ಶಹಾಬಾದ: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಯವರ 45ನೇ ಹುಟ್ಟ ಹಬ್ಬವನ್ನು ಕಾಂಗ್ರೆಸ್ ಪಕ್ಷದಿಂದ ಸರಳವಾಗಿ ಆಚರಿಸಲಾಯಿತು.
ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಲತೀಫ್ ಪಟೇಲ್ ಕುನ್ನೂರ ಮತ್ತು ರಾಜೇಶ ಯನಗುಂಟಿಕರ ಹಾಗೂ ಸೈಯದ್ ಜಹೀರ್ ಅವರ ನೇತೃತ್ವದಲ್ಲಿ ರೈಲ್ವೆ ನಿಲ್ದಾಣದ ಮುಂಬಾಗದಲ್ಲಿ ಬಡ ಮತ್ತು ನಿರ್ಗತಿಕರಿಗೆ ಅನ್ನಸಂತರ್ಪಣೆ ಮಾಡುವದರ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ಬೃಹತ್ ಗಾತ್ರದ ಬರ್ತ್ ಡೇ ಕೇಕ್ ಕತ್ತರಿಸಿ ಬಂದಂತಹ ರೈಲ್ವೆ ಪ್ರಯಾಣಿಕರಿಗೆ ಮತ್ತು ವೃದ್ಧರಿಗೆ ಸಿಹಿ ಹಂಚಿ ಕೈಕುಲುಕಿ ಸಂತಸ ವ್ಯಕ್ತಪಡಿಸಿದ್ದರು.
ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಾ. ಎಮಎ ರಶೀದ ಕೇಕ್ ಕತ್ತರಿಸಿ ಮಾತನಾಡಿ ಅವರು, ಪ್ರಗತಿಗಾಗಿ ಪ್ರಿಯಾಂಕ್ ಖರ್ಗೆ ಎಂಬ ಹೆಸರಿನಿಂದಲೇ ಹೆಸರುವಾಸಿಯಾಗಿ, ಅವರು ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿಯಾಗಿ ಬೆಳೆದಿದ್ದಾರೆ, ರಾಜ್ಯ ಮತ್ತು ರಾಷ್ಟ್ರಕ್ಕೆ ಇಂತಹ ಯುವ ನಾಯಕರು ರಾಜಕಾರಣದಲ್ಲಿ ಹೊರ ಹೊಮ್ಮುತ್ತಿರುವದು ಸಂತೋಷದ ವಿಷಯವಾಗಿದೆ, ಚಿತ್ತಾಪುರ ಕ್ಷೇತ್ರದ ಮತದಾರರು ಜಿಲ್ಲೆಯ ಅಭಿವೃದ್ಧಿಗೆ ಚಿಂತಿಸುವವರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಸರಳ ಸಜ್ಜನಿಕೆಯ ಪ್ರಿಯಾಂಕ್ ಖರ್ಗೆ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಅದು ಅವರಿಗೆ ಇಷ್ಟವೂ ಇಲ್ಲ. ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಅವರ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದರು.
ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ವಿಜಯ ಕುಮಾರ ಮುತ್ತಟ್ಟಿ, ಕಾರ್ಯದರ್ಶಿ ಮೃತ್ಯುಂಜಯ ಹಿರೇಮಠ, ಯುವ ಅಧ್ಯಕ್ಷ ಕಿರಣ ಚಹ್ವಾಣ, ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷ ರಾಜೇಶ ಯನಗುಂಟಿ, ಶರಣಗೌಡ ಪಾಟೀಲ, ಹಾಷಮ ಖಾನ, ಕುಮಾರ ಚಹ್ವಾಣ, ನಗರ ಸಭೆ ಸದಸ್ಯರಾದ ಡಾ. ಅಹ್ಮದ ಪಟೇಲ, ಇನಾಯತ ಖಾನ, ಫಜಲ್ ಪಟೇಲ, ಶರಣು ಪಗಲಾಪೂರ ಹಾಗೂ ಅನವರ ಪಾಶಾ, ಸಾಹೇಬಗೌಡ ಬೋಗುಂಡಿ, ಶಿವರಾಜ ಕೋರಿ, ಕಿರಣ ಕೋರಿ, ಬಸವರಾಜ ಮಯೂರ, ನಾಗೇಂದ್ರ ನಾಟೇಕಾರ, ಬಾಬಾ ಖಾನ್, ವಸಂತ ಕಾಂಬಳೆ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…