ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರ ನೇಮಕ ಅತ್ಯಂತ ಸ್ವಾಗತಾರ್ಹ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ಬಣ್ಣಿಸಿದ್ದಾರೆ.
ಬಿ ವೈ ವಿಜಯೇಂದ್ರ ಅವರ ನೇಮಕದಿಂದ ರಾಜ್ಯದಾದ್ಯಂತ ಬಿಜೆಪಿ ಪರ ಹೊಸ ಅಲೆ ಸೃಷ್ಟಿಯಾಗಲಿದ್ದೂ, ರಾಜ್ಯ ಉಪಾಧ್ಯಕ್ಷರಾಗಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷವನ್ನು ಸಂಘಟಿಸಿದ ಅನುಭವ ಅವರಿಗಿದೆ. ರಾಜ್ಯದಲ್ಲಿ ಹಿಂದೆ ನಡೆದ ಅನೇಕ ಉಪಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದಾರೆ.
ಯುವಕರು ಹಾಗೂ ಹಿರಿಯ ನಾಯಕರನ್ನು ಒಗ್ಗೂಡಿಸಿ ಪಕ್ಷ ಕಟ್ಟುವ ಸಾಮರ್ಥ್ಯ ಬಿವೈವಿ ಅವರಲ್ಲಿದೆ. ಹಾಗಾಗಿ ಅವರ ನಾಯಕತ್ವದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ಮುಖ್ಯವಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಾ.ಅಂಬಾರಾಯ ಅಷ್ಠಗಿ ಅಭಿಪ್ರಾಯ ಪಟ್ಟಿದ್ದಾರೆ.
ಕಲಬುರಗಿ: ಮೋದಿ ಸರ್ಕಾರ ಏನು ಕಡಿಮೆ ಮಾಡಿಲ್ಲ ಜಾಸ್ತಿನೇ ಮಾಡಿದೆ. ಮೋದಿ ಸರ್ಕಾರ ಜಾಸ್ತಿ ಮಾಡಿರೋದ್ರ ಬಗ್ಗೆ ಚರ್ಚೆ ಆಗಬೇಕು…
ಕಲಬುರಗಿ: ಇನ್ನರ್ ವ್ಹಿಲ್ ಸಂಸ್ಥೆ ವತಿಯಿಂದ ನೀಡುತ್ತಿರುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ…
ಕಲಬುರಗಿ: ಉಪನ್ಯಾಸಕರು ತಮ್ಮ ಕೌಶಲ್ಯಗಳನ್ನು ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಆಧುನಿಕತೆಗೆ ತಕ್ಕಂತೆ ಅಪ್ಡೇಟ್ ಆಗಬೇಕಾದರೆ ಅಧ್ಯಾಪಕರ ಅಭಿವ್ರದ್ಧಿ ಕಾರ್ಯಕ್ರಮಗಳು…
ಕಲಬುರಗಿ: ರಕ್ತದಾನದ ಮಹತ್ವ ಹಾಗೂ ರಕ್ತದಾನಿಗಳಿಂದ ಜೀವ ಉಳಿಸುವುದರಲ್ಲಿ ಸಾಮಾಜಿಕ ಕೊಡುಗೆ ಮತ್ತು ರಕ್ತದಾನಿಗಳಿಗೆ ಆಗುವ ಲಾಭಗಳ ಪಡೆಯಬೇಕು ಎಂದು…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಪೊಲೀಸ್ ಠಾಣೆ ಆವಣದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಬಕ್ರೀದ್ ಹಬ್ಬದ…
ಕಲಬುರಗಿ: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ನೂತನ ಸಂಸದರಾಗಿ ಆಯ್ಕೆ ಹೊಂದಿದ ವಿಧಾನ ಪರಿಷತ್ತಿನ ಮಾಜಿ ನಾಯಕರಾದ…