ಕಲಬುರಗಿ: ಪಿಎಸ್ಐ ಮತ್ತು ಕೆಇಎ ಪರೀಕ್ಷೆಗಳಲ್ಲಿ ಆಕ್ರಮ ನಡೆಸಿದ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಇಲ್ಲಿನ ಜೇವರ್ಗಿ ರಸ್ತೆಯ ವರ್ಧಾ ನಗರದ ಪ್ಲಾಟ್ ಒಂದರಲ್ಲಿ ಪೊಲೀಸರು ಬಂಧಿಸಲು ಬಂದಿರುವ ವೇಳೆ ತಪ್ಪಿಸಿಕೊಂಡು ಪರಾರಿಯಾಗಿರುವುದು ವರದಿಯಾಗಿದೆ. ಆತ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೇರಿಯಾಗಿದೆ.
ಆರೋಪಿ ಆರ್.ಡಿ ಪಾಟೀಲ್ ಸೋಮವಾರ ಇಲ್ಲಿನ ವರ್ಧಾ ನಗರದಲ್ಲಿರುವ ಫ್ಲಾಟ್ ಒಂದರಲ್ಲಿ ಅಡಗಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿದ್ದಾರೆ. ಪೊಲೀಸರು ಬರುತ್ತಿದ್ದಂತೆ ಆತ ಫ್ಲಾಟ್ ನ ಕಾಂಪೌಂಡ್ ಮೇಲಿಂದ ಹಾರಿ ತಪ್ಪಿಸಿಕೊಂಡು ಹೋಗಿದ್ದಾನೆನ್ನಲಾಗಿದೆ.
ಇತ್ತೀಚೆಗೆ ನಡೆದಂತಹ ರಾಜ್ಯದ ನಿಗಮ, ಮಂಡಳಿಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದಂತಹ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ನಡೆದ ಪರೀಕ್ಷಾ ಅಕ್ರಮದಲ್ಲಿ ತನ್ನ ಹೆಸರು ಪ್ರಸ್ತಾಪವಾಗಿದ್ದಲ್ಲದೆ, ಪೊಲೀಸ್ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರ್.ಡಿ. ಪಾಟೀಲ ತಲೆ ಮರೆಸಿಕೊಂಡಿದ್ದ.
ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಬ್ಲೂಟೂತ್ ವ್ಯವಸ್ಥೆ ಮಾಡಿಕೊಡಲು ಕಲಬುರಗಿ ನಗರಕ್ಕೆ ಬಂದು ವಸತಿ ಸಮುಚ್ಛಯ ಒಂದರಲ್ಲಿತಂಗಿದ್ದ ಎಂದು ಹೇಳಲಾಗಿತ್ತಿದೆ. ಈ ಹಿಂದೆ ಮನೆಯ ಹಿಂಬಾಗಿಲಿಸಿಂದ ಪರಾರಿಯಾಗಿದ್ದ ಆರ್.ಡಿ ಪಾಟೀಲ್; ಈ ಹಿಂದೆ (2023ರ ಜನವರಿ 20) ಪಿಎಸ್ಐ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್ ನೀಡಲು ಸಿಐಡಿ ಅಧಿಕಾರಿಗಳು ಆರ್.ಡಿ. ಪಾಟೀಲ್ ಮನೆಗೆ ತೆರಳಿದ್ದ ವೇಳೆ ಆತ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿದ್ದ ಘಟನೆ ವರದಿಯಾಗಿತ್ತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…