ಅನಾಥ ಮಕ್ಕಳೊಂದಿಗೆ ದೀಪಾವಳಿ ಆಚರಿಸಿದ ಡಿ.ಸಿ. ನೇತೃತ್ವದ ಮಹಿಳಾ ಅಧಿಕಾರಿಗಳ ತಂಡ

ಕಲಬುರಗಿ: ಬೆಳಕಿನ ಹಬ್ಬ ದೀಪಾವಳಿ ನಿಮಿತ್ಯ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರ ನೇತೃತ್ವದ ಮಹಿಳಾ ಅಧಿಕಾರಿಗಳ ತಂಡವು ಸೋಮವಾರ ಕಲಬುರಗಿ ನಗರದ ಮಹಿಳಾ ಮತ್ತು ಮಕ್ಕಳ ಕಲ್ತಾಣ ಇಲಾಖೆ ಅಧೀನದ ಸರ್ಕಾರಿ ಬಾಲಕೀಯರ ಬಾಲ‌ ಮಂದಿರದಲ್ಲಿ ಸಾಯಂಕಾಲ ಅನಾಥ ಮಕ್ಕಳೊಂದಿಗೆ ದೀಪಾವಳಿ ಹಬ್ಬ ಆಚರಿಸಿದರು.

ಬಾಲಕೀಯರ ಬಾಲ ಮಂದಿರದ ಸಭಾಂಗಣದಲ್ಲಿ ರಾಜ್ಯ‌ ಮಹಿಳಾ ನಿಲಯದ‌ ನಿಲಾಯಾರ್ಥಿಗಳು, ಅಮೂಲ್ಯ ಶಿಶು ಗೃಹದ ಪುಟ್ಟ ಮಕ್ಕಳು, ಬಾಲಕೀಯರ ಬಾಲ ಮಂದಿರದ ಮಕ್ಕಳು ಹಾಗೂ ಬುದ್ದಿ ಮಾಂದ್ಯ ಮಕ್ಕಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಸಿಹಿ ವಿತರಿಸಿ ಹಬ್ಬದ ಶುಭ ಕೋರಿದರು.

ತದನಂತರ ಮಕ್ಕಳೊಂದಿಗೆ ಕೆಲ ಹೊತ್ತು ಅವರಲ್ಲೊಬ್ಬರಾಗಿ ಬೆರೆತರು. ಮೋಬೈಲ್ ಸೆಲ್ಫಿಗೆ, ಗ್ರೂಪ್ ಫೋಟೋಗೆ ಫೋಸ್ ಕೊಟ್ಟರು. ಮಕ್ಕಳೊಂದಿಗೆ ಸೇರಿ ಹಸಿರು ಪಟಾಕಿ ಹಚ್ಚಿ ಹಬ್ಬವನ್ನು ಸಂಭ್ರಮಿಸಿದರು.

ಜಿಲ್ಲಾಧಿಕಾರಿ‌‌ ಬಿ.ಫೌಜಿಯಾ ತರನ್ನುಮ್ ಆದಿಯಾಗಿ ಮಹಿಳಾ ಅಧಿಕಾರಿಗಳ ತಂಡ ಹಬ್ಬದ ದಿನದಂದು ತಮ್ಮೊಂದಿಗೆ ದೀಪಾವಳಿ ಆಚರಿಸಲು‌ ಬಂದಿರುವ ವಿಷಯ ಗೊತ್ತಾಗ್ತಿದ್ದಂತೆ ಅನಾಥ ಮಕ್ಕಳಲ್ಲಿ ಎಲ್ಲಿಲ್ಲದ‌ ಸಂಭ್ರಮ ಮನೆ ಮಾಡಿತ್ತು. ಖುದ್ದು ಪಾಲಕರೊಂದಿಗೆ, ಕುಟುಂಬದವರೊಂದಿಗೆ ಹಬ್ಬ ಸಂಭ್ರಮ ಆಚರಣೆಯ ಭಾವ ಅವರ ಮುಖದಲ್ಲಿ ಕಂಡುಬಂತು. ಮಕ್ಕಳೆಲ್ಲರು ಖುಷಿಯಿಂದ ಸಂಭ್ರಮದಲ್ಲಿ ಭಾಗಿಯಾದರು. ಇದಕ್ಕೂ‌ ಮುನ್ನ ಸಂಸ್ಥೆಯಲ್ಲಿ ಆಯೋಜಿಸಿದ ಲಕ್ಷ್ಮೀ ಪೂಜೆಯಲ್ಲಿ ಡಿ.ಸಿ. ಅವರು ಭಾಗಿಯಾಗಿದ್ದರು.

*ಡಿ.ಸಿ.ಗೆ ದೀಪ ನೀಡಿ ಸ್ವಾಗತಿಸಿದ ಮಕ್ಕಳು:*

ತಮ್ಮೊಂದಿಗೆ ದೀಪಾವಳಿ ಹಬ್ಬ ಅಚರಿಸಲು ಆಗಮಿಸಿದ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೇರಿದಂತೆ ಮಹಿಳಾ ಅಧಿಕಾರಿಗಳನ್ನು ಅನಾಥ ಮಕ್ಕಳು ಡೊಳ್ಳು ಬಾರಿಸಿ, ಹಣತೆ ದೀಪ ನೀಡುವ ಮೂಲಕ ಬರಮಾಡಿಕೊಂಡರು.ಇದೇ ಸಂದರ್ಭದಲ್ಲಿ ಸಂಸ್ಥೆ ಆವರಣದಲ್ಲಿ 100ಕ್ಕೂ ಹೆಚ್ಚು ದೀಪ ಹಚ್ಚುವ ಮೂಲಕ ಸರಳ ದೀಪಾವಳಿ ಜೊತೆಗೆ ಪರಿಸರ ಸಂರಕ್ಷಣೆ ಸಂದೇಶ ಸಾರಲಾಯಿತು.

*ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಅಧಿಕಾರಿಗಳ ತಂಡ:*

ಇದೇ‌‌ ಸಂದರ್ಭದಲ್ಲಿ ಮಕ್ಕಳಿಗೆ ಪಾಸಿಂಗ್ ಬಾಲ್ ಆಟ ಅಯೋಜಿಸಲಾಗಿತ್ತು. ಹಾಡು, ಕುಣಿತದಲ್ಲಿ ಮಕ್ಕಳ ಸಂಭ್ರಮ ಕಳೆ ಕಟ್ಟಿತ್ತು. ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತೆ ಮಮತಾ ಕುಮಾರಿ, ತಹಶೀಲ್ದಾರ ನಾಗಮ್ಮ ಕಟ್ಟಿಮನಿ ಅವರು ಹೆಜ್ಜೆ ಹಾಕಿ ಸಂಭ್ರಮಿಸಿದರು.

ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತೆ ಮಮತಾ ಕುಮಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಂಗಳಾ ಪಾಟೀಲ, ಕಲಬುರಗಿ ತಹಶೀಲ್ದಾರ ನಾಗಮ್ಮ ಕಟ್ಟಿಮನಿ ಇದಕ್ಕೆ ಸಾತ್ ನೀಡಿದರು. ರಾಜ್ಯ ಮಹಿಳಾ ನಿಲಯ, ಅಮೂಲ್ಯ ಶಿಶು ಗೃಹ, ಸರ್ಕಾರಿ ಬಾಲಕೀಯ ಬಾಲ‌ಮಂದಿರದ ಸಿಬ್ಬಂದಿಗಳು ಇದಕ್ಕೆ‌‌ ಸಾಕ್ಷಿಯಾದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

3 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

3 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420