ಸುರಪುರ: ತಹಸೀಲ್ದಾರ್ ಕಚೇರಿಯಲ್ಲಿ ಇ-ಕಚೇರಿ ಉದ್ಘಾಟನೆ

  • ಸರಕಾರ ಚುರುಕಾಗಿ ಕೆಲಸ ಮಾಡಲು ಇ-ಕಚೇರಿ ವ್ಯವಸ್ಥೆ ಜಾರಿ

ಸುರಪುರ: ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸರಕಾರ ನೂತನವಾಗಿ ಜಾರಿಗೊಳಿಸಿರುವ ಇ-ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಇ-ಕಚೇರಿ ಉದ್ಘಾಟಿಸಿ ಮಾತನಾಡಿ,ಸಾರ್ವಜನಿಕರಿಗೆ ಪಾರದರ್ಶಕ ಮತ್ತು ಸಮಯಕ್ಕೆ ಅನುಗುಣವಾಗಿ ಸೇವೆಗಳನ್ನು ಒದಗಿಸುವುದರೊಂದಿಗೆ ಸರಕಾರವು ಚುರುಕಾಗಿ ಕೆಲಸ ಮಾಡಲು ಇ-ಕಚೇರಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು ಇದು ತುಂಬಾ ಸಹಕಾರಿಯಾಗಿದೆ ಎಂದರು.ಇ-ಕಚೇರಿಯ ಕಂಪ್ಯೂಟರ್ ಆನಲೈನ್‍ನಲ್ಲಿ ಸಾರ್ವಜನಿಕರು ಕೊಟ್ಟ ಅರ್ಜಿಗಳು ದಾಖಲೆಯಾಗುತ್ತವೆ. ನಂತರ ವಿಲೇವಾರಿ ಬಹಳ ಸುಲಭವಾಗಿ ನಾಗರಿಕರಿಗೆ ಅನುಕೂಲವಾಗುತ್ತದೆ. ಪ್ರತಿಯೊಬ್ಬರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ತಹಸೀಲ್ದಾರ್ ಕೆ.ವಿಜಯಕುಮಾರ ಮಾತನಾಡಿ, ಇ-ಕಚೇರಿ ವ್ಯವಸ್ಥೆ ತುಂಬಾ ಚೆನ್ನಾಗಿದೆ. ಈ ವ್ಯವಸ್ಥೆಯು ಸಾಮಾನ್ಯ ನಾಗರಿಕರ ಕೆಲಸವನ್ನು ವೇಗಗೊಳಿಸುತ್ತದೆ. ಕಡತಗಳನ್ನು ಸರಿಸಲು ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಜನಗಳ ಸಮಯ ಮತ್ತು ಹಣವನ್ನು ಉಳಿಸಲು ಪ್ರಯೋಜನಕಾರಿಯಾಗಿದೆ. ಈಗಾಗಲೇ 87 ಅರ್ಜಿಗಳು ನೋಂದಣಿಯಾಗಿವೆ. ಇ-ಕಚೇರಿ ಸೇವೆಯಲ್ಲಿ ನಮ್ಮ ತಾಲೂಕು ಜಿಲ್ಲೆಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಪ್ರಥಮ ಸ್ಥಾನದಲ್ಲಿ ಬರುವ ನಿಟ್ಟಿನಲ್ಲಿ ಸೇವೆ ನೀಡುವುದಾಗಿ ಭರವಸೆ ನೀಡಿದರು.

ತಾಲೂಕು ಪಂಚಾಯಿತಿ ಇಒ ಬಸವರಾಜ ಸಜ್ಜನ್, ಗ್ರೇಡ್-2 ತಹಸೀಲ್ದಾರ್ ಮಲ್ಲಯ್ಯ ದಂಡು, ಪ್ರಮುಖರಾದ ವಿಠ್ಠಲ ಯಾದವ, ಮಲ್ಲಣ್ಣ ಸಾಹುಕರ ಮುಧೋಳ, ಸುರಪುರ ಬ್ಲಾಕ್ ಕಾಂಗೈ ಅಧ್ಯಕ್ಷ ನಿಂಗರಾಜ್ ಬಾಚಿಮಟ್ಟಿ, ಭಂಡಾರಿ ನಾಟೇಕರ್, ಭೀಮು ನಾಯಕ ಮಲ್ಲಿಭಾವಿ, ಕಂದಾಯ ಇಲಾಖೆಂiÀ ಚನ್ನಬಸವ, ರವಿನಾಯಕ ಬೆನಕನಹಳ್ಳಿ, ಭೀಮು ಯಾದವ ಮಂಗಳೂರು ಸೇರಿ ಇತರರು ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

1 hour ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

1 hour ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

1 hour ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

1 hour ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

1 hour ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420