ಸ್ಕೂಪ್ಸ್‍ನಿಂದ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ

0
25

ಶಹಾಬಾದ: ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘ ರಾಜ್ಯ ಘಟಕದ ಮಾರ್ಗದರ್ಶನದಲ್ಲಿ ಜಿಲ್ಲಾ ಘಟಕದಿಂದ ಮಕ್ಕಳ ದಿನಾಚರಣೆ ಅಂಗವಾಗಿ ನವೆಂಬರ್ 26 ರಂದು ಬೆಳಗ್ಗೆ 10:40 ಗಂಟೆಗೆ ನಗರದ ಸಹರಾ ಫಂಕ್ಷನ್ ಸಭಾಂಗಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮತ್ತು ಜ್ಯೋತಿ ಸಂಜೀವಿನಿ ಕಾರ್ಡ್ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸ್ಕೂಪ್ಸ್ ಜಿಲ್ಲಾಧ್ಯಕ್ಷೆ ಸಾವಿತ್ರಿ ಪಾಟೀಲ ಹಾಗೂ ತಾಲೂಕ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಜಂಟಿ ಹೇಳಿಕೆ ನೀಡಿರುವ ಅವರು, ಅಂದು ನಡೆಯುವ ಸಮಾರಂಭವನ್ನು ಸಮಾಜ ಸೇವಕಿ ಜಯಶ್ರೀ ಬಸವರಾಜ ಮತ್ತಿಮಡು ಉದ್ಘಾಟಿಸುವರು. ಕಲಬುರಗಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ.ಆರ್.ಸಜ್ಜನ ಆಗಮಿಸಲಿದ್ದಾರೆ. ಸ್ಕೂಪ್ಸ್ ಜಿಲ್ಲಾಧ್ಯಕ್ಷೆ ಸಾವಿತ್ರಿ ಪಾಟಿಲ ಅಧ್ಯಕ್ಷತೆ ವಹಿಸುವರು.

Contact Your\'s Advertisement; 9902492681

ಮುಖ್ಯ ಅತಿಥಿಗಳಾಗಿ ತಾಲೂಕ ತಹಸೀಲ್ದಾರ್ ಗುರುರಾಜ ಸಂಗಾವಿ, ನಗರ ಸಭೆಯ ಪೌರಾಯುಕ್ತೆ ಪಂಕಜಾ ರಾವೂರ, ತಾಲೂಕ ಪಂಚಾಯತ್ ಇಒ ಮಲ್ಲಿನಾಥ ರಾವೂರ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದ್ನೂರ ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here