ಕಲಬುರಗಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಪಟ್ಟಣದಲ್ಲಿರುವ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳ ಜೊತೆ ಅವರ ವಿಧ್ಯಾಭ್ಯಾಸ ಕುರಿತು ವಿಚಾರಿಸಿ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಮಧ್ಯಾಹ್ನದ ಬಿಸಿ ಊಟ ಸವಿದರು.
ಬಿಸಿ ಊಟ ವಿತರಣೆ ಸಂದರ್ಭದಲ್ಲಿ ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಅಡುಗೆ ಸಿಬ್ವಂದಿ, ಶಿಕ್ಷಕರಿಗೆ ನಿರ್ದೇಶನ ನೀಡಿದರು.
ಅಲ್ಲಿಯೆ ಇದ್ದ ಅಂಗನವಾಡಿ ಕೇಂದ್ರಕ್ಕೂ ಭೇಟಿ ನೀಡಿ ಮಕ್ಕಳು, ಗರ್ಭಿಣಿ-ಬಾಣಂತಿ ಮಹಿಳೆಯರಿಗೆ ನೀಡಲಾಗುತ್ತಿರುವ ಪೌಷ್ಟಿಕ ಅಹಾರದ ಬಗ್ಗೆ ಅಂಗನವಾಡಿ ಕಾರ್ಯರ್ತೆಯಿಂದ ಮಾಹಿತಿ ಪಡೆದುಕೊಂಡರು.
ಕಲಬುರಗಿ ತಹಶೀಲ್ದಾರ ನಾಗಮ್ಮ ಕಟ್ಡಿಮನಿ, ಪಟ್ಟಣ ಉಪ ತಹಶೀಲ್ದಾರ ವೀರಯ್ಯ ಸ್ವಾಮಿ, ಕಂದಾಯ ನಿರೀಕ್ಣಕ ರೇವಣಸಿದ್ದಪ್ಪ, ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಸೇರಿದಂತೆ ಇನ್ನಿತರ ಕಂದಾಯ ಸಿಬ್ಬಂದಿಗಳು ಇದ್ದರು.