ಮನುಷ್ಯ ಹುಟ್ಟಿನಿಂದ ಅಂತ್ಯ ಸಂಸ್ಕಾರದ ವರೆಗೆ ಕಾನೂನುಗಳು ಕಾಪಾಡುತ್ತವೆ; ನ್ಯಾ:ಮಲ್ಲಿಕಾರ್ಜುನ

ಸುರಪುರ:ಯಾವುದೇ ಮನುಷ್ಯನು ಗರ್ಭದಲ್ಲಿರುವಾಗಿನಿಂದ ಹಿಡಿದು ಸಾವಿನ ನಂತರದ ಅಂತ್ಯಸಂಸ್ಕಾರದ ವರೆಗೆ ಆತನನ್ನು ಈ ದೇಶದ ಕಾನೂನುಗಳು ಕಾಪಾಡುತ್ತವೆ ಎಂದು ನ್ಯಾಯಾಧೀಶ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿ ತಿಳಿಸಿದರು.

ನಗರದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ,ತಾಲೂಕು ವಕೀಲರ ಸಂಘ,ತಾಲೂಕು ಆಡಳಿತ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಪ್ರತಿಯೊಬ್ಬ ಮನುಷ್ಯನಿಗೆ ಕಾನೂನುಗಳು ತುಂಬಾ ಅಗತ್ಯವಾಗಿವೆ,ಇಂದು ಎಲ್ಲರು ಕಾನೂನುಗಳ ಅಡಿಯಲ್ಲಿಯೇ ಜೀವಿಸಬೇಕಾಗಿದೆ,ಅದರಿಂದಾಗಿಯೆ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯನ್ನು 1985ರ ನವೆಂಬರ್ 9 ರಂದು ಆರಂಭಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮತ್ತೋರ್ವ ನ್ಯಾಯಾಧೀಶ ಮಾರುತಿ ಕೆ ಅವರು ಮಾತನಾಡಿ,ಜನ ಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸುವುದು,ಜನರಿಗೆ ಕಾನೂನಿನ ನೆರವು ನೀಡುವುದು,ಲೋಕ ಅದಾಲತ್ ಮೂಲಕ ನ್ಯಾಯಾಲಯ ಅಥವಾ ಇತರೆ ಕಚೇರಿಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸುವುದು,ಕಾನೂನು ಅರಿವು ನೆರವು ಕಾರ್ಯಕ್ರಮವೂ ಕೂಡ ಈ ರಾಷ್ಟ್ರೀಯ ಕಾನೂನುಗಳ ಅಧಿನಿಯಮಗಳಲ್ಲಿಯೇ ಬರುತ್ತದೆ ಎಂದು ತಿಳಿಸಿದರು.

1987ರ ಕಾನೂನು ಅಧಿನಿಯಮದ ಪ್ರಕಾರ ಕಾನೂನಿನ ನೆರವು ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು,ಮಾನಸಿಕ ಅಶ್ವಸ್ಥ ವ್ಯಕ್ತಿಗಳು,ಕೈಗಾರಿಕೆಗಳ ಕಾರ್ಮಿಕರು,ಮಹಿಳೆ ಮತ್ತು ಮಕ್ಕಳು ಉಚಿತ ಕಾನೂನಿನ ನೆರವು ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ವಕೀಲ ನಿಂಗಣ್ಣ ಚಿಂಚೋಡಿ ರಾಷ್ಟ್ರೀಯ ಕಾನೂನು ಸೇವೆಗಳ ಕುರಿತು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ತಾಲೂಕು ಅಧ್ಯಕ್ಷ ರಮಾನಂದ ಕವಲಿ ಮಾತನಾಡಿದರು.ವೇದಿಕೆ ಮೇಲೆ ಸಹಾಯಕ ಸರ್ಕಾರಿ ಅಭಿಯೋಜಕರಾದ ಸುರೇಶ ಪಾಟೀಲ್,ಮರೆಪ್ಪ ಹೊಸ್ಮನಿ ಇದ್ದರು.ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನಂದಕುಮಾರ ಕನ್ನೆಳ್ಳಿ ನಿರೂಪಿಸಿದರು,ಸಂತೋಷಕುಮಾರ ಗಾರಂಪಳ್ಳಿ ವಂದಿಸಿದರು.ಕಾರ್ಯಕ್ರಮದಲ್ಲಿ ಅನೇಕ ಜನ ವಕೀಲರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

3 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

6 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

10 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

11 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

13 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420