ಕಲಬುರಗಿ: ಕರ್ನಾಟಕ ರಾಜ್ಯೋತ್ಸವ ಆಚರಣೆ

ಕಲಬುರಗಿ: ನಗರದ ಕನ್ನಡ ಭವನದಲ್ಲಿ ನಾದ ಸಂಗೀತ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಲಾವಿದರ ಸಂಘದ ವತಿಯಿಂದ 68 ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಮುಗುಳ ನಾಗಾವಿ ಕಟ್ಟಿಮನಿ ಸಂಸ್ಥಾನ ಹಿರೇಮಠದ ಪೂಜ್ಯಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಿದ್ದರು . ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ದತ್ತಪ್ಪ ಸಾಗನೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಶರಾದ ವಿಜಯ ಕುಮಾರ್ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಶಿವರಾಜ್ ಅಂಡಗಿ ಅತಿಥಿಗಳಾಗಿ ಆಗಮಿಸಿದ್ದರು.

ಸಂಘದ ಅಧ್ಯಕ್ಷ ಮಧುಸೂದನ್ ಮಲ್ಲಾಬಾದಿ ಉಪಾಧ್ಯಕ್ಷ ವಾಲ್ಮೀಕಿ ಕಾಂಬಳೆ ಹಾಗೂ ಚಾಂದ್ ಜಕ್ಸನ್, ಕಾರ್ಯದರ್ಶಿ ರಾಜು ಕೋಬಾಳ್ ಸಹ ಕಾರ್ಯದರ್ಶಿ ಬಲವಂತ ಉದನೂರು ಖಜಂಚಿಗಳಾದ ಲಕ್ಷ್ಮಿಕಾಂತ್ ಸೀತನೂರ್ ಸಲಹೆಗಾರದ ರೇಣುಕಾ ಬಿರಾದಾರ್ ಪಾರ್ವತಿ ವೀರೇಂದ್ರ ಕುಮಾರ್ ಉರ್ಕಿಮಠ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿ ದಸರಾ ಹಬ್ಬದಂದು ಅಲ್ಲಿನ ಜಗನ್ಮೋಹನ್ ಅರಮನೆಯ ವೇದಿಕೆಯಲ್ಲಿ ಮಾತೃಕಲಾ ಸಂಗೀತ ವಿದ್ಯಾಲಯ ಸಂಸ್ಥೆಯಿಂದ ಪಾರ್ವತಿ ವೀರೇಂದ್ರ ಕುಮಾರ್ ಉರ್ಕಿಮಠ ಮತ್ತು ತಂಡ ಇವರುಗಳು ಸುಗಮ ಸಂಗೀತ ನೀಡಿದ್ದಕ್ಕೆ ಸಂಘದ ವತಿಯಿಂದ ಇವರನ್ನು ಸನ್ಮಾನಿಸಲಾಯಿತು.

ಕಲಾವಿದರಾದ ಮಧುಸೂದನ್ ಮಲ್ಲಾಬಾದಿ ವಾಲ್ಮೀಕಿ ಕಾಂಬಳೆ ಲಕ್ಷ್ಮಿಕಾಂತ್ ಸೀತನೂರು, ಪಾರ್ವತಿ ಉರ್ಕಿಮಠ, ರೇಣುಕಾ ಬಿರಾದಾರ್ ಆನಂದ್, ರಾಜಶೇಖರ್ ರೆಡ್ಡಿ ಮಹದೇವ್ ಅಷ್ಟಗಿ, ಮಹಾದೇವ್ ಸಂಘವಿ ಸತೀಶ್ ಪಾಟೀಲ್ ವಿಠ್ಠಲ್ ಮೇತ್ರಿ ಚಂದ್ರಶೇಖರ್ ರೆಡ್ಡಿ ಶಿವಶಂಕರ್ ಪೂಜಾರಿ ನರಸಿಂಹಚಾರ್ಯ ಈ ಎಲ್ಲಾ ಕಲಾವಿದರು ಕರ್ನಾಟಕ ರಾಜ್ಯೋತ್ಸವವನ್ನು ಅತಿ ವಿಜೃಂಭಣೆಯಿಂದ ಆಚರಿಸಿ, ಕನ್ನಡ ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರನ್ನು ಮನರಂಜಿಸಿದರು.

emedialine

Recent Posts

ಪ್ರವಾದಿಯ ಅನುಯಾಯಿಗಳು ಎಲ್ಲಿ?

(1) ಪ್ರವಾದಿಯ ಅನುಯಾಯಿಗಳು ಎಲ್ಲಿ? ನಿನ್ನ ಒಡ ಹುಟ್ಟಿದವರ ವಿರುದ್ಧವಾದರೂ ಸರಿಯೇ ಸತ್ಯವನ್ನೆ ನುಡಿ ಎಂದ ನನ್ನ ಪ್ರವಾದಿಯ ಅನುಯಾಯಿಗಳು…

16 mins ago

ಕಲ್ಯಾಣ ಕರ್ನಾಟಕ ಉತ್ಸವ 18 ರಂದು ಆಚರಿಸಲು ಆಗ್ರಹ

ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…

12 hours ago

ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭಕ್ಕೆ ಮನವಿ

ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…

12 hours ago

ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇದೆ: ಭೀಮನಗೌಡ ಪರಗೊಂಡ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…

12 hours ago

10 ವರ್ಷಗಳ ನಂತರ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಡಾ. ಅಜಯಸಿಂಗ್

ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…

14 hours ago

ಕೆಐಡಿಸಿಸಿ ಕಪ್ ಕ್ರಿಕೆಟ್ ಟೋರ್ನಮೆಂಟ್ ಸೀಸನ್ 3 ಲಾಂಛನ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420