ಶಹಾಬಾದ: ನಗರಸಭೆಯ 2022-23 ನೇ ಸಾಲಿನ ನಗರ ಉನ್ನತ ಅಡಿಯಲ್ಲಿ ಅಂಗವಿಕಲರಿಗೆ ಅನುದಾನ 5% ಸೌಲಭ್ಯ ವಿತರಣೆ ಮಾಡಬೇಕೆಂದು ಒತ್ತಾಯಿಸಿ ತಾಲೂಕಾ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಘ ಶಹಾಬಾದ ತಾಲೂಕಿನ ಪದಾಧಿಕಾರಿಗಳು ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.
ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾಧ್ಯಕ್ಷ ಮಲ್ಲೇಶಿ ಭಜಂತ್ರಿ ಮಾತನಾಡಿ, ವಿಕಲಚೇತನರಿಗಾಗಿ ನಗರೋತ್ಥಾನ ಯೋಜನೆ ಅಡಿಯಲ್ಲಿ 5% ಅನುದಾನದಲ್ಲಿ ತ್ರಿಚಕ್ರ ವಾಹನ ಹಾಗೂ ಶಸ್ತ್ರ ಚಿಕಿತ್ಸೆ, ಶಿಕ್ಷಣ ಸೇರಿದಂತೆ ಹಲವಾರು ಯೋಜನೆಗಳು ನಿಗದಿಪಡಿಸಲಾಗಿತ್ತು, ಆದರೆ ಒಂದು ವರ್ಷ ಐದು ತಿಂಗಳು ಕಳೆದರು ಕೂಡ ಯಾವುದೇ ವಿಕಲಚೇತನರ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿಲ್ಲ, ಆರ್ಜಿ ಹಾಕಿದ ಫಲಾನುಭವಿಗಳು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಸರ್ಕಾರ ಅಂಗವಿಕಲರಿಗಾಗಿ ಮೀಸಲಿಟ್ಟಿರುವ ಶೇಕಡ 5ರಷ್ಟು ಅನುದಾನದಲ್ಲಿ ಕೂಡಲೇ ಸೌಲಭ್ಯ ವಿತರಿಸಬೇಕೆಂದು ತಾಲೂಕು ವಿಕಲಚೇತನರ ಕ್ಷೇಮಾಭಿವೃದ್ದಿ ಸಂಘದ ತಾಲೂಕ ಅಧ್ಯಕ್ಷ ಚಂದ್ರಕಾಂತ ಪಾಟೀಲ ಪೌರಾಯುಕ್ತರಾದ ಪಂಕಜಾ ರಾವೂರ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು. ಒಂದು ವೇಳೆ ನಿರ್ಲಕ್ಷ ಮಾಡಿದರೆ ಅತಿ ಶೀಘ್ರದಲ್ಲಿ ನಗರ ಸಭೆ ಕಾರ್ಯಾಲಯದ ಎದುರು ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷ ಮಲ್ಲೇಶಿ ಭಜಂತ್ರಿ, ಮೋಹನ ಹಳ್ಳಿ, ಸುಭಾಶ್ಚಂದ್ರ ಕಾಂಬಳೆ, ಮಲ್ಲಿಕಾರ್ಜುನ ಹಳ್ಳಿ, ಸತೀಶ, ವೆಂಕಟೇಶ ಕುಸಾಳೆ, ಲಕ್ಷ್ಮಣ, ಪರಶುರಾಮ, ಅನಿಲ ಮಠಪತಿ, ಲಕ್ಷ್ಮೀಕಾಂತ ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…