ಪುರಾಣ ವೇದಿಕೆಯಲ್ಲಿ ಉಡಿ ತುಂಬುವ ಕಾರ್ಯಕ್ರಮ

ಕಲಬುರಗಿ: ಮಹಿಳೆಯರಿಗೆ ಜನ್ಮದತ್ತವಾಗಿ ತಾಳ್ಮೆ ಗುಣಬಂದಿರುತ್ತದೆ. ಅದಕ್ಕಾಗಿ ಅವರನ್ನು ಸಹನಾಮೂರ್ತಿಗಳೆಂದು ಸಮಾಜ ಗುರುತಿಸುತ್ತದೆ. ಪ್ರತಿಯೊಬ್ಬ ಹೆಣ್ಣು ಮಗಳಿಗೆ ಉಡಿ ತುಂಬುವುದರಿಂದ ಅವರಲ್ಲಿ ತಾಯಿತನಕ್ಕೆ ಗೌರವ ಸಿಕ್ಕಂತ್ತಾಗುತ್ತದೆ ಎಂದು ಗೋಳಾ (ಬಿ) ಪೂಜ್ಯ ಶ್ರೀ ಚನ್ನಮಲ್ಲ ಸ್ವಾಮಿಗಳು ಆರ್ಶೀವಚನ ನೀಡಿದರು.

ಸೇಡಂ ರಸ್ತೆಯ ಬಸವೇಶ್ವರ ಆಸ್ಪತ್ರೆ ಎದುರುಗಡೆಯಲ್ಲಿರುವ ವಿದ್ಯಾನಗರ ಕಾಲೋನಿಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿದ್ಯಾನಗರ ವೆಲ್‌ಫೇರ್ ಸೊಸೈಟಿ ವತಿಯಿಂದ ಹಮ್ಮಿಕೊಂಡ ಗರಗದ ಮಡಿವಾಳೇಶ್ವರ ಪುರಾಣ ಕಾರ್ಯಕ್ರಮದಲ್ಲಿ ತಾಯಂದಿರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಸಿಕೊಟ್ಟ ಪೂಜ್ಯ ಶ್ರೀಗಳು ಆರ್ಶೀವಚನ ಮಾಡಿದರು.

ಉಡಿ ತುಂಬುವ ಕಾರ್ಯಕ್ರಮದಲ್ಲಿ ಸುಮಾರು ೩೨೫ ಕ್ಕಿಂತ ಹೆಚ್ಚು ತಾಯಂದಿರಿಗೆ ಉಡಿ ತುಂಬಿ ಗೌರವಿಸಲಾಯಿತು. ಉಡಿ ತುಂಬುವ ಕಾರ್ಯಕ್ರಮದ ಪ್ರಾಯೋಜಕರಾದ ಡಾ. ಸಂತೋಷ ಪಾಟೀಲ ದಂಪತಿಗಳು ಪಾದಪೂಜೆ ನಡೆಸಿಕೊಟ್ಟರು. ಶಿವಶರಣೆ ಅಕ್ಕಮಹಾದೇವಿ ಮಹಿಳಾ ಟ್ರಸ್ಟ್ ಸದಸ್ಯರು ಉಡಿ ತುಂಬುವ ಕಾರ್ಯ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿವಿದ ಸುತ್ತ-ಮುತ್ತಲಿನ ಅಂದರೆ ಪ್ರಗತಿ ಕಾಲೋನಿ, ಗುಬ್ಬಿ ಕಾಲೋನಿ, ಬಡೇಪೂರ ಕಾಲೋನಿ, ಆದರ್ಶ ನಗರ, ಜಯನಗರ, ಎಂ.ಬಿ.ನಗರ ಹೀಗೆ ಸುಮಾರು ೫೦೦ ಕ್ಕಿಂತಲೂ ಹೆಚ್ಚಿನ ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಭಕ್ತಾಧಿಗಳು ಸ್ವ-ಖುಷಿಯಿಂದ ತಂದಿರುವಂತಹ ಮಾಲ್ದಿ ಎಲ್ಲಾ ಭಕ್ತಾಧಿಕಾರಿಗಳಿಗೆ ಪ್ರಸಾದ ರೂಪದಲ್ಲಿ ಹಂಚಲಾಯಿತ್ತೆಂದು ಸೊಸೈಟಿಯ ಕಾರ್ಯದರ್ಶಿ ಶಿವರಾಜ ಅಂಡಗಿ ತಿಳಿಸಿದ್ದಾರೆ.

ಕಲಾವಿದರಾದ ಜಗದೀಶ ನಗನೂರ, ಜಗದೀಶ ಕಲ್ಲೂರ ಸಂಗೀತ ಸೇವೆ ನೀಡಿದರು. ಸೊಸೈಟಿಯ ಅಧ್ಯಕ್ಷರಾದ ಶ್ರೀ ಮಲ್ಲಿನಾಥ ದೇಶಮುಖ, ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ ಹಾಗೂ ಹಿರಿಯರಾದ ಶ್ರೀ ಅಣವೀರಪ್ಪಾ ಮುಗಳಿ, ಬಸವಂತರಾವ ಜಾಬಶೆಟ್ಟಿ, ಸುಭಾಷ ಮಂಠಾಳೆ, ಮಲ್ಲಿಕಾರ್ಜುನ ನಾಗಶೆಟ್ಟಿ, ನಾಗರಾಜ ಹೆಬ್ಬಾಳ, ಮಹಾದೇವಪ್ಪಾ ಪಾಟೀಲ, ನೀಲಪ್ಪಾ ಧೋತ್ರೆ, ಶಿವಪುತ್ರಪ್ಪಾ ದಂಡೋತಿ, ಶಾಂತಯ್ಯ ಬಿದಿಮನಿ, ವಿನೋದಕುಮಾರ ಜನೆವರಿ, ಡಾ. ಸಂತೋಷ ಪಾಟೀಲ, ಅನಿಲ ನಾಗೂರ, ಸಂತೋಷ ನಿಂಬೂರ, ಅಮೀತ ಸಿಕೇದ, ಶ್ರೀವತ ಸಂಗೋಳಗಿ ಹಾಗೂ ಇತರರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420