯಾಗಿ ಮಳೆ ಬಾರದೇ ಕೃಷಿ ಕೂಲಿ ಕಾರ್ಮಿಕರು, ರೈತರಿಗೆ ಎಲ್ಲಿಲ್ಲದ ತೊಂದರೆಯುಂಟಾಗಿದೆ. ರೈತರನ್ನೆ ನಂಬಿ ಜೀವನ ಮಾಡುವ ಕೂಲಿ ಕಾರ್ಮಿಕರ ಬದುಕು ಸಂಕಷ್ಟದಲ್ಲಿದೆ.ಇಂತಹ ಸಂದರ್ಭದಲ್ಲಿ ಉದ್ಯೋಗ ಖಾತ್ರ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ ನೀಡಬೇಕಾಗಿರುವುದು ಗ್ರಾಪಂಗಳ ಆದ್ಯ ಕರ್ತವ್ಯ.ಆದರೆ ಪಿಡಿಓಗಳು ಕೆಲಸ ನೀಡದೇ ಸತಾಯಿಸುತ್ತಿದ್ದಾರೆ.ಕೂಡಲೇ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿದಲ್ಲದೇ ವಿವಿಧ ಬೇಡಿಕೆಗಳಾದ ಕೂಲಿ ಕಾರ್ಮಿಕರಿಗೆ 600 ರೂ. ಕೂಲಿ ಹೆಚ್ಚಳ ಮಾಡಬೇಕು. ಫಾರಂ ನಂಬರ್ 6ರ ಅರ್ಜಿ ನೀಡಿ ಇಪ್ಪತ್ತು ದಿನಗಳಾದರೂ ಕೆಲಸ ನೀಡದ ಪಿಡಿಓ ಮೇಲೆ ಶಿಸ್ತಿನ ಕ್ರಮ ಜರುಗಿಸಬೇಕು.
ಶಹಾಬಾದ ತಾಲೂಕಿನಲ್ಲಿ ಎಲ್ಲಾ ಗ್ರಾಪಂಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜರುಗಿಸಬೇಕು. ಎಲ್ಲಾ ಕೂಲಿ ಕಾರ್ಮಿಕರಿಗೆ ಉದ್ಯೋಗ ಚೀಟಿ ನೀಡಬೇಕು.ಫಾರಂ ನಂ. 5ರ ಅರ್ಜಿ ನೀಡಿದ ಕೂಲಿ ಕಾರ್ಮಿಕರಿಗೆ ಕೂಡಲೇ ಕೆಲಸ ನೀಡಬೇಕು. ಮರತೂರ ಹಾಗೂ ದೇವನ ತೆಗನೂರ ಗ್ರಾಮದಲ್ಲಿ ಆರು ದಿನಗಳ ಕಾಲ ಕೆಲಸ ಮಾಡಿದರೂ ಕೂಡ ಕೇವಲ ಎಂದೆರಡು ಹಾಜರಿ ಹಾಕಿದ್ದಾರೆ.ಪುನಃ ಎನ್ಎಮ್ಆರ್ ತೆಗೆದು ಎಲ್ಲಾ ಹಾಜರಿ ಹಾಕಿಕೊಡಬೇಕು.ಮುಗುಳನಾಗಾವ ಗ್ರಾಮದ ಕೂಲಿ ಕಾರ್ಮಿಕರಿಗೆ ಒಂದು ವಾರ ದುಡಿಸಿಕೊಂಡು ಎನ್ಎಮ್ಆರ್ ಸೊನ್ನೆ ಮಾಡಿರುತ್ತಾರೆ.ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಭೀಮಶೇಟ ಯಂಪಳ್ಳಿ, ತಾಲೂಕಾಧ್ಯಕ್ಷೆ ಶೇಖಮ್ಮ ಕುರಿ, ಜಿಲ್ಲಾ ಸಹಸಂಚಾಲಕ ಕಾಶಿನಾಥ ಬಂಡಿ,ಜಿಲ್ಲಾಸಹ ಕಾರ್ಯದರ್ಶಿ ದಿಲೀಪ್ ನಾಗೂರೆ, ವಿಜಯಲತಾ ಸಂಖಾ,ಫತೃಸಾಬ ಇನಾಮದಾರ, ಬಸಮ್ಮ ತಳವಾರ, ಬಾಬುರಾವ ಹೊನಗುಂಟಾ,ಬಸಮ್ಮ ತಳವಾರ, ಬಲಭೀಮ, ಭಾಗ್ಯಶ್ರೀ,ನಾಗಮ್ಮ, ದಸ್ತಗಿರಿ ಮಲ್ಲಣ್ಣ. ಸಿ.ಹೊನಗುಂಟಾ, ಸಾವಿತ್ರಿ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…