ಕಲಬುರಗಿ: ಒಳ್ಳೆಯ ಅಂಕಗಳು ಒಂದು ಹಂತದ ವರೆಗೆ ಸಹಕಾರಿ. ಆದರೆ ವೃತ್ತಿಯಲ್ಲಿ ಅತ್ಯುನ್ನತ ಸ್ಥಾನ ಪಡೆಯಬೇಕಾದರೆ ಕೌಶಲ್ಯಗಳು ಅವಶ್ಯ ಎಂದು ಕೆಬಿಎನ ವಿವಿ ಉಪ ಕುಲಪತಿ ಪ್ರೊ ಅಲಿ ರಜಾ ಮೂಸ್ವಿ ನುಡಿದರು.
ಅವರು ಶನಿವಾರ ಖಾಜಾ ಬಂದಾನವಾಜ ವಿಶ್ವ ವಿದ್ಯಾಲಯದಲ್ಲಿ ಮೆಡಿಕಲ ಮತ್ತು ಇಂಜಿನಿಯರಿಂಗ ವಿದ್ಯಾರ್ಥಿಗಳಿಗೆ ಆಯೋಜಿಸಿದ ವೃತ್ತಿ ಸಮಾಲೋಚನೆ ಮತ್ತು ಮಾರ್ಗದರ್ಶನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ 1000ಕ್ಕೂ ಹೆಚ್ಚು ಹಾಜರಿದ್ದ ವಿದ್ಯಾರ್ಥಿಗಳನ್ನು ನೋಡಿ ಆನಂದ ಪಟ್ಟರು. ಶಿಕ್ಷಣ, ಕಲಿಕೆ ಅಂಕಗಳ ಜೊತೆ ಜೊತೆಗೆ ಕೌ ಶಲ್ಯಗಳ ತರಬೇತಿ ಕೊಡುವ ಪ್ರಯತ್ನ ಖಾಜಾ ಬಂದಾನವಾಜ ವಿವಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶೈಕ್ಷಣಿಕ ಜ್ಞಾನದ ಜೊತೆಗೆ ವೃತ್ತಿ ಮಾರ್ಗದರ್ಶನಗಳು ಸಂಪೂರ್ಣ ಬೆಳವಣಿಗೆಗೆ ಪೂರಕ ಎಂದು ಅಭಿಪ್ರಾಯ ಪಟ್ಟರು.
ಇಂಜಿನಿಯರಿಂಗ ವಿದ್ಯಾರ್ಥಿಗಳಿಗೆ v2 ಕೌಶಲ್ಯ ವರ್ಧನೆ ಮತ್ತು ಸಂಪನ್ಮೂಲ ಕೇಂದ್ರದ ನಿರ್ದೇಶಕ ವಿವೇಕ ಹಿರೇಮಠ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಜಯ ಸಿಂಘ ಠಾಕುರ ಎರಡು ಗೋಷ್ಠಿಗಳನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ವಿಡಿಯೋ, ಪ್ರಶ್ನೆ, ಸಹಿ ಉತ್ತರಗಳಿಗೆ ಬಹುಮಾನ, ಸ್ಫೂರ್ತಿದಾಯಕ ಮಾತು, ಸಂದರ್ಶನವನ್ನು ಎದುರಿಸುವ ಬಗೆ ಮುಂತಾದ ತಂತ್ರಗಳನ್ನು ತಿಳಿ ಹೇಳಿದರು.
ಮೆಡಿಕಲ್ ವಿದ್ಯಾರ್ಥಿಗಳಿಗೆ ಬ್ರೈಟ ಮೆಡಿಕಲ ಸಂಸ್ಥೆಯ ನಿರ್ದೇಶಕ ಡಾ ತಮೀಮ ಸೈಫ ಮತ್ತು ಭಾಟಿಯ ಮೆಡಿಕಲ ತರಬೇತಿ ಸಂಸ್ಥೆಯಲ್ಲಿ ಸೂಕ್ಷ್ಮ ಜೀವವಿಜ್ಞಾನ ಪ್ರಾಧ್ಯಾಪಕ ಡಾ ಅಬ್ದುಲ ನಸೀರ ಪಿಜಿ ಪ್ರವೇಶ ಪರೀಕ್ಷೆ ಸಿದ್ಧತೆಯ ಬಗ್ಗೆ ಮಾರ್ಗದರ್ಶನ ನೀಡಿದರು.
ಐ ಕ್ಯೂಎಸಿ ನಿರ್ದೇಶಕ ಡಾ ಬಷೀರ್ ಅಹ್ಮದ್ ಕಾರ್ಯಕ್ರಮದ ವರದಿಯನ್ನು ಪ್ರಸ್ತುತ ಪಡಿಸಿದರು. ಬಯೋಕೆಮಿಸ್ಟ್ರಿ ವಿಭಾಗದ ಪ್ರಾದ್ಯಾಪಕಿ ಸಬಾ ನಜ್ನೀನ ಖಾನ ವಂದಿಸಿದರು. ಡಾ ಇರ್ಫಾನ ಅಲಿ ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ಡಾ ರಾಜಶ್ರೀ ಪಾಲದಿ, ಡಾ ಸೈಯಿದ ನಜಿರ್ ಅಹ್ಮದ, ಡಾ ಜಮಾ ಮೂಸ್ವಿ, ಡಾ ಜಿನಥ್, ಡಾ ಬಿಲಾಲ ಅಹ್ಮದ, ಡಾ ಗುರುಪ್ರಸಾದ, ಡಾ ಜಿಬ್ರಾನ, ಡಾ ಜೈನಬ, ಡಾ ಚೇತನಾ, ಡಾ ಫಹೀಮ, ಡಾ ಮೊಹಸೀನ, ಡಾ ಘಝಲಾ, ಡಾ ಅಫ್ರಾ, ಡಾ ಹುಮೆರಾ, ಡಾ ಹುಮೆರಾ, ಡಾ ಶಹಾಭಾಜ,ಡಾ ಸುಷ್ಮಾ, ಡಾ ಸಾರಾ, ಡಾ ತನಿಯಾತ ಮುಂತಾದವರು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…