ವೀರಶೈವ ಲಿಂಗಾಯತ ಮಹಾ ವೇದಿಕೆಯಿಂದ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಜನ್ಮದಿನದ ನಿಮಿತ್ತ ವಿವಿಧ ಕಾರ್ಯಕ್ರಮ

0
33

ಕಲಬುರಗಿ: ವೀರಶೈವ ಲಿಂಗಾಯತ ಮಹಾ ವೇದಿಕೆ ಕಲಬುರಗಿ ಜಿಲ್ಲಾ, ತಾಲೂಕು ಸಮಿತಿಗಳ ವತಿಯಿಂದ ಇಂದು ಶ್ರೀ ಶರಣಬಸವೇಶ್ವರ ಸಂಸ್ಥಾನದ ಒಂಭತ್ತನೆಯ ಪೀಠಾಧಿಪತಿಗಳಾದ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ರವರ ಜನುಮದಿನದ ನಿಮಿತ್ತ ಶರಣಬಸವೇಶ್ವರ ಗದ್ದುಗೆಗೆ ವೇದಿಕೆಯಿಂದ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ ಹಾಗೂ 501 ಇಷ್ಟಲಿಂಗ ಮಹಾಪೂಜೆ ಹಾಗೂ ಶಿವ ದೀಕ್ಷೆ ಕಾರ್ಯಕ್ರಮ ಹಾಗೂ ಜಂಗಮ ವಟುಗಳಿಗೆ ಅಯ್ಯಚಾರ‌ವನ್ನು ಪರಮ ಪೂಜ್ಯ ಶ್ರೀ ಬೆಳಗುಂಪಿ ಮತ್ತು ಪರಮಪೂಜ್ಯ ಪಾಳಾ ಶ್ರೀಗಳ‌ ದಿವ್ಯ ಸಾನಿಧ್ಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮಹಾವೇದಿಕೆ ರಾಜ್ಯ ಅಧ್ಯಕ್ಷರಾದ ಪ್ರಶಾಂತ್ ಕಲ್ಲೂರ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರಿ ಕವನ ಬಸವಕುಮಾರ್ ಹಾಗೂ ರಾಜ್ಯ ಸಮಿತಿಯ ಸದಸ್ಯರಾದ ಶ್ರೀಧರ್ ನಾಗನಹಳ್ಳಿ ಕಲ್ಬುರ್ಗಿ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷರಾದ ದಯಾನಂದ್ ಪಾಟೀಲ್ ಮತ್ತು ಯುವ ಮುಖಂಡರಾದ ಅಲ್ಲಮಪ್ರಭು ದೇಶಮುಖ ಹಾಗೂ ಉಪಾಧ್ಯಕ್ಷರಾದ ಕಲ್ಯಾಣ್ ರಾವ್ ಪಾಟೀಲ್ ಕಣ್ಣಿ ಹಾಗೂ ಸಂಘಟನಾ ಕಾರ್ಯದರ್ಶಿ ಆನಂದ್ ಕಣಸೂರ ಕಾರ್ಯದರ್ಶಿ ಮಹೇಶಚಂದ್ರ ಪಾಟೀಲ್ ಕಣ್ಣಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ ಮಹಗಾವಂಕರಾ್ ಜಿಲ್ಲಾ ಸಂಚಾಲಕರಾದ ಗುರುರಾಜ್ ಅಂಬಾಡಿ,ಗುರುರಾಜ‌ ಸುಂಟನೂರ ಮತ್ತು ಸುನಿಲ ಕೊಳಕೂರ್ ಮತ್ತು ವೇದಿಕೆ ತಾಲೂಕು, ಜಿಲ್ಲಾ ಸಮಿತಿಗಳ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here