ಬಿಜೆಪಿ ನೂತನ ರಾಜ್ಯಾಧ್ಯಕ್ಷರಿಗೆ ಕೇಂದ್ರ ಸಚಿವ ಭಗವಂತ ಖೂಬಾ ಸಿಹಿ ತಿನಿಸಿ ಸನ್ಮಾನ

0
13

ಬೆಂಗಳೂರು: ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೆಂದ್ರರವರನ್ನು, ಕೇಂದ್ರ ನೂತನ ಹಾಗೂ ನವಿಕರಿಸಬಹುದಾದ ಇಂಧನ ಮೂಲ ಹಾಗೂ ರಸಾಯನಿಕ ರಸಗೊಬ್ಬರ ಖಾತೆ ರಾಜ್ಯ ಸಚಿವರಾದ  ಭಗವಂತ ಖೂಬಾರವರು ಬೆಂಗಳೂರಿನಲ್ಲಿ ಭೇಟಿಮಾಡಿ ಸನ್ಮಾನಿಸಿದರು.

ತಮಗೆ ತಮ್ಮ ತಂದೆಯವರಿಂದಲೆ, ಸಂಘಟನಾ ಕಲೆ ಕರಗತವಾಗಿದೆ, ಎಲ್ಲರನ್ನು ಜೊತೆಗೆ ತೆಗೆದುಕೊಂಡು ಹೊಗುವ ಸಾಮಥ್ರ್ಯ ಹೊಂದಿದ್ದಿರಿ, ಈ ನಿಟ್ಟಿನಲ್ಲಿ ತಾವುಗಳು ಉತ್ತಮವಾಗಿ ಕಾರ್ಯನಿರ್ವಹಿಸಿ, ಬರುವ ಲೋಕಸಭಾ ಚುನಾವಣೆಯಲ್ಲಿ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೂ ಪಕ್ಷಕ್ಕೆ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಲಿ ಎಂದು ತಿಳಿಸಿ ಶುಭ ಹಾರೈಸಿದರು.

Contact Your\'s Advertisement; 9902492681

ಜೊತೆಗೆ ಮುಂಬುರವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ಸಂಘಟನೆಯ ಕೆಲಸ ಹಾಗೂ ಚುನಾವಣೆ ಸಂಬಂಧಿತ ಬೀದರ ಕ್ಷೇತ್ರದಲ್ಲಿ ಮಾಡಿಕೊಳ್ಳುತ್ತಿರುವ ಸಿದ್ದತೆಗಳ ಬಗ್ಗೆ ಸಚಿವ ಖೂಬಾ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರರವರ ಜೊತೆ ಚರ್ಚಿಸಿದರು, ಈ ಸಂದರ್ಭದಲ್ಲಿ ಹುಮನಾಬಾದ ಶಾಸಕರಾದ ಡಾ. ಸಿದ್ದು ಪಾಟೀಲ್ ಜೊತೆಗಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here