ಬೆಳೆ ನಾಶ: ಮಾಜಿ ಶಾಸಕ ನರಿಬೋಳ್ ಸಹೋದರ ಸೇರಿ 15 ಜನರ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನರಿಬೋಳ್ ಗ್ರಾಮದ ಸರ್ವೆ ನಂಬರ್ ೨೨೨ರಡಿ ೧೪-೧೮ ಗುಂಟೆ ಜಮೀನಿನಲ್ಲಿ ೮ ಎಕರೆ ಹೊಲದಲ್ಲಿ ಬೆಳೆದಿದ್ದ ಹತ್ತಿಯನ್ನು ನಾಶ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಶಾಸಕ ಹಾಗೂ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಅವರ ಸಹೋದರ ಬಸುಗೌಡ ತಂದೆ ಶಿವಲಿಂಗಪ್ಪ ಪಾಟೀಲ್ ಸೇರಿ ೧೫ ಜನರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹೊಲದ ರೈತ ಮರೆಣ್ಣ ತಂದೆ ತಿಪ್ಪಣ್ಣ ಅವರು ಇಲ್ಲಿ ಒತ್ತಾಯಿಸಿದರು.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದಲೂ ಇದೇ ರೀತಿಯ ಬೆಳೆ ನಾಶ ಮಾಡಲಾಗುತ್ತಿದೆ. ಈ ಕುರಿತು ಸಂಬಂಧಪಟ್ಟ ಪೋಲಿಸ್ ಠಾಣೆಗೆ ಹಾಗೂ ಪೋಲಿಸ್ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಸಹ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ಕಳೆದ ೨೦ರಂದು ಬೆಳಂಬೆಳಿಗ್ಗೆ ೭-೩೦ರ ಸುಮಾರಿಗೆ ಶರಣಪ್ಪ ತಂದೆ ಸಾಯಬಣ್ಣ, ಬಸಪ್ಪ ತಂದೆ ಭೀಮರಾಯ್ ದೊಡ್ಡಮನಿ, ಈಶಪ್ಪ ತಂದೆ ಬಸಪ್ಪ ದೊಡ್ಡಮನಿ, ಅಭಿಮನ್ಯು ತಂದೆ ಮೂಕಪ್ಪ ತಳಗೇರಿ, ಮಲ್ಲಿನಾಥ್ ತಂದೆ ಬಸಪ್ಪ ದೊಡ್ಡಮನಿ, ಸಾಯಬಣ್ಣ ತಂದೆ ಬಸಪ್ಪ ದೊಡ್ಡಮನಿ, ನಿಂಗಪ್ಪ ತಂದೆ ದ್ಯಾವಪ್ಪ ದೊಡ್ಡಮನಿ, ಮಹೇಶ್ ತಂದೆ ದ್ಯಾವಪ್ಪ ದೊಡ್ಡಮನಿ, ದೇವಪ್ಪಾ ತಂದೆ ಮರೆಪ್ಪಾ ಹೊಟ್ಟಿ, ಬಸಪ್ಪ ತಂದೆ ಬಾಬುರಾಯ್, ಸಿದ್ದಪ್ಪ ತಂದೆ ಬಸಪ್ಪ ತಳವಾರ್, ದೇವಪ್ಪಾ ತಂದೆ ಬಸಪ್ಪಾ ದೊಡ್ಡಮನಿ, ಅಬ್ಬಾಸ್ ಅಲಿ ತಂದೆ ಮಶಾಕ್ ತೆಲಗಾಣಿ, ಶರಣಪ್ಪ ಮಾರಡಗಿ (ಟ್ರ್ಯಾಕ್ಟರ್ ಚಾಲಕ) ಹಾಗೂ ಬಸುಗೌಡ ತಂದೆ ಶಿವಲಿಂಗಪ್ಪ ಪಾಟೀಲ್ ಅವರ ಕುಮ್ಮಕ್ಕಿನಿಂದ ಬೆಳೆ ನಾಶ ಮಾಡಿದ್ದಾರೆ. ನನಗೆ ಜೀವ ಉಳಿಸಿಕೊಳ್ಳಲು ನಾನು ಊರ ಕಡೆಗೆ ಬಂದೆ. ಜೀವ ಭಯದಿಂದಾಗಿ ದೂರು ದಾಖಲಿಸಲು ಆಗಲಿಲ್ಲ ಎಂದು ಅವರು ಹೇಳಿದರು.

ಈಗ ಹತ್ತಿ ಬೆಳೆ ನಾಶ ಕುರಿತಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಜೇವರ್ಗಿ ಪೋಲಿಸ್ ಠಾಣೆಗೆ ದೂರು ಸಲ್ಲಿಸಿರುವೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ರೈತನ ಪತ್ನಿ ಶ್ರೀಮತಿ ಸಿದ್ಧಲಿಂಗಮ್ಮ, ಪುತ್ರರಾದ ಮಲ್ಲಿಕಾರ್ಜುನ್ ಹಾಗೂ ಸುರೇಶ್ ಅವರು ಉಪಸ್ಥಿತರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

59 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420