ಬಿಸಿ ಬಿಸಿ ಸುದ್ದಿ

ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕ ಪಕ್ಷದಲ್ಲಿ ಹೊಸ ಅಲೆ ಸೃಷ್ಟಿ: ಡಾ ಅಂಬಾರಾಯ ಅಷ್ಠಗಿ

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರ ನೇಮಕ ಅತ್ಯಂತ ಸ್ವಾಗತಾರ್ಹ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ಬಣ್ಣಿಸಿದ್ದಾರೆ.

ಬಿ ವೈ ವಿಜಯೇಂದ್ರ ಅವರ ನೇಮಕದಿಂದ ರಾಜ್ಯದಾದ್ಯಂತ ಬಿಜೆಪಿ ಪರ ಹೊಸ ಅಲೆ ಸೃಷ್ಟಿಯಾಗಲಿದ್ದೂ, ರಾಜ್ಯ ಉಪಾಧ್ಯಕ್ಷರಾಗಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷವನ್ನು ಸಂಘಟಿಸಿದ ಅನುಭವ ಅವರಿಗಿದೆ. ರಾಜ್ಯದಲ್ಲಿ ಹಿಂದೆ ನಡೆದ ಅನೇಕ ಉಪಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದಾರೆ.

ಯುವಕರು ಹಾಗೂ ಹಿರಿಯ ನಾಯಕರನ್ನು ಒಗ್ಗೂಡಿಸಿ ಪಕ್ಷ ಕಟ್ಟುವ ಸಾಮರ್ಥ್ಯ ಬಿವೈವಿ ಅವರಲ್ಲಿದೆ. ಹಾಗಾಗಿ ಅವರ ನಾಯಕತ್ವದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ಮುಖ್ಯವಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಾ.ಅಂಬಾರಾಯ ಅಷ್ಠಗಿ ಅಭಿಪ್ರಾಯ ಪಟ್ಟಿದ್ದಾರೆ.

emedialine

Recent Posts

ಪೆಟ್ರೋಲ್, ಡಿಸೆಲ್ ದರ ಏರಿಕೆ ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಲಹೆಗಾರ ಶಾಸಕ ಬಿ.ಆರ್.ಪಾಟೀಲ್

ಕಲಬುರಗಿ: ಮೋದಿ ಸರ್ಕಾರ ಏನು ಕಡಿಮೆ ಮಾಡಿಲ್ಲ ಜಾಸ್ತಿನೇ ಮಾಡಿದೆ.‌ ಮೋದಿ ಸರ್ಕಾರ ಜಾಸ್ತಿ ಮಾಡಿರೋದ್ರ ಬಗ್ಗೆ ಚರ್ಚೆ ಆಗಬೇಕು…

5 mins ago

ಶಿಕ್ಷಕ ಸಿದ್ದಲಿಂಗ ಬಾಳಿ ರಾವೂರಗೆ ನೇಷನ್ ಬಿಲ್ಡರ್ ಪ್ರಶಸ್ತಿ

ಕಲಬುರಗಿ: ಇನ್ನರ್ ವ್ಹಿಲ್ ಸಂಸ್ಥೆ ವತಿಯಿಂದ ನೀಡುತ್ತಿರುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ…

1 hour ago

ಅಭಿವೃದ್ಧಿಗೆ ಕೌಶಲ್ಯಗಳು ಅವಶ್ಯಕ: ಡಾ. ಎಂ ಎ ಬಷೀರ

ಕಲಬುರಗಿ: ಉಪನ್ಯಾಸಕರು ತಮ್ಮ ಕೌಶಲ್ಯಗಳನ್ನು ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಆಧುನಿಕತೆಗೆ ತಕ್ಕಂತೆ ಅಪ್ಡೇಟ್ ಆಗಬೇಕಾದರೆ ಅಧ್ಯಾಪಕರ ಅಭಿವ್ರದ್ಧಿ ಕಾರ್ಯಕ್ರಮಗಳು…

3 hours ago

ರಕ್ತದಾನಿಗಳಿಂದ ಜೀವ ಉಳಿಸುವುದು ಸಾಮಾಜಿಕ ಕೊಡುಗೆ

ಕಲಬುರಗಿ: ರಕ್ತದಾನದ ಮಹತ್ವ ಹಾಗೂ ರಕ್ತದಾನಿಗಳಿಂದ ಜೀವ ಉಳಿಸುವುದರಲ್ಲಿ ಸಾಮಾಜಿಕ ಕೊಡುಗೆ ಮತ್ತು ರಕ್ತದಾನಿಗಳಿಗೆ ಆಗುವ ಲಾಭಗಳ ಪಡೆಯಬೇಕು ಎಂದು…

3 hours ago

ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಪೊಲೀಸ್ ಠಾಣೆ ಆವಣದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಬಕ್ರೀದ್ ಹಬ್ಬದ…

3 hours ago

ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಡಾ. ಪೆರ್ಲ ಅಭಿನಂದನೆ

ಕಲಬುರಗಿ: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ನೂತನ ಸಂಸದರಾಗಿ ಆಯ್ಕೆ ಹೊಂದಿದ ವಿಧಾನ ಪರಿಷತ್ತಿನ ಮಾಜಿ ನಾಯಕರಾದ…

5 hours ago