ಬಿಸಿ ಬಿಸಿ ಸುದ್ದಿ

ಭಾಷೆ ಸಂಸ್ಕøತಿಯ ಪ್ರತಿಬಿಂಬ: KKRDB ಅಧ್ಯಕ್ಷ ಡಾ. ಅಜಯಸಿಂಗ್

ಕಲಬುರಗಿ: ನಗರದ ಕನ್ನಡ ಭವನದ ಪ್ರಾಂಗಣದಲ್ಲಿ ಲಿಂ.ಲಕ್ಷ್ಮೀಬಾಯಿ ಗೌಡತಿ ಹೆಚ್. ಪೊ.ಪಾಟೀಲ ಹಾಗೂ ಲಿಂ. ಮಲ್ಕಣ್ಣಗೌಡ ಪೊ.ಪಾಟೀಲ ಕಲ್ಲೂರ ಅವರ ಸ್ಮರಣಾರ್ಥವಾಗಿ ಬಿ.ಎಂ.ಪಾಟೀಲ ಕಲ್ಲೂರ ಅವರು ಒಂದು ಸಭಾ ಕೊಠಡಿಯನ್ನು ನಿರ್ಮಿಸಿಕೊಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಅದರ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಜರುಗಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೆ.ಕೆ.ಆರ್.ಡಿ.ಬಿ.ಅಧ್ಯಕ್ಷ ಡಾ. ಅಜಯಸಿಂಗ್, ಭಾಷೆ ಎಂಬುದು ನಮ್ಮ ಸಂಸ್ಕøತಿಯ ಪ್ರತಿಬಿಂಬವಾಗಿದೆ. ಮನುಷ್ಯ ತಲೆಮಾರಿನಿಂದ ಬಳಸಿಕೊಂಡು ಬಂದಿರುವ ಭಾಷೆಗೆ ಒಂದು ಸಾಂಸ್ಕøತಿಕ ಆವರಣ ಬಂದಿರುತ್ತದೆ. ಅದಕ್ಕೆ ನಾವು ಮಾತೃಭಾಷೆ ಎಂದು ಕರೆಯುತ್ತೇವೆ. ಮಾತೃಭಾಷೆಯ ಮೂಲಕವೇ ನಮ್ಮ ಜೀವನವಾಗಲೀ ಅಥವಾ ಬದುಕು ಆರಂಭವಾಗಿರುತ್ತದೆ. ಆದ್ದರಿಂದ ಭಾಷೆ ಮತ್ತು ಬದುಕು ಬೇರೆಯಲ್ಲ. ಅವೆರಡೂ ಒಂದು ನಾಣ್ಯದ ಎರಡು ಮುಖಗಳಾಗಿವೆ ಎಂದ ಅವರು, ಕನ್ನಡ ಸಾಹಿತ್ಯ ಪರಿಷತ್ತು ನಮ್ಮ ನಾಡಿನ ಅತ್ಯಂತ ಶ್ರೇಷ್ಠ ಸಾಹಿತ್ಯ, ಸಾಂಸ್ಕøತಿಕ ಸಂಘಟನೆಯಾಗಿದ್ದು, ಇದರಿಂದ ಕನ್ನಡ ಸಾಹಿತ್ಯ ಮತ್ತು ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ವಿಜಯಕುಮಾರ ತೇಗಲತಿಪ್ಪಿ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿತ್ಯ ನೂತನ ಹೊಸ ಆಲೋಚನೆಗಳಿಂದ ಕೂಡಿದ, ವಿಭಿನ್ನ ಪ್ರಯೋಗದೊಂದಿಗೆ ಕಾರ್ಯಕ್ರಮಗಳನ್ನು ಆಯೋಜಿಸಿ ಅತ್ಯಂತ ಪ್ರಾಮಾಣಿಕತೆಯ ಮೂಲಕ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಕನ್ನಡ ಭವನದ ಅಭಿವೃದ್ಧಿಗಾಗಿ ಬಾಕಿ ಉಳಿದ ಕಾಮಗಾರಿಗಳಿಗಾಗಿ ಮಂಡಳಿಯ ವತಿಯಿಂದ ಸೂಕ್ತ ಅನುದಾನ ಒದಗಿಸಿಕೊಡುತ್ತೇನೆ ಎಂಬ ಭರವಸೆ ನೀಡಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಸರಕಾರದ ಸಹಾಯ ಪಡೆಯುವದರ ಜತೆಗೆ ಸಾಹುಕಾರರ ಸಹಾಯ ಪಡೆದು ಕನ್ನಡ ಭವನದ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ. ಪರಿಷತ್ತಿನ ನಿರಂತರವಾದ ಸಾಂಸ್ಕøತಿಕ ಕಾರ್ಯಕ್ರಮಗಳ ಜೊತೆ ಜೊತೆಗೆ ಭವನದ ಭೌತಿಕ ಕಟ್ಟಡಗಳ ಅಭಿವೃದ್ಧಿಗಾಗಿಯೂ ಕೂಡ ಪದಾಧಿಕಾರಿಗಳೆಲ್ಲರೂ ಸೇರಿ ಶ್ರಮಿಸುತ್ತಿದ್ದೇವೆ. ಸಾಂದರ್ಭಿಕ ಸಂದರ್ಭಗಳನ್ನು ಬಳಸಿಕೊಂಡು ಆಯಾ ವರ್ಗಕ್ಕೆ ಸಂಬಂಧಿಸಿದ ಸಮ್ಮೇಳನಗಳನ್ನು ಏರ್ಪಡಿಸಿ ಎಲ್ಲಾ ಕನ್ನಡದ ಮನಸ್ಸುಗಳನ್ನು ಒಂದುಗೂಡಿಸಿ, ಕನ್ನಡದ ಸಂಸ್ಕøತಿಯ ಚಿಂತನೆಯನ್ನು ಸದಾ ಕಾಲ ನೆನಪಿಸುತ್ತ ಕನ್ನಡ ಕಟ್ಟುವ ಕಾರ್ಯವನ್ನು ಮಾಡಲಾಗುತ್ತಿದೆ. ಆ ಮೂಲಕ ಕನ್ನಡ ಭಾಷೆಯನ್ನು ನಿತ್ಯ ಬಳಸುವ ಮೂಲಕ ಕನ್ನಡತನವನ್ನು ನಾವೆಲ್ಲರೂ ಸದಾ ಕಾಲ ಉಳಿಸಿಕೊಳ್ಳಬೇಕಾಗಿದೆ ಎಂದರು. ಕನ್ನಡ ಕಟ್ಟುವ ಕಾರ್ಯಕ್ಕೆ ಸರ್ವರೂ ಕೈಜೋಡಿಸಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಸಾರಂಗಮಠದ ಜಗದ್ಗುರು ಡಾ. ಸಾರಂಗಧರ ದೇಶಿಕೇಂದ್ರ ವiಹಾಸ್ವಾಮಿಗಳು, ಸೊನ್ನ ವಿರಕ್ತ ಮಠದ ಶ್ರೀ ಡಾ. ಶಿವಾನಂದ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಜರುಗಿದ ಸಮಾರಂಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ನೆಲೋಗಿ, ಹೆಚ್.ಕೆ.ಇ. ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ, ಪ್ರಮುಖರಾದ ರುದ್ರಗೌಡ ಪಾಟೀಲ ಕಲ್ಲೂರ, ಸಂಗಣ್ಣಗೌಡ ಪಾಟೀಲ ಕಲ್ಲೂರ, ಬಿ.ಎಂ.ಪಾಟೀಲ ಕಲ್ಲೂರ, ರಾಜಶೇಖರ ಸಿರಿ ಮಾತನಾಡಿದರು.

ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಯಶ್ವಂತರಾಯ ಅಷ್ಠಗಿ, ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ವಿಶ್ವನಾಥ ತೊಟ್ನಳ್ಳಿ, ಬಸ್ವಂತರಾಯ ಕೋಳಕೂರ, ಬಾಬುರಾವ ಪಾಟೀಲ, ಶ್ರೀಕಾಂತ ಪಾಟೀಲ ತಿಳಗೂಳ, ದೌಲತರಾವ ಮಾಲಿ ಪಾಟೀಲ, ಶರಣಕುಮಾರ ಬಿಲ್ಲಾಡ, ವಿಶ್ವನಾಥ ಪಾಟೀಲ ಗೌನಳ್ಳಿ, ಮಂಜುನಾಥ ಕಂಬಾಳಿಮಠ, ಗುರುಬಸಪ್ಪ ಸಜ್ಜನಶೆಟ್ಟಿ, ಚಂದ್ರಶೇಖರ ಪಾಟೀಲ ಯಳಸಂಗಿ, ಸಂಗಣ್ಣಗೌಡ ಪಾಟೀಲ ಗುಲ್ಯಾಳÉ, ರಾಜಶೇಖರ ಯಂಕಂಚಿ, ಸಿದ್ಧಣ್ಣಗೌಡ ಪಾಟೀಲ ಕಲ್ಲೂರ, ಜಗದೇವಪ್ಪ ಅಂಜುಟಗಿ, ಶಂಕರ ಹಾದಿಮನಿ, ಮಲ್ಲೇಶಿ ಯಲಗೋಡ, ಪ್ರಭವ ಪಟ್ಟಣಕರ್, ವಿಜಯಕುಮಾರ ಸಾತನೂರ, ರಜಾಕ್ ಮನಿಯಾರ್, ಚಂದು ಹೊಸಮನಿ, ಶಿವಾನಂದ ದ್ಯಾಮಗೊಂಡ, ಶರಣು ಹೊಸಮನಿ, ಚಂದ್ರು ಗೌಡರ್, ಸಂಗನಬಸವ ಹಿರೇಮಠ, ರೇವಪ್ಪ ಕೌಲಗಿ, ಭೀಮರಾಯ ಸಂದಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

1 hour ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

4 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

4 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

5 hours ago