ಕಲಬುರಗಿ; ಸಂವಿಧಾನದ ಆಶಯಗಳನ್ನು ಈಡೇರಲಿ

ಕಲಬುರಗಿ: ಸಂವಿಧಾನದ ಆಶಯಗಳಾದ ಮಹಿಳೆಯರಿಗೆ ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ ಮತ ನಿರಪೇಕ್ಷತೆಗಳನ್ನು ಜಾರಿಗೊಳಿಸಬೇಕೆಂದು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಶಿವಗಂಗಾ ರುಮ್ಮಾ ಹೇಳಿದರು.

ನಗರದ ಕನ್ನಡ ಭವನದಲ್ಲಿ ಭಾರತೀಯ ಮಹಿಳಾ ಒಕ್ಕೂಟದ(ಓಈIW) ಪ್ರಥಮ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತ ಹಿಂದಿನ ದಿನಗಳಲ್ಲಿಯು ಬುದ್ಧ, ಬಸವ, ಅಂಬೇಡ್ಕರರು ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡುವ “ವಚನ” ಜಗತ್ತಿಗೆ ನೀಡಿ ಅದರಂತೆ ನಡೆದು ಮಹಿಳೆಯರ ಗೌರವ ಹೆಚ್ಚಿಸಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಿಳಾ ಮುಖಂಡರಾದ ಪದ್ಮಾವತಿ ಎನ್ ಮಾಲಿ ಪಾಟೀಲ ಮಾತನಾಡುತ್ತ ನಮ್ಮ ದೇಶ ಚಂದ್ರಯಾನವನ್ನು ಯಶಸ್ವಿಯಾಗಿ ನಡೆಸಿರುವುದು ನಮಗೆ ಹೆಮ್ಮೆಯ ವಿಷಯವಾದರೂ ಜನರ ಹಸಿವೆ, ಅಪೌಷ್ಟಿಕತೆ ನಿವಾರಣೆಯಾಗದೆ ಭಾರತವು 2023 ರಲ್ಲಿ ಜಾಗತಿಕ ಹಸಿವೆಯ ಸೂಚ್ಯಂಕದಲ್ಲಿ 125 ರಾಷ್ಟ್ರಗಳ ಪೈಕಿ 111ನೇ ಸ್ಥಾನ ಗಳಿಸಿರುವುದು ದುರಂತದ ಸಂಗತಿ. ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಕ್ಕಳು ಮತ್ತು ಮಹಿಳೆಯರು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಹಲವು ಅಧ್ಯಯನಗಳಿಂದ ಸಾಬೀತಾಗಿದೆ. ಇದರಿಂದಾಗಿ ಹಲವು ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿವೆ. ಅದಕ್ಕಾಗಿ ಮಹಿಳೆಯರು ಜಾಗೃತರಾಗಿ ಹೋರಾಟ ಮಾಡಿ ತಮ್ಮ ಹಕ್ಕನ್ನು ಪಡೆಯಬೇಕೆಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಡಾ. ಸಂಗೀತಾ ಎಮ. ಶೃಂಗೇರಿ, ಮಹಿಳಾ ಮುಖಂಡರಾದ ಸಾವಿತ್ರಿ ಎಸ್ ಪಾಲ್ಕಿ, ಶಿವಲಿಂಗಮ್ಮ ಪೂಜಾರಿ, ಜಯಶ್ರೀ ಕುಸಾಳೆ, ಮಹಾನಂದ ತುಕ್ಕಾಣಿ, ಚಂದಮ್ಮ ಉದನೂರ, ಮೀನಾಕ್ಷಿ ತೆಲಂಗಿ, ಶಿಲ್ಪಾ ಕ್ಷಿರಸಾಗರ, ಲಕ್ಷ್ಮಿಬಾಯಿ ರಾಜೋಳ, ಸಿದ್ದಮ್ಮ ಪೂಜಾರಿ, ಯಶೋಧ ರಾಠೋಡ್, ವಿಜಯಲಕ್ಷ್ಮಿ ಯಳಸಂಗಿ, ಆರತಿ ಲೆಂಗಟೀಕರ, ನಾಗಮ್ಮ ಮಾಲಿ ಪಾಟೀಲ ಸೇರಿದಂತೆ ಅನೇಕ ಮಹಿಳೆಯರು ಭಾಗವಹಿಸಿದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

36 mins ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

59 mins ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

2 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

2 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

2 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420