ಕನ್ನಡ ಸಾಹಿತ್ಯ ಸಂಘದ ರಾಜ್ಯೋತ್ಸವದಲ್ಲಿ ಸಂಗೀತ ಕಾರ್ಯಕ್ರಮ

ಸುರಪುರ: ನಮ್ಮ ಜೀವನದಲ್ಲಿ ನಾವು ಎಲ್ಲರಿಗೂ ಒಳ್ಳಯದನ್ನು ಬಯಸಿದರೆ ಖಂಡಿತವಾಗಿ ನಮಗೂ ಒಳ್ಳಯುದಾಗುತ್ತದೆ ಎಲ್ಲಾ ದಾಸರು, ಶರಣರು, ಸೂಫಿ ಸಂತರು ಇದನ್ನೇ ಸಾರಿದ್ದಾರೆ ನಮ್ಮ ಬದುಕಿನಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ಅಮೂಲ್ಯವಾದ ಮಾನವ ಜನ್ಮವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ವಿಭೂಷಿತ ಖ್ಯಾತ ಸಂಗೀತ ಕಲಾವಿದರಾದ ಹುಸೇನಸಾಬದಾಸ ಕನಕಗಿರಿ ಹೇಳಿದರು.

ನಗರದ ಕನ್ನಡ ಸಾಹಿತ್ಯ ಸಂಘದಲ್ಲಿ ಸಾಂಸ್ಕøತಿಕ ರಾಯಭಾರಿ ಹಾಗೂ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ಅವರ ಪುತ್ಥಳಿ ಅನಾವರಣದ ಪ್ರಥಮ ಪುಷ್ಪಾರ್ಚನೆ ಕಾರ್ಯಕ್ರಮ ನಿಮಿತ್ಯ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಸುರಪುರ ಸಂಸ್ಥಾನವು ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದುಕೊಂಡಿದೆ ಎಂದ ಅವರು ಸುರಪುರದ ಆನಂದದಾಸರು ಸಂಗೀತ ಕ್ಷೇತ್ರದಲ್ಲಿ ಅಗ್ರಗಣ್ಯರಾಗಿದ್ದರು ಎಂದು ಸ್ಮರಿಸಿಕೊಂಡರು.

ಈ ಸಂದರ್ಭದಲ್ಲಿ ಅವರು ದಾಸರ, ಶರಣರ ವಚನಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಸಂಗೀತ ಅಭಿಮಾನಿಗಳ ಮನ ಸೂರೆಗೊಂಡರು, ಸಂಗೀತ ಕಲಾವಿದರಾದ ರೀಟಾ ಹಂಚಾಟೆ, ಮೋಹನರಾವ ಮಾಳದಕರ ಹಾಗೂ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಂಗೀತ ಕಲಾವಿದೆ ನಿರ್ಮಲಾ ರಾಜಗುರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಈಶ್ವರ ಬಡಿಗೇರ, ಆಮಯ್ಯಸ್ವಾಮಿ ಹಾಗೂ ನರಸಿಂಹ ಭಂಡಿ ವಾದ್ಯ ಸಹಕಾರ ನೀಡಿದರು. ನಂತರ ಸ್ಪಂದನಾ ಮೆಲೋಡಿಸ್ ವತಿಯಿಂದ ರಸಮಂಜರಿ ಕಾರ್ಯಕ್ರಮ ಜರುಗಿತು.

ಸಾಹಿತ್ಯ ಸಂಘದ ಅಧ್ಯಕ್ಷ ಬಸವರಾಜ ಜಮದ್ರಖಾನಿ,ಉಪಾಧ್ಯಕ್ಷ ಜೆ.ಅಗಸ್ಟಿನ್ ನ್ಯಾಯವಾದಿಗಳು, ಪ್ರ.ಕಾರ್ಯದರ್ಶಿ ಶ್ರೀನಿವಾಸ ಜಾಲವಾದಿ, ಬಸವರಾಜ ನಿಷ್ಠಿ ದೇಶಮುಖ, ಪ್ರಕಾಶಚಂದ ಜೈನ, ಜಯಲಲಿತಾ ಪಾಟೀಲ, ಶ್ರೀಶೈಲ ಯಂಕಂಚಿ, ರಾಜಶೇಖರ ದೇಸಾಯಿ,ನಬಿಲಾಲ ಮಕಾನದಾರ, ಕನಕಪ್ಪ ವಾಗಣಗೇರಿ, ದೇವು ಹೆಬ್ಬಾಳ, ಎ.ಕಮಲಾಕರ, ರಾಘವೇಂದ್ರ ಭಕ್ರಿ, ನರಸಿಂಹ ಬಾಡಿಯಾಲ, ಶ್ರೀಪಾದ ಗಡ್ಡ, ರಮೇಶ ಕಟ್ಟಿಮನಿ ಇತರರಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

4 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

4 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420