ಕಲಬುರಗಿ: ಮಾನವರೆಲ್ಲರೂ ಒಂದೆಯಾಗಿದ್ದು, ಹುಟ್ಟಿದ ಧರ್ಮ, ಜಾತಿಗಳ ಆಧಾರದ ಮೇಲೆ ಮೇಲು-ಕೀಳು ಭಾವನೆಗಳು ಮನುಷ್ಯನ ವ್ಯಕ್ತಿತ್ವ ಕುಗ್ಗಿಸುತ್ತವೆ. ಇವೆಲ್ಲವುಗಳನ್ನು ಮೀರಿ ಉನ್ನತವಾದ ವ್ಯಕ್ತಿತ್ವ ನಮ್ಮದಾಗಿಸಿಕೊಳ್ಳಬೇಕು. ಎಲ್ಲಾ ಮಹಾತ್ಮರು ಸಮಾಜಕ್ಕೆ ನೀಡಿದ ವಿಶ್ವ ಭ್ರಾತೃತ್ವ ಮೌಲ್ಯಗಳು ಒಂದೆಯಾಗಿದ್ದು, ಅವುಗಳನ್ನು ತಿಳಿದುಕೊಂಡು ಅನುಸರಿಸುವುದರಲ್ಲಿ ನಾವು ಎಡವಿದ್ದರಿಂದ ಆಗಾಗ್ಗೆ ಕೋಮು ಗಲಭೆಗಳಾಗುತ್ತವೆ. ಆದ್ದರಿಂದ ಎಲ್ಲರಲ್ಲಿ ಸಾಮರಸ್ಯ ಮನೋಭಾವ ಬೆಳೆಸಿಕೊಂಡರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಇಸ್ಲಾಂ ಧಾರ್ಮಿಕ ಮುಖಂಡ, ಸಜ್ಜಾದ್ ನಸೀನ್ ಸೈಯದ್ ಷಾ ಮುರ್ತುಜಾ ಖಾದ್ರಿ ಅಲ್ಮಾರೋ ಸಂಜೀರಬಾಬಾ ಹೇಳಿದರು.
ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ನಲ್ಲಿರುವ ‘ಹಜರತ್ ಹಸನ್ಷಾ ಖಾದ್ರಿ ದರ್ಗಾದ 37ನೇ ಉರುಸ್’ನ ನಿಮಿತ್ಯ ‘ಖಾದ್ರಿ ದರ್ಗಾ ಸಮಿತಿ’ ವತಿಯಿಂದ ಮಂಗಳವಾರ ಸಂಜೆ ಏರ್ಪಡಿಲಾಗಿದ್ದ ಕೋಮು ಸಾಮರಸ್ಯ ಕಾರ್ಯಕ್ರಮ ಮತ್ತು ವಿವಿಧ ಧರ್ಮಗಳ ಮುಖಂಡರು, ಸಮಾಜ ಸೇವಕರಿಗೆ ಸತ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ದೇವನೊಬ್ಬ, ನಾಮ ಹಲವು. ಜಾತಿ, ಧರ್ಮಗಳ ಆಧಾರದ ಮೇಲೆ ಕಲಹ, ಜಗಳವಾಡಿದರೆ ಯಾವುದೇ ಪ್ರಯೋಜನೆಯಿಲ್ಲ. ಎಲ್ಲರೂ ಜೊತೆಗೂಡಿ ಸಾಗಬೇಕು. ಪ್ರತಿಯೊಬ್ಬರಲ್ಲಿ ಪ್ರೀತಿ, ವಿಶ್ವಾಸ, ನಂಬಿಕೆ ಬೆಳೆಸಿಕೊಂಡು ಹೋಗಬೇಕು. ಎಲ್ಲಾ ಧರ್ಮಗಳ ತಿರುಳು ಒಂದೆಯಾಗಿದ್ದು, ಅದನ್ನು ಅರಿಯದೆ ಕಚ್ಚಾಟದಲ್ಲಿ ತೊಡಗಿರುವುದು ವಿಷಾದನೀಯ ಸಂಗತಿಯಾಗಿದೆ. ಉರುಸ್ ನಿಮಿತ್ಯ ಪ್ರತಿವರ್ಷ ಇಂತಹ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯವಾಗಿದೆ. ಇದರಿಂದ ಪರಸ್ಪರ ಸ್ನೇಹ, ಭ್ರಾತೃತ್ವಭಾವನೆ ಬೆಳೆಯಲು, ಸಹ ಜೀವನ ಸಾಗಿಸಲು ಪೂರಕವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಸೈಯದ್ ಷಾ ಇಜಫರ್ಬಾದ್ರಿ ಅಲ್ಮಾರೋ, ಜಾಫರಬಾಬಾ, ಸೈಯದ್ ಷಾ ಮಜರ್ಖಾದ್ರಿ ಅಲ್ಮಾರೋ ಮೋಹಸಿನ್ಬಾಬಾ, ಚಂದ್ರಕಾಂತ ಬಿರಾದಾರ, ಬಸವರಾಜ ಬೆಣ್ಣೆಶಿರೂರ್ ನೀಲೂರ್, ಪರಮೇಶ್ವರ ಹಳೆಜೋಳ, ನಿಜಲಿಂಗಪ್ಪ ಹಳೆಮನಿ, ಸೈಯದ್ ನಜಿರೋದ್ದಿನ್ ಮುತ್ವಲಿ, ಅಶೋಕ ಕದಮ್, ಶರಣಗೌಡ ಪಾಟೀಲ, ಶರಣಪ್ಪ ಶೆಟಗಾರ, ಅಶೋಕ ಕುಮಾರ, ದಯಾನಂದ ಹೊಡಲ, ಶಿವಯೋಗಪ್ಪ ಬಿರಾದಾರ ಬಾಳ್ಳಿ ಸೇರಿದಂತೆ ಜಿಲ್ಲೆ, ರಾಜ್ಯ ಹಾಗೂ ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ ಮತ್ತು ಗುಜರಾತ ರಾಜ್ಯದ ಅನೇಕ ಜನ ಭಕ್ತಾದಿಗಳು ಪಾಲ್ಗೊಂಡಿದ್ದರು.
ದರ್ಗಾದ ಸಮಿತಿ ವತಿಯಿಂದ ಆಗಮಿಸಿದ್ದ ಎಲ್ಲಾ ಭಕ್ತಾದಿಗಳಿಗೆ ಊಟ, ನೀರು, ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಉರುಸ್ನ ಸಾಂಪ್ರದಾಯಿಕ ಕಾರ್ಯಕ್ರಮಗಳು ಹಾಗೂ ಸಂಗೀತ ಜರುಗುತ್ತಿವೆ.
ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ.ಪಿ.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…
ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…
ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…
ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…
ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…
ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…