ಶಹಾಬಾದ: ಎಫ್ಐಡಿ ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರದ ಮೊತ್ತ ಸಿಗಲಿದೆ.ಆದ್ದರಿಂದ ಎಫ್ಐಡಿ ಹೊಂದಿರದವರು ನೊಂದಣಿ ಮಾಡುವುದು ಕಡ್ಡಾಯ ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ವಿವಿಧ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳು ತಾವು ಪಿಂಚಣಿ ಪಡೆಯುತ್ತಿರುವ ಬ್ಯಾಂಕ ಅಥವಾ ಅಂಚೆ ಕಛೇರಿಗೆ ತೆರಳಿ ತಮ್ಮ ಬ್ಯಾಂಕ / ಅಂಚೆ ಕಛೇರಿ ಖಾತೆಗೆ ಆಧಾರ ಜೋಡಣೆ ಮತ್ತು ಎನ್.ಪಿ.ಸಿ.ಐ. ಮ್ಯಾಪಿಂಗ್ ನವಂಬರ್ 30ರ ಒಳಗಾಗಿ ಮಾಡಿಸಿಕೊಳ್ಳತಕ್ಕದ್ದು. ತಪ್ಪಿದ್ದಲ್ಲಿ ತಮ್ಮ ಪಿಂಚಣಿ ತಡೆ ಹಿಡಿಯಲಾಗುವುದು ಅಥವಾ ರದ್ದುಗೊಳಿಸಲಾಗುವುದು ಎಂದು ತಹಶೀಲ್ದಾರ್ ಗುರುರಾಜ ಸಂಗಾವಿ ಸಾರ್ವಜನಿಕರಿಗೆ ತಿಳಿಸಿದ್ದಾರೆ.
ತಾಲೂಕಿನಲ್ಲಿ ಭೂ ಹಿಡುವಳಿದಾರಾದ ಬಹುತೇಕ ರೈತರು ಎಫ್ಐಡಿ ನೊಂದಣಿ ಮಾಡಿಸಿಕೊಂಡಿದ್ದಾರೆ. ಆದರೆ ರೈತರು ತಮ್ಮ ಎಲ್ಲಾ ಸರ್ವೇ ನಂಬರ್ ಗಳನ್ನು ಎಫ್ಐಡಿ ಮಾಡಿಸಿ, ಒಂದು ವೇಳೆ ಮಾಡಿಸದಿದ್ದರೆ ರೈತರಿಗೆ ಬರ ಪರಿಹಾರ, ತೊಗರಿ ನೆಟೆರೋಗ ಪರಿಹಾರದ ಮೊತ್ತ ಬರುವುದಿಲ್ಲ. ಏಕೆಂದರೆ ಈ ಹಣ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.
ಎಫ್ಐಡಿ ಮಾಡಿಸದ ರೈತರು ತಕ್ಷಣ ಸಮೀಪದ ಸಿಎಸ್ಸಿ ಸೆಂಟರ್, ರೈತ ಸಂಪರ್ಕ ಕೇಂದ್ರ ಕಚೇರಿಗೆ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ಮೊಬೈಲ್ ಸಂಖ್ಯೆಯೊಂದಿಗೆ ತೆರಳಿ ಎಫ್ಐಡಿ ಮಾಡಿಸಲು ಸೂಚಿಸಿದ್ದಾರೆ, ತಪ್ಪಿದಲ್ಲಿ ಸರಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ವಂಚಿತರಾಗುವಿರಿ ಎಂದು ತಹಶೀಲ್ದಾರ್ ಗುರುರಾಜ ಸಂಗಾವಿ ಅವರು ತಿಳಿಸಿದ್ದಾರೆ.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…