ಕಲಬುರಗಿ: ಪ್ರವಾದಿ ಮುಹಮ್ಮದ್ ( ಸ.ಅ.) ಜೀವನದ ಸಂದೇಶಗಳ ಕುರಿತು “ದ” ವಾಹ ಲೈಫ್ ಆಫ್ ಪ್ರಾಫಿಟ್ ಮೊಹಮ್ಮದ್ (ಸ.ಅ.) ವಿಷಯಾಧಾರಿತ ಜಮಾತೆ ಇಸ್ಲಾಮಿ ಹಿಂದ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ನವೆಂಬರ್ 26 ರಂದು ಮೂರು ಅತ್ಯುನ್ನತ ಆಯ್ಕೆಯಾದ ವಿಜೆತರಿಗೆ ನಗದು ಬಹುಮಾನ ನೀಡಲಾಗುವುದೆಂದು ಆಯೋಜಕರಾದ ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಈ ಸ್ಪರ್ಧೆ ಪ್ರೌಢಶಾಲಾ, ಪಿಯು ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ನಡೆಸಲಾಗುತಿದೆ. ಮೊಹಮ್ಮದ್ (ಸ.ಅ) ಅವರ ಜೀವನ್ ಮತ್ತು ಸಂದೇಶಗಳ ಬಗ್ಗೆ ಇಂಗ್ಲಿಷ್ ಅಥವಾ ಉರ್ದು ಭಾಷೆಯಲ್ಲಿ 30 ನಿಮಿಷಗಳ ಕಾಲವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆ ನವೆಂಬರ್ 20ರ ಒಳಗಾಗಿ ನಡೆಸಲಾಗುತ್ತಿದೆ. ಈಗಾಗಲೇ ಕೆಲವೊಂದು ಶಾಲಾ, ಕಾಲೇಜುಗಳಲ್ಲಿ ನಡೆಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು ನವೆಂಬರ್ 20ರ ಒಳಗೆ ನಗರದ ಸಂಘತ್ರಾಶ್ ವಾಡಿ ಬಸ್ ನಿಲ್ದಾಣದ ಹತ್ತಿರದ ಹಿದಾಯತ್ ಸೆಂಟರ್ ನಲ್ಲಿ ಈ ಪ್ರಬಂಧ ಸ್ಪರ್ಧೆಯ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಇ-ಮೀಡಿಯಾ ಲೈನ್ ಗೆ ಮಾಹಿತಿ ನೀಡಿದರು.
ಸ್ಪರ್ಧೆಯಲ್ಲಿ ಆಯ್ಕೆಯಾಗುವ ಅತ್ಯುನ್ನತ ಮೂರು ಪ್ರಬಂಧ ಸ್ಪರ್ಧಾ ವಿಜೆತರಿಗೆ ನಗದು ಬಹುಮಾನ ನೀಡಲಾಗುತ್ತದೆ. ಮೊದಲನೇ ಬಹುಮಾನ 15 ಸಾವಿರ, ಎರಡನೇ ಬಹುಮಾನ 10 ಸಾವಿರ ಮತ್ತು ಮೂರನೇ ಬಹುಮಾನ 5 ಸಾವಿರ ಬಹುಮಾನ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8095353250, 8095353250ಗೆ ಸಂಪರ್ಕಿಸಬಹುದು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…