ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ: ವಾಡಿ ಪಟ್ಟಣದಲ್ಲಿ ಸಂಭ್ರಮ

ವಾಡಿ; ಪಟ್ಟಣದ ಬಸ್ ನಿಲ್ದಾಣ ಹತ್ತಿರವಿರುವ ಹನುಮಾನ ಮಂದಿರದಲ್ಲಿ ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆಯಾಗಿದ್ದರಿಂದ ಪಕ್ಷದ ವತಿಯಿಂದ ವಿಶೇಷ ಪೊಜೆ ಸಲ್ಲಿಸಿ ವಿಜಯೋತ್ಸವ ಆಚರಿಸಲಾಯಿತು.ಪಟಾಕಿ ಸಿಡಿಸಿ, ಹಣ್ಣು, ಸಿಹಿ ಹಂಚಿ ಸಂಭ್ರಮ ಹಂಚಿಕೊಂಡ ಕೇಂದ್ರ ಮತ್ತು ರಾಜ್ಯ ಬಿಜೆಪಿ ಮುಖಂಡರಿಗೆ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹಾಗು ಪುರಸಭೆ ವಿರೋಧ ಪಕ್ಷದ ಮಾಜಿ ನಾಯಕ ಭೀಮಶಾ ಜೀರೋಳ್ಳಿ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿ ಬಲಗೊಳ್ಳಲು, ಹಿಂದೆ ಪಕ್ಷ ಅಧಿಕಾರಕ್ಕೆ ಬಂದಿರುವುದಕ್ಕೆ ಅವರು ಶ್ರಮ ಬಹಳಷ್ಟಿದೆ. ಮುಂದೆ ಎಲ್ಲಾ ಸ್ತರಗಳಲ್ಲಿ ಪಕ್ಷ ಅಧಿಕಾರ ಬರುವುದು ಶತ ಸಿದ್ದವಾಗಿದೆ, ಪ್ರಬಲ ಲಿಂಗಾಯತ ಸಮುದಾಯದ ಜೊತೆಗೆ ಎಲ್ಲಾ ಸಮುದಾಯದ ಯುವಕರನ್ನು ಬಿಜೆಪಿಯತ್ತ ಸೆಳೆಯಲು ಇವರ ಆಯ್ಕೆಯ ಅವಶ್ಯಕತೆ ಅರಿತು ಆಯ್ಕೆ ಮಾಡಿದ ನಮ್ಮ ನಾಯಕರುಗಳಿಗೆ ಧನ್ಯವಾದಗಳು ಎಂದರು.

ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಬಿವೈ ವಿಜಯೇಂದ್ರ ಅವರು ಆಯ್ಕೆಯಿಂದ ನಮ್ಮೆಲ್ಲರಿಗೂ ಪಕ್ಷ ಸಂಘನೆಗೆ ಇನ್ನಷ್ಟು ಚೈತನ್ಯ ಸಿಕ್ಕಂತಾಗಿ, ದೊಡ್ಡ ಮಟ್ಟದಲ್ಲಿ ಯುವಕರ ಪಡೆ ಮತ್ತಷ್ಟು ಆ್ಯಕ್ಟಿವ್ ಆಗಿ ಕೆಲಸ ಮಾಡಲಿದೆ.ನಮ್ಮ ನೆಚ್ಚಿನ ಯಡಿಯೂರಪ್ಪರಂತೆ ಬಿ ವೈ ವಿಜಯೇಂದ್ರ ಅವರು ಸಹ ಮುಂದೊಂದಿನ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವುದನ್ನು ಕಾರ್ಯಕರ್ತರು ಎದುರು ನೋಡುತ್ತಿದ್ದಾರೆ. ಇವರ ಆಯ್ಕೆ ಪಕ್ಷದಲ್ಲಿ ಸಂತೋಷದ ಜೊತೆಗೆ ಪಕ್ಷದ ಸಂಘಟನೆ ಶಕ್ತಿಯು ಹೆಚ್ಚಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ, ಪ್ರಧಾನ ಕಾರ್ಯದರ್ಶಿ ರವಿ ನಾಯಕ ಮುಖಂಡರಾದ ವಿಠಲ ನಾಯಕ,ರಾಮಚಂದ್ರ ರಡ್ಡಿ,ಭೀಮಶಾ ಜೀರೋಳ್ಳಿ,ಗಿರಿಮಲ್ಲಪ್ಪ ಕಟ್ಟೀಮನಿ,ಅಶೋಕ ಹರನಾಳ, ಹರಿ ಗಲಾಂಡೆ,ಶರಣಗೌಡ ಚಾಮನೂರ,ದೌಲತರಾವ ಚಿತ್ತಾಪುರಕರ,ಶಿವಶಂಕರ ಕಾಶೆಟ್ಟಿ,ಬಸವರಾಜ ಕಿರಣಗಿ,ರಾಜಶೇಖರ ದೊಪದ,ದತ್ತಾತ್ರೇಯ ಗೌಡಗಾಂವ,ಕಿಶನ ಜಾಧವ,ಜಯಂತ ಪವಾರ,ರಿಚರ್ಡ್ ಮಾರೆಡ್ಡಿ, ಪ್ರೇಮ ರಾಠೊಡ,ಹೀರಾ ನಾಯಕ,ಅರ್ಜುನ ದಹಿಯಾಂಡೆ,ಅಯ್ಯಣ್ಣ ದಂಡೋತಿ,ರಾಜು ಕೊಳಿ, ಬಾಬು ಕುಡಿ,ದೇವೇಂದ್ರ ಬಡಿಗೇರ,ಚಂದ್ರಶೇಖರ ಬೆಣ್ಣೂರಕರ,ಅಂಬ್ರೇಷ ರಡ್ಡಿ,ಮಹೇಂದ್ರ ಕುಮಾರ, ಚಂದ್ರಕಾಂತ ಮೇಲಿನಮನಿ, ಕಾಶಿನಾಥ ಚಿನಗುಂಡಿ ಸೇರಿದಂತೆ ಅನೇಕರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420