ಸುರಪುರ: ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಸರಕಾರ ಅನೇಕ ಯೋಜನೆಗಳನ್ನು ನೀಡಿದ್ದು ಕಟ್ಟಡ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ನಿರೀಕ್ಷಕ ವಿಜೇಂದ್ರ ಕೆ ತಿಳಿಸಿದರು.
ನಗರದ ಕೆಂಭಾವಿ ರಸ್ತೆಯಲ್ಲಿನ ಕಚೇರಿಯಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ತಾಲೂಕು ಘಟಕ ಉದ್ಘಾಟಿಸಿ ಮಾತನಾಡಿ,ನಕಲಿ ಕಟ್ಟಡ ಕಾರ್ಮಿಕರಿಂದ ನೈಜ ಕಟ್ಟಡ ಕಾರ್ಮಿಕರಿಗೆ ಸರಿಯಾಗಿ ಸೌಲಭ್ಯ ಸಿಗುತ್ತಿಲ್ಲ ಎನ್ನುವ ಆರೋಪದ ಮಾತುಗಳು ಕೇಳಿ ಬರುತ್ತಿವೆ,ಅದಕ್ಕಾಗಿಯೇ ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ರದ್ದುಗೊಳಿಸಲಾಗುವುದು,ಇದಕ್ಕೆ ತಾವುಗಳು ಕೈ ಜೋಡಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಅಬಕಾರಿ ಇಲಾಖೆ ಉಪ ನಿರೀಕ್ಷಕಿ ಪೂಜಾ ಖರ್ಗೆ,ಸಂಘದ ಜಿಲ್ಲಾ ಉಸ್ತುವಾರಿ ಗೋಪಾಲ ದೊರೆ,ಗೌರವಾಧ್ಯಕ್ಷ ಶಿವಶರಣಪ್ಪ ಹೆಡಗಿನಾಳ,ಅಧ್ಯಕ್ಷ ಚಂದ್ರಶೇಖರ ಎಲಿಗಾರ,ಬಾಬು ಶಹಾಪುರ,ಅಮರೇಶ ಡಿಯೊ ಉಪಸ್ಥಿತರಿದ್ದರು.
ಸಂಘದ ಪಾದಾಧಿಕಾರಿಗಳಾದ ಉಪಾಧ್ಯಕ್ಷ ಅಮರಪ್ಪ ಹೊನ್ನಳ್ಳಿ,ಪ್ರಧಾನ ಕಾರ್ಯದರ್ಶಿ ಬಸವರಾಜ ಪೂಜಾರಿ,ಖಜಾಂಚಿ ರಾಜು ಕಲಾಲ್,ಕಾರ್ಯದರ್ಶಿ ಚಂದ್ರಾಮಪ್ಪ ಕುಂಬಾರಪೇಟ,ಸಹ ಕಾರ್ಯದರ್ಶಿ ಎಮ್.ಡಿ ಖದಿರ್,ಸಂಚಾಲಕ ಸಿದ್ರಾಮಪ್ಪ ಕರೆಗಾರ,ಸಂಘಟನಾ ಕಾರ್ಯದರ್ಶಿ ರಾಮಯ್ಯ ಯಕ್ತಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…