ಬಿಸಿ ಬಿಸಿ ಸುದ್ದಿ

ಮರಮಂಚಿ, ಮಳಸಾಪುರ ತಾಂಡಾಗಳಲ್ಲಿ ಬಂಜಾರಾ ಜಾನಪದ ದೀಪಾವಳಿ

ಕಲಬುರಗಿ: ಬಂಜಾರ ಸಮುದಾಯದ ಜನರು ವೀರ, ಧೀರ, ಶೂರ, ಕಾಯಕ ಜೀವಿಗಳು, ಸಂಸ್ಕøತಿಯ ರಕ್ಷಕರು. ತಮ್ಮದೇ ಆದ ವೇಷ-ಭೂಷಣ, ಕಲೆ, ಭಾಷೆ, ಸಂಸ್ಕøತಿ, ಪರಂಪರೆಯನ್ನು ಇಂದಿಗೂ ಕೂಡಾ ಸಂರಕ್ಷಿಸಿಕೊಂಡು ಬಂದವರು. ಯಾವುದೇ ಹಬ್ಬ, ಉತ್ಸವ, ಆಚರಣೆಗಳನ್ನು ಅತ್ಯಂತ ಭಕ್ತಿ, ಶೃದ್ಧೆಯಿಂದ ಮಾಡುವ ಮೂಲಕ ದೇಶದ ಮೂಲ ಸಂಸ್ಕøತಿಯಾದ ಜಾನಪದವನ್ನು ಶ್ರೀಮಂತಗೊಳಿಸುವಲ್ಲಿ ಅಪಾರವಾದ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ಕಜಾಪ ಜಿಲ್ಲಾ ಅಧ್ಯಕ್ಷ ಎಂ.ಬಿ.ನಿಂಗಪ್ಪ ಅಭಿಪ್ರಾಯಪಟ್ಟರು.

ಕಮಲಾಪುರ ತಾಲೂಕಿನ ಮರಮಂಚಿ ತಾಂಡಾದಲ್ಲಿ ‘ಬಂಜಾರಾ ಜಾನಪದ ದೀಪಾವಳಿ’ ಕಾರ್ಯಕ್ರಮದಲ್ಲಿ ‘ಕನ್ನಡ ಜಾನಪದ ಪರಿಷತ್’ನ ಜಿಲ್ಲಾ ಘಟಕ ಮತ್ತು ‘ಬಸವೇಶ್ವರ ಸಮಾಜ ಸೇವಾ ಬಳಗ’ ಇವುಗಳ ವತಿಯಿಂದ ಮಂಗಳವಾರ ಜರುಗಿದ ಬಂಜಾರಾ ಕಲಾವಿದರಿಗೆ ಸತ್ಕಾರ, ಬಾಲಕಿಯರು, ಮಹಿಳೆಯರಿಂದ ಜರುಗಿದ ಗಾಯನ, ನೃತ್ಯ, ಪೂರ್ಣ ಕಳಸದ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲಾ ಬಂಜಾರಾ ಸರ್ಕಾರಿ, ಅರೆ-ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಪ್ರಭು ಜಾಧವ, ಕಾರ್ಯಕಾರಿಣಿ ಸದಸ್ಯ ಬಿಕ್ಕುಸಿಂಗ ರಾಠೋಡ ಮಾತನಾಡಿ, ಲಂಬಾಣಿ ಸಮುದಾಯದ ಜನರು ದೀಪಾವಳಿಯನ್ನು ‘ದವಾಳಿ’ ಎಂದು ಮೂರು ದಿವಸಗಳ ಕಾಲ ಅರ್ಥಪೂರ್ಣವಾಗಿ ಆಚರಿಸುತ್ತಾರೆ. ದೇವರಿಗೆ ಹರಕೆ ತೀರಿಸುವ ‘ಕಾಳಿಮಾಸ್’, ಲಕ್ಷ್ಮೀ ಪೂಜೆ, ಹಿರಿಯರಿಗೆ ಗೌರವ ಸಲ್ಲಿಸಲಾಗುತ್ತದೆ. ಹೆಣ್ಣುಮಕ್ಕಳು ದೀಪ ಹಚ್ಚಿಕೊಂಡು ಪ್ರತಿ ಮನೆಗೆ ತೆರಳಿ ಬೆಳಗುವ ‘ಮೇರಾ’, ಹೊಲಕ್ಕೆÉ ಹೋಗಿ ಬಗೆ-ಬಗೆಯ ಹೂಗಳನ್ನು ತಂದು ಸಗಣಿಯ ಮೇಲ್ಬಾಗದಲ್ಲಿ ಇಡಲಾಗುತ್ತದೆ. ಆಗಮಿಸಿದ ಅತಿಥಿಗಳಿಗೆ ಸತ್ಕರಿಸುವುದು, ಲಂಬಾಣಿ ಗೀತಗಾಯನ, ನೃತ್ಯ ಮಾಡುವುದು, ಕಳಸದ ಮೆರವಣಿಗೆ ಮಾಡಲಾಗುತ್ತದೆ ಎಂದು ಮೂರು ದಿನಗಳ ಕಾಲ ಆಚರಿಸುವ ವಿವಿಧ ಪದ್ಧತಿಗಳ ಬಗ್ಗೆ ವಿವರಿಸಿದರು.

ಕಜಾಪ ಜಿಲ್ಲಾ ಕಾರ್ಯದರ್ಶಿ ಮತ್ತು ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಬಂಜಾರ ಕಲೆ, ಸಂಸ್ಕøತಿ, ಪರಂಪರೆ ಅಪರೂಪವಾಗಿದೆ. ಆಧುನಿಕತೆಯ ಪರಿಣಾಮವಾಗಿ ಇದು ಸಮುದಾಯದ ಹಿರಿಯರಿಂದ ಮುಂದಿನ ತಲೆಮಾರಿನವರಿಗೆ ವರ್ಗಾವಣೆಯಾಗಲು ತೊಡಕಾಗುತ್ತಿದೆ. ಇದನ್ನು ಮನಗಂಡ ನಮ್ಮ ಪರಿಷತ್ ಮತ್ತು ಬಳಗ ಪ್ರತಿವರ್ಷ ದೀಪಾವಳಿ ಸೇರಿದಂತೆ ಬಂಜಾರ ಸಮುದಾಯದ ಹಬ್ಬ, ಉತ್ಸವಗಳಲ್ಲಿ ಬೇರೆ-ಬೇರೆ ತಾಂಡಾಗಳಿಗೆ ತೆರಳಿ ಬಂಜಾರ ಸಮುದಾಯದ ಸಂಸ್ಕøತಿ, ಪರಂಪರೆ ಬಗ್ಗೆ ಎಲ್ಲೆಡೆ ಜನ ಜಾಗೃತಿ ಕಾರ್ಯ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಂಡಾದ ನಾಯಕ ರಾಮಚಂದ್ರ ರಾಠೋಡ, ಕಾರಬಾರಿ ಸುಭಾಷ ರಾಠೋಡ, ಗ್ರಾ.ಪಂ.ಅಧ್ಯಕ್ಷ ಚಂದ್ರಕಾಂತ ಜಾಧವ, ಸದಸ್ಯೆಯರಾದ ಶಾಂತಾಬಾಯಿ, ಕವಿತಾಬಾಯಿ, ಪ್ರಮುಖರಾದ ಸುನಿತಾ ಪಿ.ಜಾಧವ, ಓಂಕಾರ ಪೂಜಾರಿ, ದೀಪಲಾ ರಾಠೋಡ, ಡಾಕು, ಭೀಮರಾಯ ಜಾಧವ, ಪ್ರದೀಪ ಪಿ.ಜಾಧವ, ಸತೀಸ್, ಪ್ರಭು, ದೇವಿದಾಸ ಸೇರಿದಂತೆ ನೂರಾರು ಜನರು, ಮಕ್ಕಳು, ಮಹಿಳೆಯರು ಪಾಲ್ಗೊಂಡಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago