ಚಿತ್ತಾಪುರ: ನ,19 ಭಾನುವಾರ ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾದ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಧ್ಯಾಹ್ನ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ ಈ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಸುಪ್ರಸಿದ್ಧ ನಾಗಾವಿ ಯಲ್ಲಮ್ಮ ದೇವತೆಯಲ್ಲಿ ವಿಶೇಷ ಪೂಜೆ ಸಲ್ಲಿಸುವುದಾಗಿ ರಾಜ್ಯ ಕುಂಬಾರರ ಯುವ ಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಹಾಗೂ ಕುಂಬಾರರ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಮತ್ತು ಕ್ರಿಕೆಟ್ ಅಭಿಮಾನಿ ಜಗದೇವ ಕುಂಬಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೆ 2011ರಲ್ಲಿ ಕ್ರಿಕೆಟ್ ವಿಶ್ವಕಪ್ ಗೆದ್ದಿತ್ತು ನಂತರ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ವಿಶ್ವಕಪ್ ಗೆಲ್ಲಲು ಅಸಾಧ್ಯವಾಯಿತು. ಈಗ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ (ಕೋಚ್) ರೋಹಿತ್ ಶರ್ಮಾ ನಾಯಕತ್ವದಲ್ಲಿ ಇಂದು ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಪಂದ್ಯ ಗೆಲ್ಲಬೇಕಾಗಿದೆ. ಈಗಾಗಲೇ ಸತತವಾಗಿ 10 ಪಂದ್ಯಗಳನ್ನು ಗೆದ್ದಿರುವ ಭಾರತ ಇವತ್ತಿನ 11ನೆಯ ಪಂದ್ಯ ಗೆದ್ದು ವಿಶ್ವಕಪ್ ತನ್ನದಾಗಿಸಿಕೊಳ್ಳುವ ಮೂಲಕ ಭಾರತದ ಅಸಂಖ್ಯಾತ ಅಭಿಮಾನಿಗಳಿಗೆ ಹರ್ಷವನ್ನು ತಂದು ಕೊಡಲಿ ನಮ್ಮ ಭಾರತ ದೇಶದ ಕ್ರೀಡೆಯಲ್ಲಿ ಹೀಗೆ ಉನ್ನತ ಮಟ್ಟದಲ್ಲಿ ಹೆಸರು ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದರು.
ಈ ಬಾರಿ ನಡೆಯುತ್ತಿರುವ ವಿಶ್ವಕಪ್ ನಲ್ಲಿ ಭಾರತ ತಂಡದ ಪ್ರತಿಯೊಬ್ಬ ಆಟಗಾರರು ಸಹ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಭಾರತ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ಜೂತೆಗೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಜೀ ಸರ್ ಅವರು ಇವತ್ತು ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಪದ್ಯವನ್ನು ರಾಜ್ಯದ ಪ್ರತಿ ಜಿಲ್ಲೆಯ ಕ್ರೀಡಾಂಗಣದಲ್ಲಿ ದೊಡ್ಡ ಪರದೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಪಂದ್ಯವನ್ನು ವೀಕ್ಷಿಸಲು ಆದೇಶ ಮಾಡಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ಹರ್ಷವನ್ನು ಉಂಟು ಮಾಡಿದೆ ಇದರ ಜೊತೆಗೆ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.
(1) ಪ್ರವಾದಿಯ ಅನುಯಾಯಿಗಳು ಎಲ್ಲಿ? ನಿನ್ನ ಒಡ ಹುಟ್ಟಿದವರ ವಿರುದ್ಧವಾದರೂ ಸರಿಯೇ ಸತ್ಯವನ್ನೆ ನುಡಿ ಎಂದ ನನ್ನ ಪ್ರವಾದಿಯ ಅನುಯಾಯಿಗಳು…
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…