ಬಿಸಿ ಬಿಸಿ ಸುದ್ದಿ

ಸಮಾಜ ಸೇವೆಗೆ ನಿವೃತ್ತಿ ಇಲ್ಲ: ಕಾಂಗ್ರೆಸ್ ಮುಖಂಡ ಭೀಮರಾವ ಟಿ. ಟಿ

ಕಲಬುರಗಿ: ವೃತ್ತಿಯಲ್ಲಿ ನಿವೃತ್ತಿ ಆದರೂ ಸಮಾಜ ಸೇವೆ ಮಾಡಲು ನಿವೃತ್ತಿ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಭೀಮರಾವ ಟಿ. ಟಿ ಹೇಳಿದರು.

ನಗರದ ಮಾನ್ಯವಾರ್ ದಾದಾ ಸಾಹೇಬ್ ಕಾನ್ಛೀರಾಮ ಪದವಿ ಕಾಲೇಜಿನಲ್ಲಿ ಪದವಿ ಕಾಲೇಜು ಛಲವಾದಿ ಪ್ರಾಧ್ಯಾಪಕರ ಸಂಘ ಆಯೋಜಿಸಿದ್ದ ನಿವೃತ್ತ ಪ್ರಾಧ್ಯಾಪಕರ ಸನ್ಮಾನ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ ದಲಿತ ಪ್ರಾಧ್ಯಾಪಕರು ನಿವೃತ್ತಿ ಆದ ಮೇಲೆ ಮನೆಯಲ್ಲಿ ಕೂಡದ ಹಳ್ಳಿಗಳಿಗೆ ತೆರಳಿ ದಲಿತ ಸಮುದಾಯದ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು ಅವರಲ್ಲಿ ಸ್ವಾಭಿಮಾನ ಬದುಕಿನ ಉದ್ದಕ್ಕೂ ಬೆಳಿಯುವ ಹಾಗೆ ಮಾಡಬೇಕು. ಬಹಳಷ್ಟು ಕಡೆ ಪ್ರಾಧ್ಯಾಪಕರಾದವರು ತಮ್ಮ ಸ್ವಾರ್ಥಕ್ಕಾಗಿ ಮುಗ್ದ ವಿದ್ಯಾರ್ಥಿಗಳನ್ನು ಬಳಿಸಿಕೊಂಡು ತಮ್ಮ ಬೇಳೆ ಬೇಯಿಸಿ ಕೊಳ್ಳಬಾರದು. ಸಮಾಜದ ಗೋಸ್ಕರ ಎಲ್ಲರೂ ಶ್ರಮಿಸಬೇಕು ಎಂದು ಅವರು ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ವಿ. ಟಿ ಕಾಂಬಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮಂತೆಯೇ ಒಬ್ಬ ಮನುಷ್ಯನಾದ ಬುದ್ಧನು, ನಮ್ಮ ಅಸ್ತಿತ್ವದ ವಾಸ್ತವತೆಯ ನೈಜಗುಣವನ್ನು ಅರಿತು, ತಮ್ಮ ಎಲ್ಲಾ ನ್ಯೂನತೆಗಳನ್ನು ನಿವಾರಿಸಿದರು ಮತ್ತು ಅವರ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಂಡರು. ಬೌದ್ಧಧರ್ಮದಲ್ಲಿ ಇದನ್ನು ನಾವು “ಜ್ಞಾನೋದಯ” ಎಂದು ಕರೆಯುತ್ತೇವೆ. ಸುಮ್ಮನೆ ಕೈ ಬೀಸಿ ಬುದ್ಧನಿಗೆ ನಮ್ಮ ಸಮಸ್ಯೆಗಳನ್ನೆಲ್ಲಾ ದೂರ ಮಾಡಲಾಗಲಿಲ್ಲ. ಬದಲಾಗಿ, ಜೀವನದ ಸಮಸ್ಯೆಗಳಿಂದ ನಮ್ಮನ್ನು ಮುಕ್ತಗೊಳಿಸಲು ಮತ್ತು ನಮ್ಮ ಮನಸ್ಸಿನ ಉತ್ತಮ ಗುಣಗಳಾದ ಪ್ರೀತಿ, ಸಹಾನುಭೂತಿ, ಔದಾರ್ಯ, ಬುದ್ಧಿವಂತಿಕೆ ಇತ್ಯಾದಿಗಳನ್ನು ಅಭಿವೃದ್ಧಿಪಡಿಸಲು ಅನುಸರಿಸಬಹುದಾದ ಮಾರ್ಗವನ್ನು ಅವರು ನಮಗೆ ತೋರಿಸಿದರು ಎಂದು ಅವರು ಹೇಳಿದರು.

ನಿವೃತ್ತ ಪ್ರಾಧ್ಯಾಪಕರಾದ ಡಾ. ಅರುಣ್ ಕುಮಾರ್ ನರೋಣಕರ್ ಮತ್ತು ಡಾ. ದಯಾನಂದ ಸೂರವಸ್ಸೇ ಅವರನ್ನು ಸನ್ಮಾನಿಸಲಾಯಿತು. ಡಾ. ವಿಜಯಕುಮಾರ ಸಾಲಿಮನಿ, ಡಾ. ಪಂಡಿತ ಬಿ ಕೆ, ರಾಜಕುಮಾರ ಕುರನೆ, ಡಾ. ರವಿ ಭಂಡಾರಿ, ಡಾ. ವಿಜಯಕುಮಾರ ಗೋಪಾಳೆ, ವಿಠ್ಠಲ ಹಾದಿಮನಿ, ಡಾ. ಜಗನ್ನಾಥ ಪಟ್ಟಣಕರ್, ಡಾ. ಶಾಮರಾವ್, ಬಿ. ಎಂ. ಶಿವಕೇರಿ, ಮರೆಪ ಮೇತ್ರಿ, ಹಲವು ಪದವಿ ಕಾಲೇಜು ಛಲವಾದಿ ಪ್ರಾಧ್ಯಾಪಕರು ಪಾಲ್ಗೊಂಡಿದ್ದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

22 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

30 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago