ನಗರಸಭೆ ಅಧಿಕಾರಿಗಳ ಭ್ರಷ್ಟಾಚಾರ ಖಂಡಿಸಿ ಬಿಎಸ್‍ಪಿ ಪ್ರತಿಭಟನೆ

ಶಹಾಬಾದ : ನಗರಸಭೆಯ ಅಧಿಕಾರಿಗಳ ಭ್ರಷ್ಟಾಚಾರವನ್ನು ಖಂಡಿಸಿ ಶಹಾಬಾದ ತಾಲೂಕ ಹೋರಾಟ ಸಮಿತಿ ವತಿಯಿಂದ ನಗರಸಭೆ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮಾತನಾಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸರಿಯಾದ ಸಮಯಕ್ಕೆ ಬರುವುದಿಲ್ಲ, ಸಾರ್ವಜನಿಕರು ಕೆಲಸಕ್ಕಾಗಿ ನಗರಸಭೆಗೆ ಬಂದರೆ ಇಲ್ಲಿನ ಅಧಿಕಾರಿಗಳು ಪ್ರತಿಯೊಂದು ಕೆಲಸಕ್ಕೆ ಲಂಚದ ಬೇಡಿಕೆ ಇಡುತ್ತಾರೆ, ಪೌರಕಾರ್ಮಿಕರ ಬೆಳಗಿನ ಉಪಹಾರ ಶುಚಿತ್ವ ಹಾಗೂ ಪೌಷ್ಟಿಕತೆ ಯಿಂದ ಕೂಡಿರುವುದಿಲ್ಲ, ಕಳಪೆ ಮಟ್ಟದ ಉಪಹಾರ ಸರಬರಾಜು ಮಾಡುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು

ನಗರದಲ್ಲಿ ವಿದ್ಯುತ್ ದುರಸ್ತಿ ಮತ್ತು ಸಲಕರಣೆಗಾಗಿ ಸುಮಾರು 16-18 ತಿಂಗಳಿಂದ ಟೆಂಡರ್ ನೀಡದೆ, ತಿಂಗಳಿಗೆ ಎರಡು ಲಕ್ಷ ರೂಪಾಯಿ ಪಾವತಿಸುತ್ತಿದ್ದಾರೆ. ಆಸ್ತಿ ವರ್ಗಾವಣೆ ಹಾಗೂ ಖಾತಾ ಪ್ರತಿಗಾಗಿ ಸಾವಿರಾರು ರೂಪಾಯಿ ತೆಗೆದುಕೊಂಡು ಸುಮಾರು 5-6 ತಿಂಗಳು ಗಳ ನಂತರ ಪತ್ರಗಳು ಕೊಡುತ್ತಾರೆ.

ನಗರಸಭೆಯ ಕರ್ತವ್ಯ ನಿರ್ವಹಣೆಗಾಗಿ ಅಧಿಕಾರಿಗಳಿಗೆ ಎಲ್ಲೋ ಬೋರ್ಡ್ ಬದಲಾಗಿ, ವೈಟ್ ಬೋರ್ಡ್ 2 ಕಾರುಗಳನ್ನ ಬಾಡಿಗೆಗೆ ಪಡೆದುಕೊಂಡು ಕಾನೂನು ಬಾಹಿರವಾಗಿ ಸಿಕ್ಕಾಪಟ್ಟೆ ಬಿಲ್‍ಗಳನ್ನು ಸೃಷ್ಟಿಸಿದ್ದಾರೆ. ನಗರಸಭೆಗೆ ಹಣವನ್ನು ವಂಚಿಸುವದರ ಜತೆಗೆÉ ವಿಶೇಷವಾಗಿ ಈ ಕಾರಿನ ಮಾಲಕರು ನಗರಸಭೆಯ ಸಿಬ್ಬಂದಿಗಳೇ ಆಗಿರುವದು ಆಶ್ಚರ್ಯಕರ ಸಂಗತಿಯಾಗಿದೆ ಎಂದು ದೂರಿದರು.

ಅಲ್ಲದೇ ಹತ್ತಾರು ಬೇಡಿಕೆಗಳ ಮನವಿ ಪತ್ರವನ್ನು ಮಾನ್ಯ ತಹಶೀಲ್ದಾರ್ ರ ಮುಖಾಂತರ ಮಾನ್ಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.

ಸತ್ಯಾಗ್ರಹದಲ್ಲಿ ಬಿಎಸ್‍ಪಿ ಜಿಲ್ಲಾ ಕಾರ್ಯದರ್ಶಿ ಶೇಖ ಬಾಬು ಗೋವಾ, ಕದಸಂಸ ಜಿಲ್ಲಾ ಸಂ ಬಸವರಾಜ ಮಯೂರ, ಬಿಎಸ್‍ಪಿ ಅಧ್ಯಕ್ಷ ಪುನಿತ್ ಹಳ್ಳಿ, ಮುಖಂಡ ಶಿವಶಾಲ ಪಟ್ಟಣಕರ, ಕಾಂಗ್ರೆಸ್ ನ ಮಹ್ಮದ ಮಸ್ತಾನ, ಕದಸಂಸ ಸಂಚಾಲಕ ಸತೀಶ ಕೋಬಾಳಕರ, ಸಿಐಟಿಯು ನ ಕಾರ್ಯದರ್ಶಿ ನಾಗಪ್ಪ ರಾಯಚೂರಕರ, ಬಿಎಸ್ಪಿ ಕಾರ್ಯದರ್ಶಿ ಆಂಜನೇಯ ಕುಸಾಳೆ, ನರಸಿಂಹಲು ರಾಯಚೂರಕರ, ಮಹೇಬೂಬ ಗೋಗಿ, ಅ. ಜಬ್ಬಾರ್ ಇದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420