ಕಲಬುರಗಿಯಲ್ಲಿ ವಿದೇಶಿಯ ಪ್ರವಾಸಿಗರೊಂದಿಗೆ ವಿಶ್ವಪರಂಪರೆ ಸಪ್ತಾಹ ಆಚರಣೆ

ಕಲಬುರಗಿ: ಇತಿಹಾಸ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಸರಕಾರಿ (ಸ್ವಾಯತ್ತ) ಕಾಲೇಜು ಹಾಗೂ ಇನ್‍ಟ್ಯಾಕ್ ಅಧ್ಯಾಯದ ಸಹಯೋಗದಲ್ಲಿ ಆಯೋಜಿಸಿರುವ ವಿಶ್ವಪರಂಪರೆ ಸಪ್ತಾಹ-2023 ರ ಕಾರ್ಯಕ್ರಮವನ್ನು ವಿದೇಶಿಯ ಪ್ರವಾಶಿಗರೊಂದಿಗೆ ಆಚರಿಸಲಾಯಿತು.

ಲಂಡನ್ ದೇಶದ ವಿ. ಭ್ರೂಸ್ ಅಂಟೋನಿಯಾ ಹಾಗೂ ಮಿ. ಹಯ್ಯಾಲಾರ್ ದಂಪತಿಗಳು ಕಲ್ಯಾಣ ಕರ್ನಾಟಕದ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡುರುವುದರೊಂದಿಗೆ ಕೆಲವು ಶೈಕ್ಷಣಿಕ ಕೇಂದ್ರಗಳಿಗೂ ಭೇಟಿ ನೀಡಿದರು. ಹೈದ್ರಾಬಾದ ಉಸ್ಮಾನಿಯಾ ವಿಶ್ವವಿದ್ಯಾಲಯ ಹಾಗೂ ಕಲಬುರಗಿಯ ಸರಕಾರಿ (ಸ್ವಾಯತ್ತ) ಕಾಲೇಜು ಪ್ರಮುಖವಾಗಿದೆ ಎಂದು ಹೇಳಿದರು. ಮಾರ್ಗದರ್ಶಕರಾದ ಡಾ. ಶಂಭುಲಿಂಗ ಎಸ್. ವಾಣಿಯವರೊಂದಿಗೆ  ಸರಕಾರಿ (ಸ್ವಾಯತ್ತ) ಕಾಲೇಜಿಗೆ ಭೇಟಿ ಕೊಟ್ಟು, ಅದೇ ಸಂದರ್ಭದಲ್ಲಿ ಆಚರಿಸುತ್ತಿರುವ ವಿಶ್ವಪರಂಪರೆ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತದ ಪರಂಪರೆ ಮತ್ತು ವಿಶೇಷತೆಯನ್ನು ಕುರಿತು ಮಾತನಾಡಿದರು.

ಅಂಟೋನಿಯಾ ಮತ್ತು ಹಯ್ಯಾಲಾರ ಇಬ್ಬರು ತಮ್ಮ ಶಿಕ್ಷಣ ಭಾರತದ ಮಿಜೋರಾಂ ಮಿಷಿನರಿ ಶಾಲೆಯಲ್ಲಿ ಮುಗಿಸಿದವರು. ಈ ಇಬ್ಬರ ತಂದೆಯರು ಭಾರತದಲ್ಲಿ ಸೇವೆ ಸಲ್ಲಿಸುತ್ತಿರುವುದರಿಂದ ತಮ್ಮ ಬಾಲ್ಯದ ಬಹುಭಾಗ ಭಾರತದಲ್ಲಿ ಕಳೆದಿದ್ದು, ತಮಗೆ ಹಿಂದಿ ಭಾಷೆ ಮಾತನಾಡಲು ಸ್ವಲ್ಪ ಸ್ವಲ್ಪ  ಬರುತ್ತದೆ ಹಾಗೂ ತಿಳಿಯುತ್ತದೆ ಎಂದು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಭ್ರೂಸ್ ಇಂಗ್ಲೆಂಡನ ಸೇನಾ ವಿಭಾಗದಲ್ಲಿ 16 ವರ್ಷ ಸೇವೆ ಸಲ್ಲಿಸ್ಸಿದ್ದು, ತಾನು ಹಲವು ಹೋರಾಟಗಳಲ್ಲಿ ಭಾಗವಹಿಸಿದ ಅನುಭವಗಳನ್ನು  ವಿದ್ಯಾರ್ಥಿಗಳಿಗೆ ವಿವರಿಸಿದರು.

ಮಿ. ಹಯ್ಯಾತ್ ಲಂಡನ್‍ನ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಮೆಕ್ಯಾನಿಕಲ್ ಇಂಜಿನಿಯರನ್ನಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಲಂಡನ್ನಿನಿಂದ 40 ಕಿ.ಮಿ. ದೂರದಲ್ಲಿರುವ ತನ್ನ ಹಳ್ಳಿಯಲ್ಲಿ ನೆಲೆಸಿದ್ದು, ಅಲ್ಲಿಯ ಸಾಮಾಜಿಕ ಮತ್ತು ಶೈಕ್ಷಣಿಕ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವುದಾಗಿ ಹೇಳಿದರು. ಈ ಇಬ್ಬರ ಪತ್ನಿಯರು ಸಹ ತಾವು ಕಂಡ ಭಾರತದ ಕುರಿತು ಅನುಭವಗಳನ್ನು ಹಂಚಿಕೊಂಡರು.

ಡಾ. ಶಂಭುಲಿಂಗ ಎಸ್. ವಾಣಿ ವಿಶ್ವಪರಂಪರೆ ಸಪ್ತಾಹ-2023 ರ ಆಚರಣೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ನಾವು ಸ್ಥಳಿಯರೊಂದಿಗೆ ಹಲವು ಕಾರ್ಯಕ್ರಮಗಳನ್ನು ಆಚರಿಸುತ್ತಿದ್ದೇವೆ. ಆದರೆ, ವಿದೇಶಿಯ ಪ್ರವಾಸಿಗರೊಂದಿಗೆ ಇಂತಹ ಕಾರ್ಯಕ್ರಮ ಆಚರಿಸುತ್ತಿರುವುದು ವಿಶೇಷವಾಗಿದೆ ಎಂದು ಹೇಳುತ್ತಾ ನಾಲ್ಕು ಜನ ವಿದೇಶಿಯ ಪ್ರವಾಸಿಗರನ್ನು ಪರಿಚಯ ಮಾಡಿಸಿದರು. ಡಾ. ಸವಿತಾ ತಿವಾರಿ ಪ್ರಾಂಶುಪಾಲರು, ಅಧ್ಯಕ್ಷೀಯ ನುಡಿಗಳಲ್ಲಿ ಕಾಲೇಜಿನ ವಿಶೇಷತೆ ಹಾಗೂ ಇಲ್ಲಿಯ ಶಿಕ್ಷಣ ಪದ್ಧತಿಯನ್ನು ಕುರಿತು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ವಿಜಯಕುಮಾರ ಸಾಲಿಮನಿ, ಡಾ. ಡಾ. ರಾಜಕುಮಾರ ಸಲಗರ, ಡಾ.ಮಡಿವಾಳ, ಡಾ. ಸುರೇಶಕುಮಾರ ಮೂಳೆಗಾಂವ, ಇನ್‍ಟ್ಯಾಕ್ ಪದಾಧಿಕಾರಿಗಳು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಭಾಗವಹಿಸಿದರು. ಡಾ. ಬಲಭೀಮ ಸಾಂಗ್ಲಿ ನಿರೂಪಣೆ ಹಾಗೂ ಡಾ. ಟಿ.ವಿ. ಅಡಿವೇಶ ವಂದನಾರ್ಪಣೆ ಮಾಡಿದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

7 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

7 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

7 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

7 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

8 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420