ಭಾಲ್ಕಿ; ಹಿರೇಮಠ ಸಂಸ್ಥಾನ ವಿದ್ಯಾಪೀಠ ಅಡಿಯಲ್ಲಿ ನಡೆಯುವ ಗುರುಪ್ರಸಾದ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಸಮಾರಂಭದ ದಿವ್ಯಸಾನಿಧ್ಯ ವಹಿಸಿ, ಗಡಿಭಾಗದಲ್ಲಿ ಕನ್ನಡದ ಕಂಪು ಬೀಸಿದ ಭಾಲ್ಕಿಯ ಹಿರೇಮಠದ ಪರಂಪರೆ ಶ್ರೇಷ್ಠ ಪರಂಪರೆಯಾಗಿದೆ. ಲಿಂಗೈಕ್ಯ ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರು ಗಡಿಭಾಗದಲ್ಲಿ ಕನ್ನಡ ಕಟ್ಟುವ ಮೂಲಕ ನಾಡು, ನುಡಿ ರಕ್ಷಣೆಗಾಗಿ ಅವಿಶ್ರಾಂತವಾಗಿ ಶ್ರಮಿಸಿದರು.
ಕರ್ನಾಟಕದ ಏಕೀಕರಣಕ್ಕಾಗಿ ಟೊಂಕಕಟ್ಟಿ ನಿಂತರು. ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಮೂಲಕ ಕನ್ನಡ ಭಾಷೆಗೆ ಮನ್ನಣೆ ತಂದುಕೊಟ್ಟರು. ಮರಾಠಿ ಮತ್ತು ಉರ್ದು ಭಾಷೆಯ ಪ್ರಾಬಲ್ಯವಿರುವ ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಹೊರಗಡೆ ಉರ್ದುಬೋರ್ಡ ಹಾಕಿ ಒಳಗಡೆ ಕನ್ನಡ ಕಲಿಸಿದ ಕನ್ನಡದ ಪಟ್ಟದ್ದೇವರು ಎಂದರೆ ಪೂಜ್ಯರು ಆಗಿದ್ದರು. ಕನ್ನಡ ಮತ್ತು ಬಸವ ಅವರಿಗೆ ಷಡಕ್ಷರಿ ಮಂತ್ರವೇ ಆಗಿತ್ತು. ಇಂತಹ ಮಹನೀಯರ ಹೋರಾಟದಿಂದ ನಮ್ಮ ನಾಡು ಬೆಳಗುತ್ತಿದೆ ಎಂದು ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ಆಶೀರ್ವಚನ ನೀಡಿದರು.
ಸಮಾರಂಭದ ಅಧ್ಯಕ್ಷತೆ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶರಣ ಸಾಗರ ಈಶ್ವರ ಖಂಡ್ರೆ ಅವರು ವಹಿಸಿದರು. ರಾಷ್ಟ್ರಧ್ವಜಾರೋಹಣ ಮಾನ್ಯ ತಹಸೀಲ್ದಾರರಾದ ಶರಣ ಮಲ್ಲಿಕಾರ್ಜುನ ವಡ್ಡನಕೇರೆ ಇವರಿಂದ ನೆರವೇರಿತು. ನಾಡಧ್ವಜಾರೋಹಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಜಹರ್ ಹುಸೇನ್ ಅವರಿಂದ ನೆರವೇರಿತು.
ಡಾ. ಕಾಮರಾಜ ಜಗ್ಗೆನವರ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ ಭಾಲ್ಕಿ ಹಾಗೂ ತಾಲೂಕಾ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ಸವಿತಾ ಭೂರೆ ಅವರು ಸ್ವಾಗತಿಸಿದರು. ಬಾಬು ಬೆಲ್ದಾಳ ನಿರೂಪಿಸಿದರು. ಸಿದ್ರಾಮ ರಾಜಪೂರೆ ಶರಣು ಸಮರ್ಪಣೆ ಮಾಡಿದರು. ಮುಖ್ಯಗುರುಗಳು, ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು. ಹಿರೇಮಠ ಸಂಸ್ಥಾನದಿಂದ ಪುರಭವನದವರೆಗೆ ಕನ್ನಡಾಂಬೆಯ ಮೆರವಣಿಗೆ ಮಾಡಲಾಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…