ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸುತ್ತವೆ :ಡಾ.ಶರಣು ಹೊನಗೆಜ್ಜೆ

0
13

ಕಲಬುರಗಿ; ಪ್ರಶಸ್ತಿ ಹಾಗೂ ಪುರಸ್ಕಾರಗಳು ವ್ಯಕ್ತಿಯ ಜವಾಬ್ದಾರಿ ಹೆಚ್ಚಿಸುತ್ತವೆ ಎಂದು ಶಿಕ್ಷಣ ಪ್ರೇಮಿ ಡಾ. ಶರಣು ಹೊನಗೆಜ್ಜೆ ಅಭಿಪ್ರಾಯಪಟ್ಟರು.

ಅವರು ನಗರದ ಎಸ್.ಎಮ್. ಪಂಡಿತ ರಂಗ ಮಂದಿರದಲ್ಲಿ ಕರ್ನಾಟಕ ಯುವ ಶಕ್ತಿ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ, ಕರ್ನಾಟಕ ನಾಮಕರಣದ 50ನೇ ವರ್ಷದ ಸುವರ್ಣ ಸಂಭ್ರಮ ಸಂಗೀತೋತ್ಸವ, ಯುವ ಜಾಗೃತಿ ಸಮಾರಂಭ ಕಾರ್ಯಕ್ರಮದಲ್ಲಿ “ರಾಜ್ಯೋತ್ಸವ ಶಕ್ತಿ” ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ಶಿಕ್ಷಣ ಕ್ಷೇತ್ರದಲ್ಲಿ ನಾನು ಮಾಡಿರುವ ಅನನ್ಯ ಸೇವೆಯನ್ನು ಗುರುತಿಸಿ ನನಗೆ ಈ ಪ್ರಶಸ್ತಿ ನೀಡಿದ್ದಾರೆ.

Contact Your\'s Advertisement; 9902492681

ಇದರಿಂದ ಶಿಕ್ಷಣ ಕ್ಷೇತ್ರಕ್ಕೆ ಮುಂದಿನ ದಿನಗಳಲ್ಲಿ ಹೆಚ್ಚಿನ ಕೊಡುಗೆ ನೀಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ತೋನಸನಹಳ್ಳಿಯ ಪೂಜ್ಯ ಅಲ್ಲಮಪ್ರಭು ಮಹಾರಾಜರು, ಸಂಸ್ಥಾಪಕ ಅಧ್ಯಕ್ಷರಾದ ಅವ್ವಣ ಗೌಡ ಎಸ್ ಪಾಟೀಲ್, ಮಠಾಧೀಶರು, ಗಣ್ಯ ವ್ಯಕ್ತಿಗಳು, ಸಾಮಾಜಿಕ ಹೋರಾಟಗಾರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here