ಬಿಸಿ ಬಿಸಿ ಸುದ್ದಿ

ಶ್ರೀಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಕೋರಿಕೆಯ ಬಸ್ ನಿಲುಗಡೆಗೆ ಒತ್ತಾಯ

ಸುರಪುರ: ದಕ್ಷಿಣ ಶ್ರೀಶೈಲ ಎಂದೇ ಖ್ಯಾತಿ ಪಡೆದಿರುವ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿಯಿರುವ ಶ್ರೀಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಬಳಿಯಲ್ಲಿ ಭಕ್ತರ ಕೋರಿಕೆ ಮೇರೆಗೆ ಬಸ್ ನಿಲುಗಡೆ ಫಲಕವನ್ನು ನೆಟ್ಟು,ಬಸ್ ನಿಲ್ಲಿಸಲು ಕ್ರಮ ವಹಿಸುವಂತೆ ಕರ್ನಾಟಕ ನವ ನಿರ್ಮಾಣ ವೇದಿಕೆಯ ಉತ್ತರ ಕರ್ನಾಟಕ ಅಧ್ಯಕ್ಷ ಶಿವರಾಜ ಕಲಕೇರಿ ಒತ್ತಾಯಿಸಿದರು.

ನಗರದ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿ ಮಾತನಾಡಿ,ಶ್ರೀಮರಡಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ನಿತ್ಯವು ನೂರಾರು ಸಂಖ್ಯೆಯಲ್ಲಿ ನಾಡಿನ ವಿವಿಧ ಭಾಗದಿಂದ ಭಕ್ತರು ಬರುತ್ತಾರೆ.ದೇವಸ್ಥಾನಕ್ಕೆ ಬರುವ ಭಕ್ತರಿಗೆ ಕೃಷ್ಣಾಪುರ ಅಥವಾ ಲಕ್ಷ್ಮೀಪುರ ಬಸ್ ನಿಲ್ದಾಣಗಳಿಂದ ಕಿಲೋ ಮೀಟರ್ ಗಟ್ಟಲೆ ನಡೆದುಕೊಂಡು ಬರುವುದು ಕಷ್ಡದಾಯಕವಾಗಿದೆ.ಇದರಿಂದ ಬರುವ ಭಕ್ತರು ನಿತ್ಯವು ತೊಂದರೆ ಪಡುವಂತಾಗುತ್ತಿದೆ. ಆದ್ದರಿಂದ ಬೀದರ ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಿರುವ ಈ ದೇವಸ್ಥಾನಕ್ಕೆ ಹೋಗುವ ಮುಖ್ಯ ದ್ವಾರದ ಬಳಿಯಲ್ಲಿ ಎಲ್ಲಾ ಬಸ್ಸುಗಳು ಕೋರಿಕೆಯ ಮೇರೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು.ಇಲ್ಲವಾದಲ್ಲಿ ಬಸ್ ಡಿಪೋ ಬಳಿಯಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುವುದು ಎಂದು ಡಿಪೋ ವ್ಯವಸ್ಥಾಪಕರಿಗೆ ಎಚ್ಚರಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಾಯಿ ಬಿರಾದಾರ,ಆಕಾಶ ಕಟ್ಟಿಮನಿ,ವಾಸುದೇವ ನಾಯಕ,ವಿಶ್ವನಾಥರೆಡ್ಡಿ,ಸಾಗರ ಈಳಿಗೇರ,ಆನಂದ ಮಡ್ಡಿ,ಪ್ರಕಾಶ ಕಟ್ಟಿಮನಿ,ನಾಗಭೂಷಣ ಯಾಳಗಿ,ರಮೇಶ ಬಡಿಗೇರ,ಜಗದೀಶ ಪಾಟೀಲ,ಮರೆಪ್ಪ ಚಲುವಾದಿ,ರಾಹುಲ್,ಸುಪ್ರಿತ್ ಜಾಕಾ,ಮಲ್ಲಿಕಾರ್ಜುನ ಸುಬೇದಾರ,ಬಸವರಾಜ ರಸ್ತಾಪುರ ಇತರರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

4 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

6 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago