ಸುರಪುರ: ಪ್ರತಿವರ್ಷವೂ ದೀಪಾವಳಿ ಅಂಗವಾಗಿ ತಾಲೂಕಿನ ಮೌನೇಶ್ವರ ದೇವಸ್ಥಾನದಲ್ಲಿ ತಾಲೂಕು ಆಡಳಿತದ ನೇತೃತ್ವದಲ್ಲಿ ಗೋಧೂಳಿ ಸಮಯದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲಾಯಿತು.
ದೇವಸ್ಥಾನದ ಆವರಣದಲ್ಲಿ ನಡೆದ ಗೋಪೂಜೆ ಕಾರ್ಯಕ್ರಮದಲ್ಲಿ ತಹಸೀಲ್ದಾರರು ಹಾಗೂ ದೇವಸ್ಥಾನದ ಆಡಳಿತಾಧಿಕಾರಿ ಕೆ.ವಿಜಯಕುಮಾರ ಹಾಗೂ ದೇವಸ್ಥಾನದ ಅರ್ಚಕರಾದ ಮೌನೇಶ್ವರ ಸ್ವಾಮೀಜಿ,ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೆಂಕಟೇಶ ಯರಡೋಣಿ,ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲೂಕು ಅಧ್ಯಕ್ಷ ಗಂಗಾಧರ ನಾಯಕ ಸೇರಿದಂತೆ ಅನೇಕರು ಭಾಗವಹಿಸಿದ್ದರು.